ಬ್ರೇಕಿಂಗ್ ನ್ಯೂಸ್
03-11-20 10:08 am Headline Karnataka News Network ದೇಶ - ವಿದೇಶ
ಕೋಲ್ಕತ್ತಾ, ನವೆಂಬರ್.03: ಉಗ್ರ ಸಂಘಟನೆ ಅಲ್-ಖೈದಾ ಜತೆ ನಂಟು ಹೊಂದಿದ್ದ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಅಬ್ದುಲ್ ಮೊಮಿನ್ ಮಂಡಲ್ ಎಂಬಾತನ ಬಂಧನ ಮಾಡಿದೆ. ಪಶ್ಚಿಮ ಬಂಗಾಳದ ಮುಷಿರಾಬಾದ್ ನಿವಾಸಿಯ ಬಂಧನವಾಗಿದ್ದು ಪಶ್ಚಿಮ ಬಂಗಾಳ ಮತ್ತು ಕೇರಳದಲ್ಲಿ ಉಗ್ರ ಸಂಘಟನೆ ನಂಟು ಹೊಂದಿದ್ದ ಎನ್ನಲಾಗಿದೆ.
ಆಗಸ್ಟ್ ತಿಂಗಳಿನಿಂದಲೇ ಎನ್ಐಎಗೆ ಇವನ ಚಟುವಟಿಕೆ ಮೇಲೆ ನಿಗಾ ಇತ್ತು. ಹತ್ತಕ್ಕೂ ಅಧಿಕ ಮಂದಿ ಜಿಹಾದಿ ಹೆಸರಿನಲ್ಲಿ ಅಲ್-ಖೈದಾ ಪರ ಕೆಲಸ ಮಾಡುತ್ತಿದ್ದು ವಿಧ್ವಂಸಕ ಕೃತ್ಯಕ್ಕೆ ಸಿದ್ಧರಾಗುತ್ತಿದ್ದಾರೆ ಎಂಬ ಮಾಹಿತಿಯಿತ್ತು. ದೆಹಲಿ, ಪಶ್ಚಿಮ ಬಂಗಾಳ ಮತ್ತು ಕೇರಳವನ್ನು ಟಾರ್ಗೆಟ್ ಮಾಡಿಕೊಂಡಿದ್ದರು.
ರಾಯಪುರದ ಮದರಸಾ ಒಂದರಲ್ಲಿ ಶಿಕ್ಷಕನಾಗಿ ಕೆಲಸ ಮಾಡಿಕೊಂಡಿರುವ ಅಬ್ದುಲ್ ಮೊಮಿನ್ ಮಂಡಲ್ ಅಲ್ ಖೈದಾ ಜತೆಗೆ ನಂಟು ಹೊಂದಿ ಉಗ್ರ ಸಂಘಟನೆಯ ಸಭೆಯಲ್ಲಿ ಭಾಗವಹಿಸಿರುವುದು ಬಹಿರಂಗವಾಗಿದೆ.
ಅನೇಕ ಜನರನ್ನು ಉಗ್ರ ಸಂಘಟನೆ ಕಡೆ ಸೆಳೆಯುವ ಕೆಲಸ ಮಾಡುತ್ತಿದ್ದ. ಈತನ ಮನೆ ಮೇಲೆಯೂ ದಾಳಿ ಮಾಡಲಾಗಿದ್ದು ಡಿಜಿಟಲ್ ಉಪಕರಣಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ದಾಳಿ ನಡೆಸಿದ ವೇಳೆ ಡಿಜಿಟಲ್ ಉಪಕರಣ, ಪ್ರಮುಖ ತಾಣಗಳು, ಸ್ಥಳಗಳ ಮ್ಯಾಪ್, ದಾಖಲೆಗಳು, ಜಿಹಾದಿ ಸಾಹಿತ್ಯ, ದೇಶೀ ನಿರ್ಮಿತ ಶಸ್ತ್ರಾಸ್ತ್ರ, ಸ್ಫೋಟಕ ತಯಾರಿಸುವ ವಿಧಾನದ ಪುಸ್ತಕಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅಲ್-ಖೈದಾ ಜತೆಗಿನ ನಂಟಿನ ಪ್ರಕರಣಕ್ಕೆ ಸಂಬಂಧಿಸಿ ಇಲ್ಲಿವರೆಗೆ ಒಟ್ಟು ಹನ್ನೊಂದು ಜನರನ್ನು ಬಂಧಿಸಲಾಗಿದ್ದು ಪಶ್ಚಿಮ ಬಂಗಾಳ ಮತ್ತು ಕೇರಳದಲ್ಲಿ ನಿರಂತರ ಕಾರ್ಯಾಚಾರಣೆ ನಡೆದಿದೆ. ವಿಚಾರಣೆ ನಂತರ ಮತ್ತಷ್ಟು ಸ್ಫೋಟಕ ಮಾಹಿತಿ ಹೊರಬಂದರೆ ಅಚ್ಚರಿ ಇಲ್ಲ.
National Investigation Agency (NIA) on Sunday arrested a madrasa teacher from Murshidabad who was allegedly part of an al-Qaeda module based in West Bengal and Kerala, conspiring to carry out terrorist strikes at different locations in the country, including Delhi, West Bengal and Kerala.
19-10-25 07:00 pm
HK News Desk
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 07:58 pm
Mangalore Correspondent
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
Ullal, Someshwara, Pillar: ಸೋಮೇಶ್ವರ ಪಿಲಾರಿನಲ್...
17-10-25 09:36 pm
19-10-25 01:26 pm
Bangalore Correspondent
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm
Fake Gold Scam, Belthangady Anugraha Society:...
18-10-25 03:27 pm
Illegal Arms Case, Mahesh Shetty Timarodi: ಅಕ...
18-10-25 01:52 pm