ಬ್ರೇಕಿಂಗ್ ನ್ಯೂಸ್
06-08-20 04:18 am Headline Karnataka News Network ದೇಶ - ವಿದೇಶ
ಅಹ್ಮದಾಬಾದ್(ಆ. 06): ಅಹ್ಮದಾಬಾದ್ನ ಕೋವಿಡ್-19 ಖಾಸಗಿ ಆಸ್ಪತ್ರೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಈ ದುರಂತದಲ್ಲಿ ಐಸಿಯು ವಾರ್ಡ್ನಲ್ಲಿದ್ದ ಎಂಟು ಮಂದಿ ರೋಗಿಗಳು ಬಲಿಯಾಗಿದ್ದಾರೆ. ಅಹ್ಮದಾಬಾದ್ನ ನವರಂಗ್ಪುರ ಪ್ರದೇಶದಲ್ಲಿರುವ ಶ್ರೇಯ್ ಆಸ್ಪತ್ರೆಯಲ್ಲಿ ರಾತ್ರಿ 2:30ರ ಸುಮಾರಿಗೆ ಸಂಭವಿಸಿದ ಈ ದುರ್ಘಟನೆಗೆ ಶಾರ್ಟ್ ಸರ್ಕ್ಯೂಟ್ ಕಾರಣವೆನ್ನಲಾಗಿದೆ.
ಸಾವನ್ನಪ್ಪಿದ ಎಂಟು ಮಂದಿ ಪೈಕಿ ಮೂವರು ಮಹಿಳೆಯರು ಸೇರಿದ್ದಾರೆ. ಈ ದುರಂತ ಸಂಭವಿಸಿದಾಗ ಈ ಆಸ್ಪತ್ರೆಯಲ್ಲಿ 35 ರೋಗಿಗಳಿದ್ದರೆನ್ನಲಾಗಿದೆ. ಉಳಿದ ರೋಗಿಗಳು, ವೈದ್ಯರು ಮತ್ತು ಸಿಬ್ಬಂದಿಗೆ ಹಾನಿಯಾಗಿಲ್ಲ. ಉಳಿದ ರೋಗಿಗಳನ್ನು ನಗರದ ಬೇರೊಂದು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಇದೇ ವೇಳೆ, ಆಸ್ಪತ್ರೆಯಲ್ಲಿ ವ್ಯಾಪಿಸಿದ್ದ ಬೆಂಕಿಯನ್ನು ಅಗ್ನಿಶಾಮಕ ದಳ ಸಿಬ್ಬಂದಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದೇ ವೇಳೆ, ಪ್ರಧಾನಿ ನರೇಂದ್ರ ಮೋದಿ ಅವರು ಈ ದುರಂತಕ್ಕೆ ವಿಷಾದ ವ್ಯಕ್ತಪಡಿಸಿದ್ದು, ಸಾವನ್ನಪ್ಪಿದ ವ್ಯಕ್ತಿಗಳ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳು ಆದಷ್ಟೂ ಬೇಗ ಚೇತರಿಕೆ ಕಾಣಲಿ ಎಂದು ಹಾರೈಸಿರುವ ಅವರು ಅಹ್ಮದಾಬಾದ್ ಜಿಲ್ಲಾಡಳಿತವು ಎಲ್ಲಾ ನೆರವು ಒದಗಿಸುತ್ತಿದೆ ಎಂದಿದ್ದಾರೆ.
Saddened by the tragic hospital fire in Ahmedabad. Condolences to the bereaved families. May the injured recover soon. Spoke to CM @vijayrupanibjp Ji and Mayor @ibijalpatel Ji regarding the situation. Administration is providing all possible assistance to the affected.
— Narendra Modi (@narendramodi) August 6, 2020
ಹಾಗೆಯೇ, ಪ್ರತಿಯೊಬ್ಬ ಮೃತರ ಕುಟುಂಬಕ್ಕೂ 2 ಲಕ್ಷ ರೂ ಪರಿಹಾರವನ್ನೂ ಪ್ರಧಾನಿಗಳು ಘೋಷಿಸಿದ್ಧಾರೆ. ಪ್ರಧಾನಮಂತ್ರಿ ವಿಪತ್ತು ನಿಧಿಯಿಂದ ಈ ಹಣವನ್ನು ನೀಡಲಾಗುತ್ತಿದೆ. ಹಾಗೆಯೇ, ಗಾಯಾಳುಗಳಿಗೆ ತಲಾ 50 ಸಾವಿರ ರೂ ಪರಿಹಾರ ಪ್ರಕಟಿಸಿದ್ದಾರೆ.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm