ಬ್ರೇಕಿಂಗ್ ನ್ಯೂಸ್
03-11-20 06:11 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 03: ಉಳಿತಾಯ ಮತ್ತು ಚಾಲ್ತಿ ಖಾತೆಗಳಿಂದ ಹಣ ವರ್ಗಾವಣೆ ಮತ್ತು ನಗದು ಡ್ರಾ ಮಾಡುವುದಕ್ಕೆ ಹೆಚ್ಚುವರಿ ಶುಲ್ಕ ವಿಧಿಸುವ ಪ್ರಸ್ತಾಪವನ್ನು ಕೇಂದ್ರ ಹಣಕಾಸು ಇಲಾಖೆ ದಿಢೀರ್ ಆಗಿ ಹಿಂಪಡೆದಿದೆ.
ಬರೋಡಾ ಬ್ಯಾಂಕ್ ಸೇರಿದಂತೆ ಕೆಲವು ಬ್ಯಾಂಕುಗಳು ಸದ್ದಿಲ್ಲದೆ ಹೆಚ್ಚುವರಿ ಶುಲ್ಕ ವಿಧಿಸಲು ಸಿದ್ಧತೆ ನಡೆಸಿದ್ದವು. ಆದರೆ, ಕೊರೊನಾ ಸಂದರ್ಭದಲ್ಲಿ ಹೆಚ್ಚುವರಿ ಶುಲ್ಕ ವಿಧಿಸುವ ಪ್ರಸ್ತಾಪಕ್ಕೆ ಸಾರ್ವಜನಿಕ ವಲಯದಲ್ಲಿ ಭಾರೀ ವಿರೋಧ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಮಧ್ಯ ಪ್ರವೇಶ ಮಾಡಿ, ಸಾರ್ವಜನಿಕ ವಲಯದ ಯಾವುದೇ ಬ್ಯಾಂಕುಗಳಲ್ಲಿ ಹೆಚ್ಚುವರಿ ಶುಲ್ಕ ವಿಧಿಸುವ ಪ್ರಸ್ತಾಪ ಇಲ್ಲ ಎಂದು ಸ್ಪಷ್ಟನೆ ನೀಡಿದೆ.
ಬರೋಡಾ ಬ್ಯಾಂಕ್ ನವೆಂಬರ್ 1ರಿಂದಲೇ ಈ ನಿಯಮ ಅನ್ವಯಿಸಲು ಸುತ್ತೋಲೆ ನೀಡಿತ್ತು. ಐದು ಬಾರಿಯ ಉಚಿತ ವರ್ಗಾವಣೆಯನ್ನು ಮೂರು ಬಾರಿಗೆ ಕಡಿತಗೊಳಿಸಿದ್ದಲ್ಲದೆ, ಹೆಚ್ಚುವರಿಯಾಗಿ ಮಾಡುವ ಪ್ರತಿ ವರ್ಗಾವಣೆ ಮತ್ತು ನಗದು ವಿತ್ ಡ್ರಾಗಳಿಗೆ ತಲಾ 150 ರೂ.ನಂತೆ ಶುಲ್ಕ ವಿಧಿಸುವುದಾಗಿ ಹೇಳಲಾಗಿತ್ತು. ಇದೇ ನೀತಿಯನ್ನು ಸಾರ್ವಜನಿಕ ರಂಗದ ಎಲ್ಲ ಬ್ಯಾಂಕುಗಳು ಅನ್ವಯಿಸಲು ಸಿದ್ಧತೆ ನಡೆಸಿದ್ದವು. ಡಿಜಿಟಲ್ ಉತ್ತೇಜನ ನೆಪದಲ್ಲಿ ಗ್ರಾಹಕರಿಗೆ ಹೊರೆ ವಿಧಿಸುವ ಪ್ರಸ್ತಾಪಕ್ಕೆ ವಿರೋಧ ವ್ಯಕ್ತವಾಗಿತ್ತು. ಸಾರ್ವಜನಿಕರು ಮತ್ತು ಪ್ರತಿಪಕ್ಷಗಳು ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರಿಂದ ಕೇಂದ್ರ ಸರಕಾರ ದಿಢೀರ್ ಆಗಿ ಪ್ರಸ್ತಾಪವನ್ನು ಹಿಂದಕ್ಕೆ ಪಡೆದಿದೆ.
ಇದಲ್ಲದೆ, ಹಣಕಾಸು ಸಚಿವಾಲಯದ ಹೇಳಿಕೆಯಲ್ಲಿ ಜನಧನ್ ಖಾತೆಯ 41 ಕೋಟಿ ಗ್ರಾಹಕರು ಸೇರಿದಂತೆ 60 ಕೋಟಿಗೂ ಹೆಚ್ಚು ಇರುವ ಸೇವಿಂಗ್ಸ್ ಖಾತೆಗಳಿಂದ ಹಣ ವರ್ಗಾವಣೆಗೆ ಯಾವುದೇ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
19-10-25 07:00 pm
HK News Desk
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 07:58 pm
Mangalore Correspondent
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
Ullal, Someshwara, Pillar: ಸೋಮೇಶ್ವರ ಪಿಲಾರಿನಲ್...
17-10-25 09:36 pm
19-10-25 01:26 pm
Bangalore Correspondent
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm
Fake Gold Scam, Belthangady Anugraha Society:...
18-10-25 03:27 pm
Illegal Arms Case, Mahesh Shetty Timarodi: ಅಕ...
18-10-25 01:52 pm