ಬ್ರೇಕಿಂಗ್ ನ್ಯೂಸ್
30-07-20 03:36 pm Special Correspondant ದೇಶ - ವಿದೇಶ
ನವದೆಹಲಿ, ಜುಲೈ 30: ಯುವರಾಜ ರಾಹುಲ್ ಗಾಂಧಿ ಮತ್ತೆ ಕಾಂಗ್ರೆಸ್ ಅಧ್ಯಕ್ಷರಾಗಲು ಪಕ್ಷದ ಸಂಸದರಿಂದಲೇ ಒತ್ತಡ ಕೇಳಿಬಂದಿದೆ. ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಹಮ್ಮಿಕೊಂಡ ವರ್ಚುವಲ್ ಮೀಟ್ ನಲ್ಲಿ ಪಕ್ಷದ ಸಂಸದರು ರಾಹುಲ್ ಗಾಂಧಿ ಮತ್ತೆ ಅಧ್ಯಕ್ಷ ಹುದ್ದೆಗೆ ಏರಬೇಕು ಎಂದು ಒತ್ತಾಯಿಸಿದ ಬೆಳವಣಿಗೆ ನಡೆದಿದೆ.
ದೇಶದ ಸದ್ಯದ ರಾಜಕೀಯ ಬೆಳವಣಿಗೆ ಮತ್ತು ಹೆಚ್ಚುತ್ತಿರುವ ಕೊರೊನಾ ಸೋಂಕಿನ ವಿಚಾರದಲ್ಲಿ ಸೋನಿಯಾ ಗಾಧಿ ಪಕ್ಷದ ಸಂಸದರು ಮತ್ತು ಪ್ರಮುಖರ ಜೊತೆ ವರ್ಚುವಲ್ ಮೀಟ್ ಹಮ್ಮಿಕೊಂಡಿದ್ದರು. ಈ ಸಭೆಯಲ್ಲಿ ರಾಜ್ಯಸಭಾ ಸದಸ್ಯರೂ ಆಗಿರುವ ಪಕ್ಷದ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್, ರಾಹುಲ್ ಗಾಂಧಿ ಮತ್ತೆ ಪಕ್ಷದ ಅಧ್ಯಕ್ಷ ಹುದ್ದೆಗೇರುವಂತೆ ಒತ್ತಾಯ ಮಂಡಿಸಿದ್ದಾರೆ. ದಿಗ್ವಿಜಯ್ ಸಿಂಗ್ ಮಾತಿಗೆ ಇತರೇ ಸಂಸದರೂ ದನಿಗೂಡಿಸಿದ್ದಾರೆ. ರಾಜೀವ್ ಸಾತವ್, ಶಕ್ತಿಸಿನ್ಹ ಗೋಹಿಲ್, ನೀರಜ್ ಡಾಂಗೆ ಸೇರಿದಂತೆ ಹಲವು ಸಂಸದರು ರಾಹುಲ್ ಮತ್ತೆ ಪದವಿಗೇರುವಂತೆ ಒತ್ತಾಯಿಸಿದ್ದಾರೆ.
ರಾಜ್ಯಸಭಾ ಸದಸ್ಯ ವೇಣುಗೋಪಾಲ್ ಕೂಡ ಇದೇ ರೀತಿಯ ಒತ್ತಾಯ ಮಾಡಿದ್ದು, ಸೋನಿಯಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಜನರ ಅಭಿಪ್ರಾಯವನ್ನು ಎತ್ತಿಹಿಡಿದಿದೆ. ಆದರೆ ರಾಹುಲ್ ಮತ್ತೆ ಅಧ್ಯಕ್ಷರಾಗಬೇಕು ಎನ್ನುವ ನೆಲೆಯಲ್ಲಿ ಪಕ್ಷದ ಸಂಸದರಿಂದ ಆಗ್ರಹ ಕೇಳಿಬಂದಿದೆ. ಜುಲೈ 11ರಂದು ರಾಹುಲ್ ಗಾಂಧಿ ಎದುರಲ್ಲಿಯೇ ಲೋಕಸಭಾ ಸದಸ್ಯರಾದ ಮಾಣಿಕ್ಕಂ ಠಾಗೋರ್, ಗೌರವ್ ಗೊಗೋಯಿ ಮತ್ತಿತರರ ಸಂಸದರೂ ಇದೇ ರೀತಿಯ ಒತ್ತಾಯ ಮಾಡಿದ್ದರು. ರಾಹುಲ್ ಮಾತ್ರ ಈ ವಿಚಾರದಲ್ಲಿ ಮೌನವಾಗೇ ಇದ್ದರು ಎಂದು ಸಭೆಯಲ್ಲಿ ಸೋನಿಯಾ ಗಾಂಧಿ ಗಮನಕ್ಕೆ ತಂದಿದ್ದಾರೆ.
ಅಂದಹಾಗೆ, ಇದೇ ಆಗಸ್ಟ್ 10ಕ್ಕೆ ಸೋನಿಯಾ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಿ ಒಂದು ವರ್ಷ ಪೂರೈಸಲಿದ್ದಾರೆ. ಇದಕ್ಕೂ ಮುನ್ನ ಸೋನಿಯಾ ಮತ್ತೊಂದು ಅವಧಿಗೆ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆಯೇ ಅಥವಾ ಬೇರೊಬ್ಬರನ್ನು ಆಯ್ಕೆ ಮಾಡಲಿದ್ದಾರೆಯೇ ಎನ್ನುವುದು ಖಚಿತವಾಗಲಿದೆ. ಇದೇ ಸಂದರ್ಭದಲ್ಲಿ ರಾಹುಲ್ ಗಾಂಧಿ ಮತ್ತೆ ಅಧ್ಯಕ್ಷರಾಗಬೇಕೆಂದು ಒತ್ತಾಯ ಕೇಳಿಬಂದಿದ್ದು ಮತ್ತೆ ಯುವರಾಜ ಪಟ್ಟ ಅಲಂಕರಿಸಲಿದ್ದಾರೆಯೇ ಎನ್ನುವ ಕುತೂಹಲ ಉಂಟಾಗಿದೆ. 2019ರ ಲೋಕಸಭೆ ಚುನಾವಣೆ ಸೋಲಿನ ನಂತರ ರಾಹುಲ್ ಪಕ್ಷಾಧ್ಯಕ್ಷ ಹುದ್ದೆ ತ್ಯಜಿಸಿದ್ದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm