ಬ್ರೇಕಿಂಗ್ ನ್ಯೂಸ್
03-11-20 10:08 am Headline Karnataka News Network ದೇಶ - ವಿದೇಶ
ಕೋಲ್ಕತ್ತಾ, ನವೆಂಬರ್.03: ಉಗ್ರ ಸಂಘಟನೆ ಅಲ್-ಖೈದಾ ಜತೆ ನಂಟು ಹೊಂದಿದ್ದ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಅಬ್ದುಲ್ ಮೊಮಿನ್ ಮಂಡಲ್ ಎಂಬಾತನ ಬಂಧನ ಮಾಡಿದೆ. ಪಶ್ಚಿಮ ಬಂಗಾಳದ ಮುಷಿರಾಬಾದ್ ನಿವಾಸಿಯ ಬಂಧನವಾಗಿದ್ದು ಪಶ್ಚಿಮ ಬಂಗಾಳ ಮತ್ತು ಕೇರಳದಲ್ಲಿ ಉಗ್ರ ಸಂಘಟನೆ ನಂಟು ಹೊಂದಿದ್ದ ಎನ್ನಲಾಗಿದೆ.
ಆಗಸ್ಟ್ ತಿಂಗಳಿನಿಂದಲೇ ಎನ್ಐಎಗೆ ಇವನ ಚಟುವಟಿಕೆ ಮೇಲೆ ನಿಗಾ ಇತ್ತು. ಹತ್ತಕ್ಕೂ ಅಧಿಕ ಮಂದಿ ಜಿಹಾದಿ ಹೆಸರಿನಲ್ಲಿ ಅಲ್-ಖೈದಾ ಪರ ಕೆಲಸ ಮಾಡುತ್ತಿದ್ದು ವಿಧ್ವಂಸಕ ಕೃತ್ಯಕ್ಕೆ ಸಿದ್ಧರಾಗುತ್ತಿದ್ದಾರೆ ಎಂಬ ಮಾಹಿತಿಯಿತ್ತು. ದೆಹಲಿ, ಪಶ್ಚಿಮ ಬಂಗಾಳ ಮತ್ತು ಕೇರಳವನ್ನು ಟಾರ್ಗೆಟ್ ಮಾಡಿಕೊಂಡಿದ್ದರು.
ರಾಯಪುರದ ಮದರಸಾ ಒಂದರಲ್ಲಿ ಶಿಕ್ಷಕನಾಗಿ ಕೆಲಸ ಮಾಡಿಕೊಂಡಿರುವ ಅಬ್ದುಲ್ ಮೊಮಿನ್ ಮಂಡಲ್ ಅಲ್ ಖೈದಾ ಜತೆಗೆ ನಂಟು ಹೊಂದಿ ಉಗ್ರ ಸಂಘಟನೆಯ ಸಭೆಯಲ್ಲಿ ಭಾಗವಹಿಸಿರುವುದು ಬಹಿರಂಗವಾಗಿದೆ.
ಅನೇಕ ಜನರನ್ನು ಉಗ್ರ ಸಂಘಟನೆ ಕಡೆ ಸೆಳೆಯುವ ಕೆಲಸ ಮಾಡುತ್ತಿದ್ದ. ಈತನ ಮನೆ ಮೇಲೆಯೂ ದಾಳಿ ಮಾಡಲಾಗಿದ್ದು ಡಿಜಿಟಲ್ ಉಪಕರಣಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ದಾಳಿ ನಡೆಸಿದ ವೇಳೆ ಡಿಜಿಟಲ್ ಉಪಕರಣ, ಪ್ರಮುಖ ತಾಣಗಳು, ಸ್ಥಳಗಳ ಮ್ಯಾಪ್, ದಾಖಲೆಗಳು, ಜಿಹಾದಿ ಸಾಹಿತ್ಯ, ದೇಶೀ ನಿರ್ಮಿತ ಶಸ್ತ್ರಾಸ್ತ್ರ, ಸ್ಫೋಟಕ ತಯಾರಿಸುವ ವಿಧಾನದ ಪುಸ್ತಕಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅಲ್-ಖೈದಾ ಜತೆಗಿನ ನಂಟಿನ ಪ್ರಕರಣಕ್ಕೆ ಸಂಬಂಧಿಸಿ ಇಲ್ಲಿವರೆಗೆ ಒಟ್ಟು ಹನ್ನೊಂದು ಜನರನ್ನು ಬಂಧಿಸಲಾಗಿದ್ದು ಪಶ್ಚಿಮ ಬಂಗಾಳ ಮತ್ತು ಕೇರಳದಲ್ಲಿ ನಿರಂತರ ಕಾರ್ಯಾಚಾರಣೆ ನಡೆದಿದೆ. ವಿಚಾರಣೆ ನಂತರ ಮತ್ತಷ್ಟು ಸ್ಫೋಟಕ ಮಾಹಿತಿ ಹೊರಬಂದರೆ ಅಚ್ಚರಿ ಇಲ್ಲ.
National Investigation Agency (NIA) on Sunday arrested a madrasa teacher from Murshidabad who was allegedly part of an al-Qaeda module based in West Bengal and Kerala, conspiring to carry out terrorist strikes at different locations in the country, including Delhi, West Bengal and Kerala.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm