ಬ್ರೇಕಿಂಗ್ ನ್ಯೂಸ್
19-07-23 10:47 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 19: INDIA ಹೆಸರನ್ನು ಅಸಮರ್ಪಕವಾಗಿ ಬಳಸಿದ ಆರೋಪದ ಮೇಲೆ 26 ವಿರೋಧ ಪಕ್ಷಗಳ ವಿರುದ್ಧ ದೆಹಲಿಯ ಬರಾಖಂಬಾ ಪೊಲೀಸ್ ಠಾಣೆಯಲ್ಲಿ ಪೊಲೀಸ್ ದೂರು ದಾಖಲಾಗಿದೆ.
ಚುನಾವಣೆಯಲ್ಲಿ ಅನಗತ್ಯ ಪ್ರಭಾವ ಮತ್ತು ಹೆಚ್ಚು ಗುರುತಿಸಿಕೊಳ್ಳುವುದಕ್ಕಾಗಿ ಈ ಹೆಸರನ್ನು ಬಳಸಲಾಗಿದೆ. ಹೀಗಾಗಿ ಮೈತ್ರಿ ಪಕ್ಷಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ದೂರುದಾರ ಡಾ.ಅವನೀಶ್ ಮಿಶ್ರಾ ಒತ್ತಾಯಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ಮಂಗಳವಾರ, ಬೆಂಗಳೂರಿನಲ್ಲಿ ನಡೆದ ಜಂಟಿ ಸಭೆಯ ನಂತರ 26 ವಿರೋಧ ಪಕ್ಷಗಳು ತಮ್ಮ ಮೈತ್ರಿಗೆ 'ಇಂಡಿಯಾ' (Indian National Developmental Inclusive Alliance) ಎಂಬ ಹೆಸರು ಘೋಷಿಸಿದ್ದವು.
ಮೈತ್ರಿಯ ಹೆಸರಿಗೆ ಆಕ್ಷೇಪ ವ್ಯಕ್ತಪಡಿಸಿದ ಡಾ.ಅವಿನೀಶ್ ಮಿಶ್ರಾ, ಚುನಾವಣೆಯಲ್ಲಿ ಅನಗತ್ಯವಾಗಿ 'ಇಂಡಿಯಾ' ಎಂಬ ಪದವನ್ನು ಬಳಸುತ್ತಿದ್ದು, ಜನರ ಭಾವನೆಗಳಿಗೆ ಧಕ್ಕೆ ತಂದಿರುವ ಕಾರಣ ಪಕ್ಷಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. 26 ರಾಜಕೀಯ ಪಕ್ಷಗಳು ದೇಶದ ಹೆಸರನ್ನು ದುರ್ಬಳಕೆ ಮಾಡಿಕೊಂಡಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಲಾಂಛನಗಳ ಕಾಯಿದೆಯ ಸೆಕ್ಷನ್ 2(ಸಿ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಲಾಂಛನಗಳ ಕಾಯಿದೆಯ ಸೆಕ್ಷನ್ 5, ಲಾಂಛನಗಳ ಕಾಯಿದೆಯ ಸೆಕ್ಷನ್ 3 ರ ನಿಬಂಧನೆಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಗೆ ₹ 500 ದಂಡವನ್ನು ವಿಧಿಸಲು ಅವಕಾಶ ನೀಡುತ್ತದೆ ಎಂದು ಎಎನ್ಐ ವರದಿ ಉಲ್ಲೇಖಿಸಿದೆ.
ಮಹಾರಾಷ್ಟ್ರ ಬಿಜೆಪಿ ನಾಯಕ ಅಶುತೋಷ್ ದುಬೆ ಕೂಡ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದು, 'ಇಂಡಿಯಾ' ಹೆಸರನ್ನು ಪ್ರತಿಪಕ್ಷಗಳು ರಾಜಕೀಯ ಲಾಭಕ್ಕೆ ಬಳಸಿಕೊಂಡಿದ್ದು ಇದು ದೇಶದ ಘನತೆಗೆ ಅಗೌರವ ತಂದಿದೆ ಎಂದು ಹೇಳಿದ್ದಾರೆ. ಈ ವಿಷಯದಲ್ಲಿ ನಿಮ್ಮ ಮಧ್ಯಸ್ಥಿಕೆ ನಮ್ಮ ರಾಷ್ಟ್ರದ ಘನತೆಯನ್ನು ಕಾಪಾಡಿಕೊಳ್ಳಲು ಮತ್ತು ನಮ್ಮ ದೇಶ ನಿಂತಿರುವ ಪ್ರಜಾಪ್ರಭುತ್ವದ ತತ್ವಗಳನ್ನು ಕಾಪಾಡಲು ಸಹಾಯ ಮಾಡುತ್ತದೆ ಎಂದು ನಾನು ನಂಬುತ್ತೇನೆ ಎಂದು ಬಿಜೆಪಿ ನಾಯಕ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
A police complaint was registered against 26 Opposition parties at Barakhamba Police Station in Delhi for alleged improper use of the name of INDIA and use of the said name for the undue influence and personation at elections," news agency ANI reported.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
05-05-25 11:10 pm
HK News Desk
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
05-05-25 10:59 pm
Mangalore Correspondent
Suhas Shetty murder, MP Brijesh Chowta, Param...
05-05-25 10:43 pm
Mangalore Suhas Shetty murder, BJP Umanath Ko...
05-05-25 07:15 pm
MLA Harish Poonja, Dinesh Gundurao: ಬುರ್ಖಾಧಾರ...
05-05-25 05:10 pm
Suhas Shetty Murder, VHP, Bajpe Police: ಸುಹಾಸ...
05-05-25 03:24 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm