ಬ್ರೇಕಿಂಗ್ ನ್ಯೂಸ್
06-08-20 04:18 am Headline Karnataka News Network ದೇಶ - ವಿದೇಶ
ಅಹ್ಮದಾಬಾದ್(ಆ. 06): ಅಹ್ಮದಾಬಾದ್ನ ಕೋವಿಡ್-19 ಖಾಸಗಿ ಆಸ್ಪತ್ರೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಈ ದುರಂತದಲ್ಲಿ ಐಸಿಯು ವಾರ್ಡ್ನಲ್ಲಿದ್ದ ಎಂಟು ಮಂದಿ ರೋಗಿಗಳು ಬಲಿಯಾಗಿದ್ದಾರೆ. ಅಹ್ಮದಾಬಾದ್ನ ನವರಂಗ್ಪುರ ಪ್ರದೇಶದಲ್ಲಿರುವ ಶ್ರೇಯ್ ಆಸ್ಪತ್ರೆಯಲ್ಲಿ ರಾತ್ರಿ 2:30ರ ಸುಮಾರಿಗೆ ಸಂಭವಿಸಿದ ಈ ದುರ್ಘಟನೆಗೆ ಶಾರ್ಟ್ ಸರ್ಕ್ಯೂಟ್ ಕಾರಣವೆನ್ನಲಾಗಿದೆ.
ಸಾವನ್ನಪ್ಪಿದ ಎಂಟು ಮಂದಿ ಪೈಕಿ ಮೂವರು ಮಹಿಳೆಯರು ಸೇರಿದ್ದಾರೆ. ಈ ದುರಂತ ಸಂಭವಿಸಿದಾಗ ಈ ಆಸ್ಪತ್ರೆಯಲ್ಲಿ 35 ರೋಗಿಗಳಿದ್ದರೆನ್ನಲಾಗಿದೆ. ಉಳಿದ ರೋಗಿಗಳು, ವೈದ್ಯರು ಮತ್ತು ಸಿಬ್ಬಂದಿಗೆ ಹಾನಿಯಾಗಿಲ್ಲ. ಉಳಿದ ರೋಗಿಗಳನ್ನು ನಗರದ ಬೇರೊಂದು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಇದೇ ವೇಳೆ, ಆಸ್ಪತ್ರೆಯಲ್ಲಿ ವ್ಯಾಪಿಸಿದ್ದ ಬೆಂಕಿಯನ್ನು ಅಗ್ನಿಶಾಮಕ ದಳ ಸಿಬ್ಬಂದಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದೇ ವೇಳೆ, ಪ್ರಧಾನಿ ನರೇಂದ್ರ ಮೋದಿ ಅವರು ಈ ದುರಂತಕ್ಕೆ ವಿಷಾದ ವ್ಯಕ್ತಪಡಿಸಿದ್ದು, ಸಾವನ್ನಪ್ಪಿದ ವ್ಯಕ್ತಿಗಳ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳು ಆದಷ್ಟೂ ಬೇಗ ಚೇತರಿಕೆ ಕಾಣಲಿ ಎಂದು ಹಾರೈಸಿರುವ ಅವರು ಅಹ್ಮದಾಬಾದ್ ಜಿಲ್ಲಾಡಳಿತವು ಎಲ್ಲಾ ನೆರವು ಒದಗಿಸುತ್ತಿದೆ ಎಂದಿದ್ದಾರೆ.
Saddened by the tragic hospital fire in Ahmedabad. Condolences to the bereaved families. May the injured recover soon. Spoke to CM @vijayrupanibjp Ji and Mayor @ibijalpatel Ji regarding the situation. Administration is providing all possible assistance to the affected.
— Narendra Modi (@narendramodi) August 6, 2020
ಹಾಗೆಯೇ, ಪ್ರತಿಯೊಬ್ಬ ಮೃತರ ಕುಟುಂಬಕ್ಕೂ 2 ಲಕ್ಷ ರೂ ಪರಿಹಾರವನ್ನೂ ಪ್ರಧಾನಿಗಳು ಘೋಷಿಸಿದ್ಧಾರೆ. ಪ್ರಧಾನಮಂತ್ರಿ ವಿಪತ್ತು ನಿಧಿಯಿಂದ ಈ ಹಣವನ್ನು ನೀಡಲಾಗುತ್ತಿದೆ. ಹಾಗೆಯೇ, ಗಾಯಾಳುಗಳಿಗೆ ತಲಾ 50 ಸಾವಿರ ರೂ ಪರಿಹಾರ ಪ್ರಕಟಿಸಿದ್ದಾರೆ.
28-08-25 02:41 pm
HK News Desk
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 04:05 pm
Mangalore Correspondent
Loudspeaker, Punjalkatte,Farangipete: ಪುಂಜಾಲ...
28-08-25 02:51 pm
SIT, Sujata Bhat, Dharmasthala Case: ಕೇಸ್ ಹಿಂ...
28-08-25 11:27 am
Pastor John Shamine, Madan Bugadi, IHRACSJC:...
27-08-25 11:02 pm
FIR, Chinnayya, Dharmasthala, Mahesh Thimarod...
27-08-25 09:19 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm