ಮುಂಬೈನಲ್ಲಿ ನಡುರಾತ್ರಿ ಹೊತ್ತಿ ಉರಿದ ಬಸ್ ; ಗಾಢ ನಿದ್ದೆಯಲ್ಲಿದ್ದ 26 ಪ್ರಯಾಣಿಕರು ಸಜೀವ ದಹನ ! 

01-07-23 01:42 pm       HK News Desk   ದೇಶ - ವಿದೇಶ

ನಸುಕಿನಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್‌ ಡಿವೈಡರ್ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡಿದ್ದು 26 ಮಂದಿ ಸಜೀವ ದಹನಗೊಂಡ ದುರಂತ ಘಟನೆ ಮುಂಬೈ-ನಾಗ್ಪುರ ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದಿದೆ. 

ಮುಂಬೈ, ಜುಲೈ 1: ನಸುಕಿನಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್‌ ಡಿವೈಡರ್ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡಿದ್ದು 26 ಮಂದಿ ಸಜೀವ ದಹನಗೊಂಡ ದುರಂತ ಘಟನೆ ಮುಂಬೈ-ನಾಗ್ಪುರ ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದಿದೆ. 

ಬುಲ್ಧಾನ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. 33 ಜನರು ಪ್ರಯಾಣಿಸುತ್ತಿದ್ದ ಬಸ್‌ ಯವತ್ಮಾಲ್ ನಿಂದ ಪುಣೆಗೆ ತೆರಳುತ್ತಿದ್ದ ವೇಳೆ ಎಕ್ಸ್‌ಪ್ರೆಸ್‌ವೇಯಲ್ಲಿ ಬಸ್ ಡಿವೈಡರ್ ಡಿಕ್ಕಿಯಾಗಿ ಟೈರ್ ಒಡೆದಿದೆ. ಕೂಡಲೇ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ನಡು ರಾತ್ರಿಯಾಗಿದ್ದರಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರು ಮಲಗಿದ್ದರು. ಬಸ್ ಹೊತ್ತಿ ಉರಿದಿದ್ದು ಹೊರ ಬರಲಾಗದೇ 26 ಮಂದಿ ಸಜೀವ ದಹನವಾಗಿದ್ದಾರೆ ಎನ್ನಲಾಗಿದೆ. 

25 people dead as bus catches fire on Samruddhi Mahamarg Expressway - India  Today

26 Dead as Bus Catches Fire on Mumbai-Nagpur Expressway, Probe Ordered -  The Chenab Times

ಘಟನೆಯಲ್ಲಿ ಬಸ್ಸಿನ ಚಾಲಕ ಸುರಕ್ಷಿತವಾಗಿ ಪಾರಾಗಿದ್ದಾರೆ. 6-8 ಜನ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಬುಲ್ಧಾನ ಎಸ್ಪಿ ಸುನೀಲ್ ಕಡಸನೆ ಹೇಳಿದ್ದಾರೆ. ದುರ್ಘಟನೆಯಲ್ಲಿ ಪಾರಾದ ಪ್ರಯಾಣಿಕರೊಬ್ಬರು ಸಂದರ್ಭವನ್ನು ವಿವರಿಸಿದ್ದು ಹೀಗೆ. ಬಸ್​ಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ನಾವು ಎರಡು- ಮೂರು ಜನ ಬಸ್​ ಕಿಟಕಿ ಒಡೆದು, ಹೊರಗೆ ಹಾರಿದ್ದೇವೆ ಎಂದಿದ್ದಾರೆ. ಅಂದಹಾಗೇ, ಈ ಬಸ್​ ನಾಗ್ಪುರದಿಂದ ಪುಣೆಗೆ ಹೋಗುತ್ತಿತ್ತು. 33 ಪ್ರಯಾಣಿಕರು ಇದ್ದರು ಎನ್ನಲಾಗುತ್ತಿದ್ದ ಮೂರ್ನಾಲ್ಕು ಮಂದಿ ಮಾತ್ರ ಬದುಕಿ ಉಳಿದಿದ್ದಾರೆ.

 As many as 26 people died and several others were injured after a bus caught fire on the Samruddhi Mahamarg Expressway in Maharashtra. The bus was travelling from Yavatmal to Pune. The incident happened around 2 am on Saturday in Buldhana district of the state, news agency ANI reported.