ಬ್ರೇಕಿಂಗ್ ನ್ಯೂಸ್
02-07-23 10:49 pm HK News Desk ದೇಶ - ವಿದೇಶ
ಚೆನ್ನೈ, ಜುಲೈ 2: ತಿರುಪತಿ ಬಳಿಯ ತಾಲಕೋಣ ಜಲಪಾತಕ್ಕೆ ಟೂರ್ ಹೋಗಿದ್ದ ಚೆನ್ನೈನಲ್ಲಿ ಎಂಎಸ್ಸಿ ಓದುತ್ತಿದ್ದ ಮಂಗಳೂರು ಮೂಲದ ವಿದ್ಯಾರ್ಥಿಯೊಬ್ಬ ರೀಲ್ಸ್ ಮಾಡಲು ಹೋಗಿ ತನ್ನ ಜೀವವನ್ನೇ ಕಳಕೊಂಡಿದ್ದಾನೆ. ಚೆನ್ನೈನ ರಾಜೀವ್ ಗಾಂಧಿ ಕಾಲೇಜಿನಲ್ಲಿ ಎಂಎಸ್ಸಿ ಓದುತ್ತಿದ್ದ ಸುಮಂತ್(22) ಮೃತ ವಿದ್ಯಾರ್ಥಿ.
ಸುಮಂತ್ ತನ್ನ ಸ್ನೇಹಿತರೊಂದಿಗೆ ತಿರುಪತಿ ಬಳಿಯ ತಲಕೋನಾ ಜಲಪಾತಕ್ಕೆ ತೆರಳಿದ್ದ. ಶುಕ್ರವಾರ ಸಂಜೆಯ ವೇಳೆಗೆ ನೀರಾಟ ಆಡುತ್ತಿದ್ದ ಸುಮಂತ್ ನೀರಿಗೆ ಜಿಗಿಯಲು ಹೋಗಿದ್ದ. ಅಲ್ಲದೆ, ತಾನು ನೀರಿಗೆ ಹಾರುವುದನ್ನು Instagram ರೀಲ್ಗಾಗಿ ವೀಡಿಯೊ ಮಾಡುವಂತೆ ಸ್ನೇಹಿತರಿಗೆ ಹೇಳಿದ್ದ ಎನ್ನಲಾಗಿದೆ. ಅದರಂತೆ ಆತನ ಸ್ನೇಹಿತರು ಕ್ಯಾಮರಾದಲ್ಲಿ ವಿಡಿಯೋ ಮಾಡುತ್ತಿದ್ದರೆ, ಸುಮಂತ್ ಬಂಡೆಯ ಮೇಲಿನಿಂದ ಹತ್ತಡಿ ಆಳದ ನೀರಿಗೆ ಹಾರಿದ್ದಾರೆ.
ಜಲಪಾತಕ್ಕೆ ಹಾರಿದ ನಂತರ ಸುಮಂತ್ ನೀರಿನಿಂದ ಮೇಲಕ್ಕೆ ಬಂದಿರಲಿಲ್ಲ. ಭಯಗೊಂಡ ಸ್ನೇಹಿತರು ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಬಳಿಕ ರಕ್ಷಣಾ ತಂಡ ಸ್ಥಳಕ್ಕೆ ಆಗಮಿಸಿ ರಾತ್ರಿ ವೇಳೆಗೆ ಸುಮಂತ್ ಶವ ನೀರಿನಾಳದಲ್ಲಿ ಬಂಡೆಗಳ ಎಡೆಯಲ್ಲಿ ಸಿಲುಕಿದ್ದನ್ನು ಪತ್ತೆ ಮಾಡಿದ್ದಾರೆ. ಶನಿವಾರ ಬೆಳಗ್ಗೆ ಸುಮಂತ್ ಮೃತದೇಹವನ್ನು ನೀರಿನಿಂದ ಮೇಲಕ್ಕೆ ಎತ್ತಲಾಗಿದೆ. ಆತನ ತಲೆ ಎರಡು ಬಂಡೆ ಕಲ್ಲುಗಳ ನಡುವೆ ಸಿಲುಕಿಕೊಂಡಿದ್ದರಿಂದ ಮೇಲೆ ಬರಲಾಗದೆ ಸಿಕ್ಕಿಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.
22 year old youth from Mangalore dies at Talakona falls in Tirupati. The deceased has been identified as Sumanth. The incident took place while shooting reels for Instagram.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
20-04-26 09:35 pm
HK News Staffer
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm