ಬ್ರೇಕಿಂಗ್ ನ್ಯೂಸ್
06-08-20 04:18 am Headline Karnataka News Network ದೇಶ - ವಿದೇಶ
ಅಹ್ಮದಾಬಾದ್(ಆ. 06): ಅಹ್ಮದಾಬಾದ್ನ ಕೋವಿಡ್-19 ಖಾಸಗಿ ಆಸ್ಪತ್ರೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಈ ದುರಂತದಲ್ಲಿ ಐಸಿಯು ವಾರ್ಡ್ನಲ್ಲಿದ್ದ ಎಂಟು ಮಂದಿ ರೋಗಿಗಳು ಬಲಿಯಾಗಿದ್ದಾರೆ. ಅಹ್ಮದಾಬಾದ್ನ ನವರಂಗ್ಪುರ ಪ್ರದೇಶದಲ್ಲಿರುವ ಶ್ರೇಯ್ ಆಸ್ಪತ್ರೆಯಲ್ಲಿ ರಾತ್ರಿ 2:30ರ ಸುಮಾರಿಗೆ ಸಂಭವಿಸಿದ ಈ ದುರ್ಘಟನೆಗೆ ಶಾರ್ಟ್ ಸರ್ಕ್ಯೂಟ್ ಕಾರಣವೆನ್ನಲಾಗಿದೆ.
ಸಾವನ್ನಪ್ಪಿದ ಎಂಟು ಮಂದಿ ಪೈಕಿ ಮೂವರು ಮಹಿಳೆಯರು ಸೇರಿದ್ದಾರೆ. ಈ ದುರಂತ ಸಂಭವಿಸಿದಾಗ ಈ ಆಸ್ಪತ್ರೆಯಲ್ಲಿ 35 ರೋಗಿಗಳಿದ್ದರೆನ್ನಲಾಗಿದೆ. ಉಳಿದ ರೋಗಿಗಳು, ವೈದ್ಯರು ಮತ್ತು ಸಿಬ್ಬಂದಿಗೆ ಹಾನಿಯಾಗಿಲ್ಲ. ಉಳಿದ ರೋಗಿಗಳನ್ನು ನಗರದ ಬೇರೊಂದು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಇದೇ ವೇಳೆ, ಆಸ್ಪತ್ರೆಯಲ್ಲಿ ವ್ಯಾಪಿಸಿದ್ದ ಬೆಂಕಿಯನ್ನು ಅಗ್ನಿಶಾಮಕ ದಳ ಸಿಬ್ಬಂದಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದೇ ವೇಳೆ, ಪ್ರಧಾನಿ ನರೇಂದ್ರ ಮೋದಿ ಅವರು ಈ ದುರಂತಕ್ಕೆ ವಿಷಾದ ವ್ಯಕ್ತಪಡಿಸಿದ್ದು, ಸಾವನ್ನಪ್ಪಿದ ವ್ಯಕ್ತಿಗಳ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳು ಆದಷ್ಟೂ ಬೇಗ ಚೇತರಿಕೆ ಕಾಣಲಿ ಎಂದು ಹಾರೈಸಿರುವ ಅವರು ಅಹ್ಮದಾಬಾದ್ ಜಿಲ್ಲಾಡಳಿತವು ಎಲ್ಲಾ ನೆರವು ಒದಗಿಸುತ್ತಿದೆ ಎಂದಿದ್ದಾರೆ.
Saddened by the tragic hospital fire in Ahmedabad. Condolences to the bereaved families. May the injured recover soon. Spoke to CM @vijayrupanibjp Ji and Mayor @ibijalpatel Ji regarding the situation. Administration is providing all possible assistance to the affected.
— Narendra Modi (@narendramodi) August 6, 2020
ಹಾಗೆಯೇ, ಪ್ರತಿಯೊಬ್ಬ ಮೃತರ ಕುಟುಂಬಕ್ಕೂ 2 ಲಕ್ಷ ರೂ ಪರಿಹಾರವನ್ನೂ ಪ್ರಧಾನಿಗಳು ಘೋಷಿಸಿದ್ಧಾರೆ. ಪ್ರಧಾನಮಂತ್ರಿ ವಿಪತ್ತು ನಿಧಿಯಿಂದ ಈ ಹಣವನ್ನು ನೀಡಲಾಗುತ್ತಿದೆ. ಹಾಗೆಯೇ, ಗಾಯಾಳುಗಳಿಗೆ ತಲಾ 50 ಸಾವಿರ ರೂ ಪರಿಹಾರ ಪ್ರಕಟಿಸಿದ್ದಾರೆ.
27-02-26 10:17 pm
HK News Desk
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
27-02-26 03:55 pm
HK News Staffer
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
27-02-26 09:23 pm
Mangalore Correspondent
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm