ಬ್ರೇಕಿಂಗ್ ನ್ಯೂಸ್
18-07-23 11:52 am HK News Desk ದೇಶ - ವಿದೇಶ
ತಿರುವನಂತಪುರಂ, ಜುಲೈ 18: ಕೇರಳದ ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ಉಮ್ಮನ್ ಚಾಂಡಿ (79) ಬೆಂಗಳೂರಿನ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ನಿಧನರಾಗಿದ್ದಾರೆ. 2019ರಲ್ಲಿ ಕ್ಯಾನ್ಸರ್ ಪತ್ತೆಯಾದ ಬಳಿಕ ಉಮ್ಮನ್ ಚಾಂಡಿ ಅವರಿಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.
ಮಾಜಿ ಮುಖ್ಯಮಂತ್ರಿ ನಿಧನ ಹಿನ್ನೆಲೆಯಲ್ಲಿ ಕೇರಳದಲ್ಲಿ ಎರಡು ಶೋಕಾಚರಣೆ ಘೋಷಣೆ ಮಾಡಲಾಗಿದೆ. ಅವರ ನಿಧನ ಹಿನ್ನೆಲೆಯಲ್ಲಿ ಇಂದು ಮಂಗಳವಾರ ಶಾಲೆ, ಕಾಲೇಜಿಗೆ ರಜೆ ನೀಡಲಾಗಿದೆ. ಉಮ್ಮನ್ ಚಾಂಡಿ ಅವರ ಮೃತದೇಹವನ್ನು ತಿರುವನಂತಪುರಕ್ಕೆ ತರಲಾಗಿದ್ದು ಕಾಂಗ್ರೆಸ್ ಕಚೇರಿಯಲ್ಲಿ ಅಂತಿಮ ದರ್ಶನಕ್ಕಿಡಲಾಗಿದೆ. ಆನಂತರ, ಸೆಕ್ರಟರಿಯೇಟ್ ಕಚೇರಿಯ ಬಳಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ಹುಟ್ಟೂರು ಕೊಟ್ಟಾಯಂ ಜಿಲ್ಲೆಯಲ್ಲಿ ಅಂತಿಮ ದರ್ಶನದ ಬಳಿಕ ಗುರುವಾರ ಹುಟ್ಟೂರು ಪುತ್ತುಪಲ್ಲಿ ಎಂಬಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಕೇರಳ ಸಿಎಂ ಪಿಣರಾಯಿ ವಿಜಯನ್ ಪ್ರತಿಕ್ರಿಯಿಸಿ, ನಾವಿಬ್ಬರೂ ಜೊತೆ ಜೊತೆಯಾಗಿಯೇ ಸಾರ್ವಜನಿಕ ಜೀವನದಲ್ಲಿ ತೊಡಗಿಸಿಕೊಂಡವರು. ವಿದ್ಯಾರ್ಥಿ ಜೀವನದ ಬಳಿಕ ರಾಜಕೀಯಕ್ಕೆ ಬಂದಿದ್ದೆವು. ಉಮ್ಮನ್ ಚಾಂಡಿ ಒಬ್ಬ ಉತ್ತಮ ಆಡಳಿತಗಾರ ಆಗಿದ್ದರು. ಒಂದೇ ಅವಧಿಯಲ್ಲಿ ನಾವು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದೆವು. ಅವರನ್ನು ಕಳಕೊಂಡಿದ್ದು ನೋವಿನ ವಿಚಾರ ಎಂದಿದ್ದಾರೆ. ಪ್ರಧಾನಿ ಮೋದಿ ಅವರೂ ಕಂಬನಿ ಮಿಡಿದಿದ್ದು, ನಾವೊಬ್ಬ ಉತ್ತಮ ಆಡಳಿತಗಾರನನ್ನು ಕಳಕೊಂಡಿದ್ದೇವೆ. ತನ್ನ ಇಡೀ ಜೀವನವನ್ನು ಸಾರ್ವಜನಿಕ ಸೇವೆಗಾಗಿ ಇಟ್ಟಿದ್ದವರು. ಕೇರಳದ ಅಭಿವೃದ್ಧಿಯಲ್ಲಿ ಉಮ್ಮನ್ ಚಾಂಡಿ ಕೊಡುಗೆ ಇದೆ ಎಂದು ಹೇಳಿದ್ದಾರೆ.
ಸೋಲಿಲ್ಲದ ಸರದಾರ, ದಣಿವರಿಯದ ನಾಯಕ
2004-06 ಮತ್ತು 2011 -2016ರ ಎರಡು ಅವಧಿಯಲ್ಲಿ ಕೇರಳದ ಮುಖ್ಯಮಂತ್ರಿಯಾಗಿದ್ದ ಉಮ್ಮನ್ ಚಾಂಡಿ ಯಶಸ್ವಿ ಆಡಳಿತಗಾರನಾಗಿ ಹೆಸರು ಮಾಡಿದ್ದರು. 2006-2011ರ ಅವಧಿಯಲ್ಲಿ ವಿಪಕ್ಷ ನಾಯಕನಾಗಿದ್ದರು. ಕೊಟ್ಟಾಯಂ ಜಿಲ್ಲೆಯ ಪುತ್ತುಪಳ್ಳಿ ಅಸೆಂಬ್ಲಿ ಕ್ಷೇತ್ರದಿಂದ 1970ರಲ್ಲಿ ತನ್ನ 27ರ ಹರೆಯದಲ್ಲೇ ಶಾಸಕರಾಗಿ ಆಯ್ಕೆಯಾಗಿದ್ದ ಉಮ್ಮನ್ ಚಾಂಡಿ ತನ್ನ ಕೊನೆಯ ವರೆಗೂ ಅದೇ ಕ್ಷೇತ್ರದಲ್ಲಿ ಶಾಸಕರಾಗಿ ಮುಂದುವರಿದಿದ್ದು ವಿಶೇಷ. 2021ರ ಚುನಾವಣೆಯಲ್ಲಿ ಸತತ 12ನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಲ್ಲದೆ, ಒಂದೇ ಕ್ಷೇತ್ರದಲ್ಲಿ ಗೆಲ್ಲುತ್ತಾ ಬಂದಿದ್ದು ಉಮ್ಮನ್ ಚಾಂಡಿ ಹೆಗ್ಗಳಿಕೆ. ಕಾನೂನು ಪದವಿ ಪಡೆದು 1969ರಲ್ಲಿ ಕಾಂಗ್ರೆಸ್ ವಿದ್ಯಾರ್ಥಿ ಘಟಕದಲ್ಲಿ ಮುಂಚೂಣಿ ನಾಯಕರಾಗಿದ್ದ ಚಾಂಡಿ ಶಾಸಕರಾದ ಬಳಿಕ ಹಿಂತಿರುಗಿ ನೋಡಿದ್ದೇ ಇಲ್ಲ.
Senior Congress leader Oommen Chandy, who served as Chief Minister of Kerala twice, passed away at a private hospital in Bengaluru in the wee hours of Tuesday. Chandy, 79, had not been keeping well for quite some time and was staying in Bengaluru since November last year. He was ailing from throat cancer. As a mark of respect, the Kerala government has declared a public holiday on Tuesday. Also, a two-day mourning will be observed in the state.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 10:51 am
Mangalore Correspondent
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
Waqf Protest, Mangalore, Traffic: ಎಪ್ರಿಲ್ 18...
17-04-25 11:06 pm
Karnataka High Court, Waqf protest Mangalore...
17-04-25 10:27 pm
19-04-25 11:01 am
Bangalore Correspondent
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm