ಬ್ರೇಕಿಂಗ್ ನ್ಯೂಸ್
06-07-23 08:20 pm HK News Desk ದೇಶ - ವಿದೇಶ
ಭೋಪಾಲ್, ಜುಲೈ 6: ಮಧ್ಯಪ್ರದೇಶದ ಮೂತ್ರ ವಿಸರ್ಜನೆ ಪ್ರಕರಣದ ಸಂತ್ರಸ್ತ, ಆದಿವಾಸಿ ಜನಾಂಗದ ದಶ್ಮತ್ ರಾವತ್ ಎಂಬ ವ್ಯಕ್ತಿಯ ಪಾದವನ್ನು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತೊಳೆಯುವ ಮೂಲಕ ಪ್ರಾಯಶ್ಚಿತ್ತ ರೂಪದ ಕಾರ್ಯ ಮಾಡಿದ್ದಾರೆ.
ಭೋಪಾಲ್ ನಗರದಲ್ಲಿರುವ ಮುಖ್ಯಮಂತ್ರಿ ನಿವಾಸಕ್ಕೆ ಪ್ರಕರಣದ ಸಂತ್ರಸ್ತನನ್ನು ಕರೆಸಿಕೊಂಡ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಆತನ ಪಾದ ತೊಳೆದಿದ್ದಾರೆ. ಆಮೂಲಕ ಸಾರ್ವಜನಿಕ ಆಕ್ರೋಶ ತಣ್ಣಗಾಗಿಸುವ ಪ್ರಯತ್ನ ಮಾಡಿದ್ದಾರೆ.
ಸಂತ್ರಸ್ತನನ್ನು ಕುರ್ಚಿಯಲ್ಲಿ ಕೂರಿಸಿ, ಮುಖ್ಯಮಂತ್ರಿ ಕೆಳಗೆ ಕುಳಿತು ಪಾದ ತೊಳೆಯುತ್ತಿರುವ ದೃಶ್ಯದ ಫೋಟೊ ವೈರಲ್ ಆಗಿದೆ. ಬಳಿಕ ಸಂತ್ರಸ್ತನಿಗೆ ಶಾಲು ಹೊದಿಸಿ ಹೂವಿನ ಹಾರ ಹಾಕಿ, ಶಾಲು ಹೊದಿಸಿ ಗೌರವಿಸಿದ್ದಾರೆ. ಮುಂದಿನ ವರ್ಷ ವಿಧಾನಸಭೆ ಚುನಾವಣೆ ಎದುರಿಸಲಿರುವ ಮಧ್ಯಪ್ರದೇಶದಲ್ಲಿ ಬುಡಕಟ್ಟು ಜನರ ವೋಟು ಕಳೆದುಕೊಳ್ಳಬಾರದು ಎನ್ನುವ ದೃಷ್ಟಿಯಿಂದ ತಂತ್ರಗಾರಿಕೆ ಭಾಗವಾಗಿ ಈ ರೀತಿ ಮಾಡಲಾಗಿದೆ ಎನ್ನುವ ಮಾತು ಕೇಳಿಬಂದಿದೆ.
ಬಿಜೆಪಿ ಜೊತೆ ನಿಕಟ ಸಂಪರ್ಕ ಹೊಂದಿದ್ದಾನೆ ಎನ್ನಲಾದ ಆರೋಪಿ ಪ್ರವೇಶ್ ಶುಕ್ಲಾ ಸಿಗರೇಟ್ ಸೇದುತ್ತಾ, ಸಿಧಿ ಜಿಲ್ಲೆಯ ಕುಬರಿ ಮಾರುಕಟ್ಟೆಯಲ್ಲಿ ಕುಳಿತಿದ್ದ ಆದಿವಾಸಿ ವ್ಯಕ್ತಿಯನ್ನು ನಿಂದಿಸಿ, ಆತನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ವಿಡಿಯೋ ವೈರಲ್ ಆಗಿತ್ತು. ಘಟನೆ ಬಗ್ಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಲೇ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕ್ರಮ ಜರುಗಿಸಲು ಮುಂದಾಗಿದ್ದರು. ಇದರ ಬೆನ್ನಲ್ಲೇ ಆರೋಪಿಯನ್ನು ಮಂಗಳವಾರ (ಜುಲೈ 4) ಮಧ್ಯರಾತ್ರಿ ಪೊಲೀಸರು ಬಂಧಿಸಿದ್ದರು.
ಆರೋಪಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಸೂಚಿಸಿದ ರಾಜ್ಯದ ಬಿಜೆಪಿ ಸರ್ಕಾರ ಜುಲೈ 5ರಂದು ಆತನಿಗೆ ಸೇರಿದ ಅಕ್ರಮ ಕಟ್ಟಡವನ್ನು ಬುಲ್ಡೋಜರ್ ಬಳಸಿ ಧ್ವಂಸ ಮಾಡಿತ್ತು. ಶುಕ್ಲಾ ವಿರುದ್ಧ ಸೆಕ್ಷನ್ 294, 504 ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ರಾಷ್ಟ್ರೀಯ ಭದ್ರತಾ ಕಾಯಿದೆ ಮತ್ತು ಎಸ್ಸಿ-ಎಸ್ಟಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
The victim of the Sidhi urination incident on Thursday said he felt good after meeting Madhya Pradesh chief minister Shivraj Singh Chouhan at his residence in Bhopal.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm