ಬ್ರೇಕಿಂಗ್ ನ್ಯೂಸ್
06-07-23 08:20 pm HK News Desk ದೇಶ - ವಿದೇಶ
ಭೋಪಾಲ್, ಜುಲೈ 6: ಮಧ್ಯಪ್ರದೇಶದ ಮೂತ್ರ ವಿಸರ್ಜನೆ ಪ್ರಕರಣದ ಸಂತ್ರಸ್ತ, ಆದಿವಾಸಿ ಜನಾಂಗದ ದಶ್ಮತ್ ರಾವತ್ ಎಂಬ ವ್ಯಕ್ತಿಯ ಪಾದವನ್ನು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತೊಳೆಯುವ ಮೂಲಕ ಪ್ರಾಯಶ್ಚಿತ್ತ ರೂಪದ ಕಾರ್ಯ ಮಾಡಿದ್ದಾರೆ.
ಭೋಪಾಲ್ ನಗರದಲ್ಲಿರುವ ಮುಖ್ಯಮಂತ್ರಿ ನಿವಾಸಕ್ಕೆ ಪ್ರಕರಣದ ಸಂತ್ರಸ್ತನನ್ನು ಕರೆಸಿಕೊಂಡ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಆತನ ಪಾದ ತೊಳೆದಿದ್ದಾರೆ. ಆಮೂಲಕ ಸಾರ್ವಜನಿಕ ಆಕ್ರೋಶ ತಣ್ಣಗಾಗಿಸುವ ಪ್ರಯತ್ನ ಮಾಡಿದ್ದಾರೆ.
ಸಂತ್ರಸ್ತನನ್ನು ಕುರ್ಚಿಯಲ್ಲಿ ಕೂರಿಸಿ, ಮುಖ್ಯಮಂತ್ರಿ ಕೆಳಗೆ ಕುಳಿತು ಪಾದ ತೊಳೆಯುತ್ತಿರುವ ದೃಶ್ಯದ ಫೋಟೊ ವೈರಲ್ ಆಗಿದೆ. ಬಳಿಕ ಸಂತ್ರಸ್ತನಿಗೆ ಶಾಲು ಹೊದಿಸಿ ಹೂವಿನ ಹಾರ ಹಾಕಿ, ಶಾಲು ಹೊದಿಸಿ ಗೌರವಿಸಿದ್ದಾರೆ. ಮುಂದಿನ ವರ್ಷ ವಿಧಾನಸಭೆ ಚುನಾವಣೆ ಎದುರಿಸಲಿರುವ ಮಧ್ಯಪ್ರದೇಶದಲ್ಲಿ ಬುಡಕಟ್ಟು ಜನರ ವೋಟು ಕಳೆದುಕೊಳ್ಳಬಾರದು ಎನ್ನುವ ದೃಷ್ಟಿಯಿಂದ ತಂತ್ರಗಾರಿಕೆ ಭಾಗವಾಗಿ ಈ ರೀತಿ ಮಾಡಲಾಗಿದೆ ಎನ್ನುವ ಮಾತು ಕೇಳಿಬಂದಿದೆ.
ಬಿಜೆಪಿ ಜೊತೆ ನಿಕಟ ಸಂಪರ್ಕ ಹೊಂದಿದ್ದಾನೆ ಎನ್ನಲಾದ ಆರೋಪಿ ಪ್ರವೇಶ್ ಶುಕ್ಲಾ ಸಿಗರೇಟ್ ಸೇದುತ್ತಾ, ಸಿಧಿ ಜಿಲ್ಲೆಯ ಕುಬರಿ ಮಾರುಕಟ್ಟೆಯಲ್ಲಿ ಕುಳಿತಿದ್ದ ಆದಿವಾಸಿ ವ್ಯಕ್ತಿಯನ್ನು ನಿಂದಿಸಿ, ಆತನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ವಿಡಿಯೋ ವೈರಲ್ ಆಗಿತ್ತು. ಘಟನೆ ಬಗ್ಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಲೇ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕ್ರಮ ಜರುಗಿಸಲು ಮುಂದಾಗಿದ್ದರು. ಇದರ ಬೆನ್ನಲ್ಲೇ ಆರೋಪಿಯನ್ನು ಮಂಗಳವಾರ (ಜುಲೈ 4) ಮಧ್ಯರಾತ್ರಿ ಪೊಲೀಸರು ಬಂಧಿಸಿದ್ದರು.
ಆರೋಪಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಸೂಚಿಸಿದ ರಾಜ್ಯದ ಬಿಜೆಪಿ ಸರ್ಕಾರ ಜುಲೈ 5ರಂದು ಆತನಿಗೆ ಸೇರಿದ ಅಕ್ರಮ ಕಟ್ಟಡವನ್ನು ಬುಲ್ಡೋಜರ್ ಬಳಸಿ ಧ್ವಂಸ ಮಾಡಿತ್ತು. ಶುಕ್ಲಾ ವಿರುದ್ಧ ಸೆಕ್ಷನ್ 294, 504 ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ರಾಷ್ಟ್ರೀಯ ಭದ್ರತಾ ಕಾಯಿದೆ ಮತ್ತು ಎಸ್ಸಿ-ಎಸ್ಟಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
The victim of the Sidhi urination incident on Thursday said he felt good after meeting Madhya Pradesh chief minister Shivraj Singh Chouhan at his residence in Bhopal.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 11:01 am
Bangalore Correspondent
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm