ಬ್ರೇಕಿಂಗ್ ನ್ಯೂಸ್
03-11-20 10:08 am Headline Karnataka News Network ದೇಶ - ವಿದೇಶ
ಕೋಲ್ಕತ್ತಾ, ನವೆಂಬರ್.03: ಉಗ್ರ ಸಂಘಟನೆ ಅಲ್-ಖೈದಾ ಜತೆ ನಂಟು ಹೊಂದಿದ್ದ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಅಬ್ದುಲ್ ಮೊಮಿನ್ ಮಂಡಲ್ ಎಂಬಾತನ ಬಂಧನ ಮಾಡಿದೆ. ಪಶ್ಚಿಮ ಬಂಗಾಳದ ಮುಷಿರಾಬಾದ್ ನಿವಾಸಿಯ ಬಂಧನವಾಗಿದ್ದು ಪಶ್ಚಿಮ ಬಂಗಾಳ ಮತ್ತು ಕೇರಳದಲ್ಲಿ ಉಗ್ರ ಸಂಘಟನೆ ನಂಟು ಹೊಂದಿದ್ದ ಎನ್ನಲಾಗಿದೆ.
ಆಗಸ್ಟ್ ತಿಂಗಳಿನಿಂದಲೇ ಎನ್ಐಎಗೆ ಇವನ ಚಟುವಟಿಕೆ ಮೇಲೆ ನಿಗಾ ಇತ್ತು. ಹತ್ತಕ್ಕೂ ಅಧಿಕ ಮಂದಿ ಜಿಹಾದಿ ಹೆಸರಿನಲ್ಲಿ ಅಲ್-ಖೈದಾ ಪರ ಕೆಲಸ ಮಾಡುತ್ತಿದ್ದು ವಿಧ್ವಂಸಕ ಕೃತ್ಯಕ್ಕೆ ಸಿದ್ಧರಾಗುತ್ತಿದ್ದಾರೆ ಎಂಬ ಮಾಹಿತಿಯಿತ್ತು. ದೆಹಲಿ, ಪಶ್ಚಿಮ ಬಂಗಾಳ ಮತ್ತು ಕೇರಳವನ್ನು ಟಾರ್ಗೆಟ್ ಮಾಡಿಕೊಂಡಿದ್ದರು.
ರಾಯಪುರದ ಮದರಸಾ ಒಂದರಲ್ಲಿ ಶಿಕ್ಷಕನಾಗಿ ಕೆಲಸ ಮಾಡಿಕೊಂಡಿರುವ ಅಬ್ದುಲ್ ಮೊಮಿನ್ ಮಂಡಲ್ ಅಲ್ ಖೈದಾ ಜತೆಗೆ ನಂಟು ಹೊಂದಿ ಉಗ್ರ ಸಂಘಟನೆಯ ಸಭೆಯಲ್ಲಿ ಭಾಗವಹಿಸಿರುವುದು ಬಹಿರಂಗವಾಗಿದೆ.
ಅನೇಕ ಜನರನ್ನು ಉಗ್ರ ಸಂಘಟನೆ ಕಡೆ ಸೆಳೆಯುವ ಕೆಲಸ ಮಾಡುತ್ತಿದ್ದ. ಈತನ ಮನೆ ಮೇಲೆಯೂ ದಾಳಿ ಮಾಡಲಾಗಿದ್ದು ಡಿಜಿಟಲ್ ಉಪಕರಣಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ದಾಳಿ ನಡೆಸಿದ ವೇಳೆ ಡಿಜಿಟಲ್ ಉಪಕರಣ, ಪ್ರಮುಖ ತಾಣಗಳು, ಸ್ಥಳಗಳ ಮ್ಯಾಪ್, ದಾಖಲೆಗಳು, ಜಿಹಾದಿ ಸಾಹಿತ್ಯ, ದೇಶೀ ನಿರ್ಮಿತ ಶಸ್ತ್ರಾಸ್ತ್ರ, ಸ್ಫೋಟಕ ತಯಾರಿಸುವ ವಿಧಾನದ ಪುಸ್ತಕಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅಲ್-ಖೈದಾ ಜತೆಗಿನ ನಂಟಿನ ಪ್ರಕರಣಕ್ಕೆ ಸಂಬಂಧಿಸಿ ಇಲ್ಲಿವರೆಗೆ ಒಟ್ಟು ಹನ್ನೊಂದು ಜನರನ್ನು ಬಂಧಿಸಲಾಗಿದ್ದು ಪಶ್ಚಿಮ ಬಂಗಾಳ ಮತ್ತು ಕೇರಳದಲ್ಲಿ ನಿರಂತರ ಕಾರ್ಯಾಚಾರಣೆ ನಡೆದಿದೆ. ವಿಚಾರಣೆ ನಂತರ ಮತ್ತಷ್ಟು ಸ್ಫೋಟಕ ಮಾಹಿತಿ ಹೊರಬಂದರೆ ಅಚ್ಚರಿ ಇಲ್ಲ.
National Investigation Agency (NIA) on Sunday arrested a madrasa teacher from Murshidabad who was allegedly part of an al-Qaeda module based in West Bengal and Kerala, conspiring to carry out terrorist strikes at different locations in the country, including Delhi, West Bengal and Kerala.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm