ಬ್ರೇಕಿಂಗ್ ನ್ಯೂಸ್
20-07-23 01:14 pm H K News Desk ದೇಶ - ವಿದೇಶ
ನವದೆಹಲಿ, ಜುಲೈ 20: ಎರಡು ತಿಂಗಳಿನಿಂದ ನಡೆಯುತ್ತಿರುವ ಹಿಂಸಾಚಾರಕ್ಕೆ ಮಣಿಪುರ ರಾಜ್ಯವೇ ಸುಟ್ಟು ಕರಕಲಾಗಿದೆ. ಇದೀಗ ರಾಜ್ಯ ಶಾಂತಿಯತ್ತ ಮರಳುತ್ತಿರುವಾಗಲೇ ಮೇ 4 ರಂದು ನಡೆದಿದೆ ಎನ್ನಲಾದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು ಮತ್ತೆ ಆಕ್ರೋಶ ಭುಗಿಲೆದ್ದಿದೆ. ಕೆಲವು ಕಡೆ ಮತ್ತೆ ಹಿಂಸಾಚಾರ ಆರಂಭಗೊಂಡಿದೆ. ಇಬ್ಬರು ಮಹಿಳೆಯರನ್ನು ಕಿಡಿಗೇಡಿಗಳ ಗುಂಪು ಬೆತ್ತಲೆ ಮೆರವಣಿಗೆ ಮಾಡಿಸಿ, ಅತ್ಯಾಚಾರ ಎಸಗಿದ್ದಾರೆ ಎಂದು ಬುಡಕಟ್ಟು ಸಮುದಾಯ ಆರೋಪ ಮಾಡಿದೆ.
ರಾಜಧಾನಿ ಇಂಫಾಲ್ನಿಂದ 35 ಕಿಲೋಮೀಟರ್ ದೂರದಲ್ಲಿ ಈ ಘಟನೆ ನಡೆದಿದೆ. ಇಬ್ಬರು ಮಹಿಳೆಯರನ್ನು ಕಿಡಿಗೇಡಿಗಳ ಗ್ಯಾಂಗ್ ಬೆತ್ತಲೆಗೊಳಿಸಿ, ರಸ್ತೆಯಲ್ಲಿ ಮೆರವಣಿಗೆ ಮಾಡಿಸಿದ್ದಾರೆ. ಮಹಿಳೆಯರು ಕಣ್ಣೀರಿಡುತ್ತಾ ಬೇಡಿಕೊಂಡರು ಆಕ್ರೋಶಿತರು ಕೇಳಿಸಿಕೊಂಡಿಲ್ಲ. ಇದರ ಬದಲು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ದಾರೆ.
ಸತತ ಪ್ರಯತ್ನಗಳ ಬಳಿಕ ಹಿಂಸಾಚಾರ ತಣ್ಣಗಾಗಿತ್ತು. ಆದರೆ ಕೆಲವು ಪ್ರದೇಶಗಳಲ್ಲಿ ಭುಗಿಲೆದ್ದ ಪ್ರತಿಭಟನೆ, ಹಿಂಸಚಾರವನ್ನು ಹತ್ತಿಕ್ಕುವ ಪ್ರಯತ್ನ ಮಾಡಲಾಗಿತ್ತು. ಇದೀಗ ವಿಕೃತು ಮೆರೆದಿರುವ ವಿಡಿಯೋ ಹೊರ ಬಂದಿರುವುದು ಬುಡಕಟ್ಟು ಸಮುದಾಯಗಳನ್ನು ಮತ್ತಷ್ಟು ಕೆರಳಿಸಿದೆ. ಇತ್ತೀಚೆಗೆ ಸುಪ್ರೀಂ ಕೋರ್ಟ್, ಮಣಿಪುರ ಹಿಂಸಾಚಾರ ಕುರಿತು ವಿಚಾರಣೆ ನಡೆಸಿತ್ತು. ‘ಮಣಿಪುರದಲ್ಲಿ ಮತ್ತಷ್ಟು ಕಿಚ್ಚು ಹಚ್ಚಲು ಸುಪ್ರೀಂ ಕೋರ್ಟನ್ನು ವೇದಿಕೆ ಆಗಿ ಬಳಸಿಕೊಳ್ಳಬೇಡಿ’ ಎಂದು ಕೋರ್ಟ್ ಕಿಡಿಕಾರಿತ್ತು.
ಮಣಿಪುರದ ವಸ್ತುಸ್ಥಿತಿ ವರದಿ ಸಲ್ಲಿಸಿದ ರಾಜ್ಯ ಸರ್ಕಾರ, 142 ಜನರು ಗಲಭೆಯಲ್ಲಿ ಸಾವನ್ನಪ್ಪಿದ್ದಾರೆ. 5,995 ಎಫ್ಐಆರ್ ದಾಖಲಾಗಿದ್ದು, 6745 ಜನರನ್ನು ಬಂಧಿಸಲಾಗಿದೆ. 6 ಕೇಸುಗಳ ತನಿಖೆಯನ್ನು ಸಿಬಿಐ ನಡೆಸುತ್ತಿದೆ ಎಂದು ಹೇಳಿಕೆ ನೀಡಿದೆ.
A video showing two women being paraded naked by a mob in the violence-hit northeastern state of Manipur has sparked outrage in India. The police say they have opened a case of gang rape and arrested a man, adding that others will be held soon.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm