ಬ್ರೇಕಿಂಗ್ ನ್ಯೂಸ್
05-08-20 06:23 pm Headline Karnataka News Network ದೇಶ - ವಿದೇಶ
ಮುಂಬೈ, ಆಗಸ್ಟ್ 5: ಮುಂಬೈ ಮಹಾನಗರ ಭಾರೀ ಮಳೆಗೆ ತತ್ತರಿಸಿದೆ. ಮಹಾರಾಷ್ಟ್ರ ಕರಾವಳಿಯಲ್ಲಿ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು ಮುಂಬೈ ಮತ್ತು ಪುಣೆ ಮಳೆ, ಬಿರುಗಾಳಿಗೆ ಅಕ್ಷರಶಃ ನಲುಗಿದೆ.
2005 ರ ಬಳಿಕ ಇದೇ ಮೊದಲ ಬಾರಿಗೆ ಈ ಪರಿ ಮಳೆಯಾಗುತ್ತಿದೆ ಎನ್ನಲಾಗುತ್ತಿದೆ. ಇಂದು ರಾತ್ರಿ ಇನ್ನಷ್ಟು ಮಳೆ ಮತ್ತು ಬಿರುಗಾಳಿ ಎದುರಾಗುವ ಬಗ್ಗೆ ಸೂಚನೆ ನೀಡಲಾಗಿದೆ. ಗಂಟೆಗೆ 107 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಅಲ್ಲದೆ, ಗಂಟೆಗೆ ಮೂರರಿಂದ ನಾಲ್ಕು ಸೆಂಟಿ ಮೀಟರಿನಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಯಾರು ಕೂಡ ಮನೆಯಿಂದ ಹೊರಬರಬೇಡಿ ಎಂದು ಮುಂಬೈ ಪೊಲೀಸ್ ಜನರಲ್ಲಿ ಮನವಿ ಮಾಡಿದೆ.



ಮುಂಬೈ ಮಹಾನಗರದ ನರನಾಡಿಯಂತಿದ್ದ ರೈಲು ಯಾನವನ್ನು ರದ್ದು ಪಡಿಸಲಾಗಿದ್ದರೆ, ಬಸ್, ವಿಮಾನ ಸಂಚಾರವೂ ಸ್ತಬ್ಧವಾಗಿದೆ. ಮುಂಬೈ ಏರ್ಪೋರ್ಟ್ ನಲ್ಲಿ ನಿಲ್ಲಿಸಲಾಗಿದ್ದ ಮೂರು ಕ್ರೇನ್ ಗಳು ಬಿರುಗಾಳಿಗೆ ಉರುಳಿ ಬಿದ್ದಿದ್ದು ಸಾವು ನೋವಿನ ಬಗ್ಗೆ ತಿಳಿದುಬಂದಿಲ್ಲ. ಇನ್ನು ತಗ್ಗು ಪ್ರದೇಶಗಳೆಲ್ಲ ನೀರಿನಿಂದ ಆವೃತ ಆಗಿದ್ದು ಸಂತ್ರಸ್ತರ ರಕ್ಷಣೆಗೆ ಎನ್ ಡಿ ಆರ್ ಎಫ್ ಮುಂದಾಗಿದೆ.

ಇದೇ ವೇಳೆ, ಮುಂಬೈನ ಪರಿಸ್ಥಿತಿ ಬಗ್ಗೆ ತಿಳಿದುಕೊಳ್ಳಲು ಪ್ರಧಾನಿ ಮೋದಿ, ಸಿಎಂ ಉದ್ಧವ್ ಠಾಕ್ರೆಗೆ ಕರೆ ಮಾಡಿದ್ದಾರೆ. ರಕ್ಷಣಾ ಪಡೆ ಸನ್ನದ್ದ ಇರಿಸಲು ಸೂಚಿಸಿದ್ದು ಹೆಚ್ಚಿನ ನೆರವಿಗೆ ಸಿದ್ಧ ಇರುವುದಾಗಿ ಮೋದಿ ಹೇಳಿದ್ದಾರೆ.
ಮಹಾನಗರ ವ್ಯಾಪ್ತಿಯಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದು ಹಲವರು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಇದೇ ವೇಳೆ 35 ವರ್ಷದ ಮಹಿಳೆಯೊಬ್ಬರು ಇಬ್ಬರು ಮಕ್ಕಳನ್ನು ಹಿಡಿದು ರಸ್ತೆ ದಾಟುತ್ತಿದ್ದಾಗ ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.

ರಾತ್ರಿ ವೇಳೆ ಬಿರುಗಾಳಿ ಮತ್ತು ಭಾರೀ ಮಳೆಯಾಗುವ ಕಾರಣ ಯಾರೂ ಮನೆಯಿಂದ ಹೊರಬರದಂತೆ ಸಚಿವ ಆದಿತ್ಯ ಠಾಕ್ರೆ ಮನವಿ ಮಾಡಿದ್ದಾರೆ. ವಿಶೇಷವಾಗಿ ಮಾಧ್ಯಮ ಮಂದಿಯೂ ತಮ್ಮ ಕ್ಷೇಮವನ್ನು ನೋಡಿಕೊಂಡು ಮುಂದುವರೆಯಿರಿ. ಅಪಾಯ ಇರುವ ಕಡೆ ತೆರಳದಿರಿ ಎಂದು ಟ್ವೀಟ್ ಮಾಡಿ ಕೇಳಿಕೊಂಡಿದ್ದಾರೆ. ಮುನ್ಸೂಚನೆ ಪ್ರಕಾರ, ಇಂದು ರಾತ್ರಿಯಿಂದ ಬೆಳಗ್ಗಿನ ವರೆಗೆ ಮುಂಬೈನ ಜನ ಕಂಡು ಕೇಳರಿಯದ ರೀತಿ ಮಳೆಯಾಗಲಿದೆ ಎನ್ನಲಾಗ್ತಿದೆ. ಸೋಮವಾರ ಬೆಳಗ್ಗಿನಿಂದ ದಿಢೀರ್ ಆಗಿ ಮಳೆ ಸುರಿಯತೊಡಗಿದ್ದು ಚಂಡಮಾರುತ ಅಪ್ಪಳಿಸಿದ ರೀತಿ ಮಳೆ ಗಾಳಿ ಮುಂಬೈಗೆ ಮುಂಬೈಯನ್ನೇ ತತ್ತರಿಸುವಂತೆ ಮಾಡಿದೆ.. ತುರ್ತು ಅಗತ್ಯಕ್ಕಾಗಿ ಎನ್ ಡಿಆರ್ ಎಫ್ ತಂಡಗಳನ್ನು ಆಸುಪಾಸಿನ ರಾಯಗಢ, ಸಾಂಗ್ಲಿ , ಸೋಲಾಪುರ ಹೀಗೆ ಅಲ್ಲಲ್ಲಿ ಹೆಚ್ಚುವರಿ ಆಗಿ ನಿಯೋಜನೆ ಮಾಡಲಾಗಿದೆ.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm