ಬ್ರೇಕಿಂಗ್ ನ್ಯೂಸ್
01-07-23 01:42 pm HK News Desk ದೇಶ - ವಿದೇಶ
ಮುಂಬೈ, ಜುಲೈ 1: ನಸುಕಿನಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್ ಡಿವೈಡರ್ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡಿದ್ದು 26 ಮಂದಿ ಸಜೀವ ದಹನಗೊಂಡ ದುರಂತ ಘಟನೆ ಮುಂಬೈ-ನಾಗ್ಪುರ ಎಕ್ಸ್ಪ್ರೆಸ್ವೇಯಲ್ಲಿ ನಡೆದಿದೆ.
ಬುಲ್ಧಾನ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. 33 ಜನರು ಪ್ರಯಾಣಿಸುತ್ತಿದ್ದ ಬಸ್ ಯವತ್ಮಾಲ್ ನಿಂದ ಪುಣೆಗೆ ತೆರಳುತ್ತಿದ್ದ ವೇಳೆ ಎಕ್ಸ್ಪ್ರೆಸ್ವೇಯಲ್ಲಿ ಬಸ್ ಡಿವೈಡರ್ ಡಿಕ್ಕಿಯಾಗಿ ಟೈರ್ ಒಡೆದಿದೆ. ಕೂಡಲೇ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ನಡು ರಾತ್ರಿಯಾಗಿದ್ದರಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರು ಮಲಗಿದ್ದರು. ಬಸ್ ಹೊತ್ತಿ ಉರಿದಿದ್ದು ಹೊರ ಬರಲಾಗದೇ 26 ಮಂದಿ ಸಜೀವ ದಹನವಾಗಿದ್ದಾರೆ ಎನ್ನಲಾಗಿದೆ.


ಘಟನೆಯಲ್ಲಿ ಬಸ್ಸಿನ ಚಾಲಕ ಸುರಕ್ಷಿತವಾಗಿ ಪಾರಾಗಿದ್ದಾರೆ. 6-8 ಜನ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಬುಲ್ಧಾನ ಎಸ್ಪಿ ಸುನೀಲ್ ಕಡಸನೆ ಹೇಳಿದ್ದಾರೆ. ದುರ್ಘಟನೆಯಲ್ಲಿ ಪಾರಾದ ಪ್ರಯಾಣಿಕರೊಬ್ಬರು ಸಂದರ್ಭವನ್ನು ವಿವರಿಸಿದ್ದು ಹೀಗೆ. ಬಸ್ಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ನಾವು ಎರಡು- ಮೂರು ಜನ ಬಸ್ ಕಿಟಕಿ ಒಡೆದು, ಹೊರಗೆ ಹಾರಿದ್ದೇವೆ ಎಂದಿದ್ದಾರೆ. ಅಂದಹಾಗೇ, ಈ ಬಸ್ ನಾಗ್ಪುರದಿಂದ ಪುಣೆಗೆ ಹೋಗುತ್ತಿತ್ತು. 33 ಪ್ರಯಾಣಿಕರು ಇದ್ದರು ಎನ್ನಲಾಗುತ್ತಿದ್ದ ಮೂರ್ನಾಲ್ಕು ಮಂದಿ ಮಾತ್ರ ಬದುಕಿ ಉಳಿದಿದ್ದಾರೆ.
As many as 26 people died and several others were injured after a bus caught fire on the Samruddhi Mahamarg Expressway in Maharashtra. The bus was travelling from Yavatmal to Pune. The incident happened around 2 am on Saturday in Buldhana district of the state, news agency ANI reported.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm