ಬ್ರೇಕಿಂಗ್ ನ್ಯೂಸ್
02-11-20 11:30 am Headline Karnataka News Network ದೇಶ - ವಿದೇಶ
ಶ್ರೀನಗರ, ನವೆಂಬರ್ 02: ಹಿಜ್ಬುಲ್ ಮುಜಾಹಿದೀನ್ ಉಗ್ರ ಸಂಘಟನೆಯ ಆಪರೇಶನಲ್ ಚೀಫ್ ಆಗಿದ್ದ ಡಾ.ಸೈಫುಲ್ಲಾ ಸೇನಾ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.
ಜಮ್ಮು ಕಾಶ್ಮೀರದ ಶ್ರೀನಗರದ ರಂಗ್ರೆತ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಈ ಕಾರ್ಯಾಚರಣೆ ನಡೆಸಿದ್ದು, ಹಿಜ್ಬುಲ್ ಮುಜಾಹಿದೀನ್ ಸಂಘಟನೆಯ ಕಮಾಂಡರ್ ಆಗಿದ್ದ ಸೈಫುಲ್ಲಾ ಹತನಾಗಿದ್ದಾನೆ. ಈ ವೇಳೆ ಆತನ ಜೊತೆಗಿದ್ದ ಉಗ್ರನನ್ನು ಭದ್ರತಾ ಪಡೆಗಳು ಜೀವಂತವಾಗಿ ವಶಕ್ಕೆ ಪಡೆದಿವೆ ಎಂದು ಐಜಿಪಿ ವಿಜಯ ಕುಮಾರ್ ಹೇಳಿದ್ದಾರೆ.
ಜಮ್ಮು ಕಾಶ್ಮೀರದ ಪೊಲೀಸರು ಮತ್ತು ಸಿಆರ್ ಪಿಎಫ್ ಪಡೆಗಳು ರಂಗ್ರೆತ್ ಏರಿಯಾದಲ್ಲಿ ಮೂವರು ಉಗ್ರರು ಅಡಗಿಕೊಂಡಿರುವುದನ್ನು ಪತ್ತೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಜಂಟಿ ಕಾರ್ಯಾಚರಣೆ ನಡೆಸಿದ್ದು ಒಬ್ಬಾತ ಜೀವಂತ ಸೆರೆಸಿಕ್ಕಿದ್ದಾನೆ. ಈ ವೇಳೆ ಸೈಫುಲ್ಲಾ ಮಿರ್ ಎಂಬಾತ ಸಾವನ್ನಪ್ಪಿದ್ದಾನೆ.


ಸೈಫುಲ್ಲಾ ಮಿರ್ ಗಾಝಿ ಹೈದರ್ ಅಲಿಯಾಸ್ ಡಾಕ್ಟರ್ ಸಾಹಬ್ 2014ರಲ್ಲಿ ಹಿಜ್ಬುಲ್ ಉಗ್ರ ಸಂಘಟನೆ ಸೇರಿದ್ದ. ಪುಲ್ವಾಮಾ ಜಿಲ್ಲೆಯ ಮಲಾಂಗ್ ಪೋರಾ ನಿವಾಸಿಯಾಗಿರುವ ಸೈಫುಲ್ಲಾನನ್ನು ರಿಯಾಜ್ ನೈಕು ಎಂಬ ಉಗ್ರ ಹಿಜ್ಬುಲ್ ಸಂಘಟನೆ ಸೇರ್ಪಡೆ ಮಾಡಿದ್ದ. ಅಲ್ಲದೆ, ಸೈಫುಲ್ಲಾನಿಗೆ ಗಾಝಿ ಹೈದರ್ ಎಂದು ನಾಮಕರಣ ಮಾಡಿದ್ದ. ಹಿಜ್ಬುಲ್ ಸಂಘಟನೆಯ ಕಮಾಂಡರ್ ಆಗಿದ್ದ ರಿಯಾಜ್ ನೈಕು ಕಳೆದ ಮೇ ತಿಂಗಳಲ್ಲಿ ಭದ್ರತಾ ಪಡೆಗಳ ಗುಂಡಿಗೆ ಬಲಿಯಾಗಿದ್ದ. ಆಬಳಿಕ ಸೈಫುಲ್ಲಾ ಕಮಾಂಡರ್ ಆಗಿ ಸಂಘಟನೆಯನ್ನು ಮುನ್ನಡೆಸುತ್ತಿದ್ದ.
ಜಮ್ಮು ಕಾಶ್ಮೀರದ ಮೋಸ್ಟ್ ವಾಂಟೆಡ್ ಲಿಸ್ಟ್ ನಲ್ಲಿದ್ದ ಹತ್ತು ಉಗ್ರರಲ್ಲಿ ಸೈಫುಲ್ಲಾ ಒಬ್ಬ. ಭದ್ರತಾ ಪಡೆಗಳು ಇತ್ತೀಚೆಗಷ್ಟೇ ಮೋಸ್ಟ್ ವಾಂಟೆಡ್ ಉಗ್ರರ ಲಿಸ್ಟ್ ರೆಡಿ ಮಾಡಿತ್ತು. ಜಮ್ಮು ಕಾಶ್ಮೀರದಲ್ಲಿ ನಡೆದ ಹಲವು ಉಗ್ರರ ದಾಳಿ ಪ್ರಕರಣಗಳಲ್ಲಿ ಸೈಫುಲ್ಲಾ ಮಾಸ್ಟರ್ ಮೈಂಡ್ ಆಗಿದ್ದ. ಈತನನ್ನು ಕೊಂದಿದ್ದಕ್ಕೆ ಡಿಜಿಪಿ ದಿಲ್ ಬಾಘ್, ಭದ್ರತಾ ಪಡೆ ಮತ್ತು ಪೊಲೀಸರನ್ನು ಅಭಿನಂದಿಸಿದ್ದಾರೆ.
Hizbul Mujahideen militant commander Saifullah Mir was killed in an encounter with security forces on the outskirts of Srinagar district Sunday.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm