ಬ್ರೇಕಿಂಗ್ ನ್ಯೂಸ್
03-11-20 10:08 am Headline Karnataka News Network ದೇಶ - ವಿದೇಶ
ಕೋಲ್ಕತ್ತಾ, ನವೆಂಬರ್.03: ಉಗ್ರ ಸಂಘಟನೆ ಅಲ್-ಖೈದಾ ಜತೆ ನಂಟು ಹೊಂದಿದ್ದ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಅಬ್ದುಲ್ ಮೊಮಿನ್ ಮಂಡಲ್ ಎಂಬಾತನ ಬಂಧನ ಮಾಡಿದೆ. ಪಶ್ಚಿಮ ಬಂಗಾಳದ ಮುಷಿರಾಬಾದ್ ನಿವಾಸಿಯ ಬಂಧನವಾಗಿದ್ದು ಪಶ್ಚಿಮ ಬಂಗಾಳ ಮತ್ತು ಕೇರಳದಲ್ಲಿ ಉಗ್ರ ಸಂಘಟನೆ ನಂಟು ಹೊಂದಿದ್ದ ಎನ್ನಲಾಗಿದೆ.
ಆಗಸ್ಟ್ ತಿಂಗಳಿನಿಂದಲೇ ಎನ್ಐಎಗೆ ಇವನ ಚಟುವಟಿಕೆ ಮೇಲೆ ನಿಗಾ ಇತ್ತು. ಹತ್ತಕ್ಕೂ ಅಧಿಕ ಮಂದಿ ಜಿಹಾದಿ ಹೆಸರಿನಲ್ಲಿ ಅಲ್-ಖೈದಾ ಪರ ಕೆಲಸ ಮಾಡುತ್ತಿದ್ದು ವಿಧ್ವಂಸಕ ಕೃತ್ಯಕ್ಕೆ ಸಿದ್ಧರಾಗುತ್ತಿದ್ದಾರೆ ಎಂಬ ಮಾಹಿತಿಯಿತ್ತು. ದೆಹಲಿ, ಪಶ್ಚಿಮ ಬಂಗಾಳ ಮತ್ತು ಕೇರಳವನ್ನು ಟಾರ್ಗೆಟ್ ಮಾಡಿಕೊಂಡಿದ್ದರು.
ರಾಯಪುರದ ಮದರಸಾ ಒಂದರಲ್ಲಿ ಶಿಕ್ಷಕನಾಗಿ ಕೆಲಸ ಮಾಡಿಕೊಂಡಿರುವ ಅಬ್ದುಲ್ ಮೊಮಿನ್ ಮಂಡಲ್ ಅಲ್ ಖೈದಾ ಜತೆಗೆ ನಂಟು ಹೊಂದಿ ಉಗ್ರ ಸಂಘಟನೆಯ ಸಭೆಯಲ್ಲಿ ಭಾಗವಹಿಸಿರುವುದು ಬಹಿರಂಗವಾಗಿದೆ.
ಅನೇಕ ಜನರನ್ನು ಉಗ್ರ ಸಂಘಟನೆ ಕಡೆ ಸೆಳೆಯುವ ಕೆಲಸ ಮಾಡುತ್ತಿದ್ದ. ಈತನ ಮನೆ ಮೇಲೆಯೂ ದಾಳಿ ಮಾಡಲಾಗಿದ್ದು ಡಿಜಿಟಲ್ ಉಪಕರಣಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ದಾಳಿ ನಡೆಸಿದ ವೇಳೆ ಡಿಜಿಟಲ್ ಉಪಕರಣ, ಪ್ರಮುಖ ತಾಣಗಳು, ಸ್ಥಳಗಳ ಮ್ಯಾಪ್, ದಾಖಲೆಗಳು, ಜಿಹಾದಿ ಸಾಹಿತ್ಯ, ದೇಶೀ ನಿರ್ಮಿತ ಶಸ್ತ್ರಾಸ್ತ್ರ, ಸ್ಫೋಟಕ ತಯಾರಿಸುವ ವಿಧಾನದ ಪುಸ್ತಕಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅಲ್-ಖೈದಾ ಜತೆಗಿನ ನಂಟಿನ ಪ್ರಕರಣಕ್ಕೆ ಸಂಬಂಧಿಸಿ ಇಲ್ಲಿವರೆಗೆ ಒಟ್ಟು ಹನ್ನೊಂದು ಜನರನ್ನು ಬಂಧಿಸಲಾಗಿದ್ದು ಪಶ್ಚಿಮ ಬಂಗಾಳ ಮತ್ತು ಕೇರಳದಲ್ಲಿ ನಿರಂತರ ಕಾರ್ಯಾಚಾರಣೆ ನಡೆದಿದೆ. ವಿಚಾರಣೆ ನಂತರ ಮತ್ತಷ್ಟು ಸ್ಫೋಟಕ ಮಾಹಿತಿ ಹೊರಬಂದರೆ ಅಚ್ಚರಿ ಇಲ್ಲ.
National Investigation Agency (NIA) on Sunday arrested a madrasa teacher from Murshidabad who was allegedly part of an al-Qaeda module based in West Bengal and Kerala, conspiring to carry out terrorist strikes at different locations in the country, including Delhi, West Bengal and Kerala.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm