ಬ್ರೇಕಿಂಗ್ ನ್ಯೂಸ್
03-11-20 06:11 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 03: ಉಳಿತಾಯ ಮತ್ತು ಚಾಲ್ತಿ ಖಾತೆಗಳಿಂದ ಹಣ ವರ್ಗಾವಣೆ ಮತ್ತು ನಗದು ಡ್ರಾ ಮಾಡುವುದಕ್ಕೆ ಹೆಚ್ಚುವರಿ ಶುಲ್ಕ ವಿಧಿಸುವ ಪ್ರಸ್ತಾಪವನ್ನು ಕೇಂದ್ರ ಹಣಕಾಸು ಇಲಾಖೆ ದಿಢೀರ್ ಆಗಿ ಹಿಂಪಡೆದಿದೆ.
ಬರೋಡಾ ಬ್ಯಾಂಕ್ ಸೇರಿದಂತೆ ಕೆಲವು ಬ್ಯಾಂಕುಗಳು ಸದ್ದಿಲ್ಲದೆ ಹೆಚ್ಚುವರಿ ಶುಲ್ಕ ವಿಧಿಸಲು ಸಿದ್ಧತೆ ನಡೆಸಿದ್ದವು. ಆದರೆ, ಕೊರೊನಾ ಸಂದರ್ಭದಲ್ಲಿ ಹೆಚ್ಚುವರಿ ಶುಲ್ಕ ವಿಧಿಸುವ ಪ್ರಸ್ತಾಪಕ್ಕೆ ಸಾರ್ವಜನಿಕ ವಲಯದಲ್ಲಿ ಭಾರೀ ವಿರೋಧ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಮಧ್ಯ ಪ್ರವೇಶ ಮಾಡಿ, ಸಾರ್ವಜನಿಕ ವಲಯದ ಯಾವುದೇ ಬ್ಯಾಂಕುಗಳಲ್ಲಿ ಹೆಚ್ಚುವರಿ ಶುಲ್ಕ ವಿಧಿಸುವ ಪ್ರಸ್ತಾಪ ಇಲ್ಲ ಎಂದು ಸ್ಪಷ್ಟನೆ ನೀಡಿದೆ.


ಬರೋಡಾ ಬ್ಯಾಂಕ್ ನವೆಂಬರ್ 1ರಿಂದಲೇ ಈ ನಿಯಮ ಅನ್ವಯಿಸಲು ಸುತ್ತೋಲೆ ನೀಡಿತ್ತು. ಐದು ಬಾರಿಯ ಉಚಿತ ವರ್ಗಾವಣೆಯನ್ನು ಮೂರು ಬಾರಿಗೆ ಕಡಿತಗೊಳಿಸಿದ್ದಲ್ಲದೆ, ಹೆಚ್ಚುವರಿಯಾಗಿ ಮಾಡುವ ಪ್ರತಿ ವರ್ಗಾವಣೆ ಮತ್ತು ನಗದು ವಿತ್ ಡ್ರಾಗಳಿಗೆ ತಲಾ 150 ರೂ.ನಂತೆ ಶುಲ್ಕ ವಿಧಿಸುವುದಾಗಿ ಹೇಳಲಾಗಿತ್ತು. ಇದೇ ನೀತಿಯನ್ನು ಸಾರ್ವಜನಿಕ ರಂಗದ ಎಲ್ಲ ಬ್ಯಾಂಕುಗಳು ಅನ್ವಯಿಸಲು ಸಿದ್ಧತೆ ನಡೆಸಿದ್ದವು. ಡಿಜಿಟಲ್ ಉತ್ತೇಜನ ನೆಪದಲ್ಲಿ ಗ್ರಾಹಕರಿಗೆ ಹೊರೆ ವಿಧಿಸುವ ಪ್ರಸ್ತಾಪಕ್ಕೆ ವಿರೋಧ ವ್ಯಕ್ತವಾಗಿತ್ತು. ಸಾರ್ವಜನಿಕರು ಮತ್ತು ಪ್ರತಿಪಕ್ಷಗಳು ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರಿಂದ ಕೇಂದ್ರ ಸರಕಾರ ದಿಢೀರ್ ಆಗಿ ಪ್ರಸ್ತಾಪವನ್ನು ಹಿಂದಕ್ಕೆ ಪಡೆದಿದೆ.
ಇದಲ್ಲದೆ, ಹಣಕಾಸು ಸಚಿವಾಲಯದ ಹೇಳಿಕೆಯಲ್ಲಿ ಜನಧನ್ ಖಾತೆಯ 41 ಕೋಟಿ ಗ್ರಾಹಕರು ಸೇರಿದಂತೆ 60 ಕೋಟಿಗೂ ಹೆಚ್ಚು ಇರುವ ಸೇವಿಂಗ್ಸ್ ಖಾತೆಗಳಿಂದ ಹಣ ವರ್ಗಾವಣೆಗೆ ಯಾವುದೇ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm