ಬ್ರೇಕಿಂಗ್ ನ್ಯೂಸ್
04-11-20 10:50 am Headline Karnataka News Network ದೇಶ - ವಿದೇಶ
ಮುಂಬೈ, ನ.04: ರಿಪಬ್ಲಿಕ್ ಟಿವಿಯ ಸಂಪಾದಕ ಅರ್ನಬ್ ಗೋಸ್ವಾಮಿ ಅವರನ್ನು ಮುಂಬೈ ಪೊಲೀಸರು ಬುಧವಾರ ಬೆಳಗ್ಗೆ ಬಂಧಿಸಿದ್ದಾರೆ. ಗೋಸ್ವಾಮಿ ಅವರ ಬಂಧನವನ್ನು ಹಿರಿಯ ಪೊಲೀಸರೊಬ್ಬರು ದೃಢಪಡಿಸಿದ್ದಾರೆ.
2018ರಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಹಾಗೂ ಅವರ ತಾಯಿ ಕುಮುದಾ ನಾಯಕ್ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಪ್ರಕರಣವೊಂದಕ್ಕೆ ಸಂಬಂಧಿಸಿ ಗೋಸ್ವಾಮಿ ಅವರನ್ನು ಅಲಿಬಾಗ್ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಗೋಸ್ವಾಮಿ ವಿರುದ್ದ ಟಿಆರ್ ಪಿ ತಿರುಚಿದ ಹಗರಣದ ತನಿಖೆ ಪ್ರಗತಿಯಲ್ಲಿರುವಾಗಲೇ ಈ ಬೆಳವಣಿಗೆ ನಡೆದಿದೆ.
2018ರ ಮೇ ನಲ್ಲಿ ಅಲಿಬಾಗ್ ನಲ್ಲಿ 53ರ ವಯಸ್ಸಿನ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಹಾಗೂ ಅವರ ತಾಯಿ ಕುಮುದ್ ನಾಯಕ್ ಆತ್ಮಹತ್ಯೆಗೆ ಶರಣಾಗಿದ್ದರು. ಅರ್ನಬ್ ಗೋಸ್ವಾಮಿ, ಫಿರೋಝ್ ಶೇಖ್ ಹಾಗೂ ನಿತೀಶ್ ಸರ್ದಾ ಅವರು 5.40 ಕೋ.ರೂ. ಪಾವತಿಸಿರಲಿಲ್ಲ. ಹಣಕಾಸಿನ ತೊಂದರೆಯಿಂದ ಸಾವಿಗೆ ಶರಣಾಗಿದ್ದಾಗಿ ಡೆತ್ ನೋಟ್ ನಲ್ಲಿ ಬರೆದಿದ್ದರು.
2018ರಲ್ಲಿ ಅಲಿಬಾಗ್ ಪೊಲೀಸರು ಆತ್ಮಹತ್ಯೆ ಪ್ರಕರಣವನ್ನು ದಾಖಲಿಸಿಕೊಂಡಿದ್ದರು. 2019ರಲ್ಲಿ ರಾಯಗಢ ಪೊಲೀಸರು ಪ್ರಕರಣವನ್ನು ಮುಚ್ಚಿದ್ದರು.
2020ರ ಮೇ ತಿಂಗಳಲ್ಲಿ ಅನ್ವಯ್ ನಾಯಕ್ ಅವರ ಪುತ್ರಿ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರನ್ನು ಭೇಟಿಯಾಗಿ ರಿಪಬ್ಲಿಕ್ ಟಿವಿಯ ಅರ್ನಬ್ ಗೋಸ್ವಾಮಿ ಬಾಕಿ ಮೊತ್ತ ಪಾವತಿಸದೇ ಇರುವ ಕುರಿತು ಅಲಿಬಾಗ್ ಪೊಲೀಸರು ತನಿಖೆ ನಡೆಸಿಲ್ಲ ಎಂದು ದೂರಿದ ನಂತರ ಈ ಪ್ರಕರಣದ ಹೊಸ ಸಿಐಡಿ ತನಿಖೆಯನ್ನು ಗೃಹ ಸಚಿವರು ಘೋಷಿಸಿದ್ದರು.
In connection with the deaths of interior designer Anvay Naik and mother Kumud Naik, in 2018, Republic TV Editor, Arnab Goswami was arrested by the Mumbai Police this morning.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm