ಬ್ರೇಕಿಂಗ್ ನ್ಯೂಸ್
20-07-23 01:56 pm HK News Desk ದೇಶ - ವಿದೇಶ
ಹೊಸದಿಲ್ಲಿ, ಜು.20: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಮೌನ ಮುರಿದಿದ್ದಾರೆ. ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ನಡೆಸಿದ ಆಘಾತಕಾರಿ ವಿಡಿಯೋ ವಿಚಾರದಲ್ಲಿ ತಮ್ಮ ಹೃದಯ ನೋವಿನಿಂದ ತುಂಬಿಕೊಂಡಿದೆ ಎಂದು ಪ್ರಧಾನಿ ಹೇಳಿದ್ದಾರೆ.
ಮಣಿಪುರದ ಹೆಣ್ಣುಮಕ್ಕಳಿಗೆ ಆಗಿರುವುದನ್ನು ಎಂದಿಗೂ ಕ್ಷಮಿಸಲು ಸಾಧ್ಯವಿಲ್ಲ. ಈ ಘಟನೆಯು ದೇಶಕ್ಕೆ ಅವಮಾನಕರ. ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ" ಎಂದು ಸಂಸತ್ನ ಮುಂಗಾರು ಅಧಿವೇಶನ ಆರಂಭಕ್ಕೂ ಮುನ್ನ ಸುದ್ದಿಗಾರರ ಮುಂದೆ ಹೇಳಿಕೆ ನೀಡಿದರು.
ಮಣಿಪುರದ ಘಟನೆಯು ಯಾವುದೇ ಯೋಗ್ಯ ಸಮಾಜದಕ್ಕೆ ನಾಚಿಕೆಗೇಡಿನ ಸಂಗತಿ. ಪ್ರಜಾಪ್ರಭುತ್ವದ ಈ ದೇಗುಲದ ಪಕ್ಕದಲ್ಲಿ ನಿಂತಿರುವ ನನ್ನ ಹೃದಯವು ನೋವು ಹಾಗೂ ಆಕ್ರೋಶದಿಂದ ತುಂಬಿಕೊಂಡಿದೆ. ಮಣಿಪುರದ ಘಟನೆಯು ಯಾವುದೇ ನಾಗರಿಕ ಸಮಾಜಕ್ಕೆ ಅವಮಾನಕರ" ಎಂದು ಮಹಿಳೆಯರನ್ನು ಹೀನಾಯವಾಗಿ ನಡೆಸಿಕೊಂಡ ಘಟನೆಗೆ ಪ್ರತಿಕ್ರಿಯೆ ನೀಡಿದರು. ಅತ್ಯಾಚಾರಿಗಳನ್ನು ಬಿಡುವುದಿಲ್ಲ. ಮಹಿಳೆಯರ ರಕ್ಷಣೆ ವಿಚಾರದಲ್ಲಿ ನಾವು ರಾಜಕೀಯವನ್ನು ಮೀರಿ ಬೆಳೆಯಬೇಕು ಎಂದು ಹೇಳಿದರು.
ಯಾವುದೇ ತಪ್ಪಿತಸ್ಥರನ್ನು ಬಿಡುವುದಿಲ್ಲ ಎಂದು ನಾನು ಈ ದೇಶಕ್ಕೆ ಭರವಸೆ ನೀಡುತ್ತೇನೆ. ಕಾನೂನು ತನ್ನ ವ್ಯಾಪ್ತಿಯಲ್ಲಿನ ಎಲ್ಲಾ ಕ್ರಮಗಳನ್ನೂ ತೆಗೆದುಕೊಳ್ಳಲಿದೆ" ಎಂದು ಮೋದಿ ತಿಳಿಸಿದರು.
ರಾಜಸ್ಥಾನ, ಮಣಿಪುರ ಅಥವಾ ಛತ್ತೀಸಗಡವಿರಲಿ, ನಮ್ಮ ಎಲ್ಲಾ ಮಹಿಳೆಯರನ್ನು ಕಾಪಾಡುವಂತೆ ಎಲ್ಲಾ ಮುಖ್ಯಮಂತ್ರಿಗಳಿಗೂ ನಾನು ಮನವಿ ಮಾಡುತ್ತೇನೆ. ಮಹಿಳೆಯರನ್ನು ರಕ್ಷಿಸಲು ನಾವು ರಾಜಕೀಯ ಮೀರಿ ಏಳಬೇಕು" ಎಂದು ಹೇಳಿದರು.
ಮಣಿಪುರದಲ್ಲಿ ಇಬ್ಬರು ಆದಿವಾಸಿ ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ನಡೆಸಿದ್ದ ಎರಡು ತಿಂಗಳ ಹಿಂದಿನ ಘಟನೆಯ ವಿಡಿಯೋ ಈಗ ಎಲ್ಲೆಡೆ ಹರಿದಾಡುತ್ತಿದೆ. ಇದು ದೇಶಾದ್ಯಂತ ಆಕ್ರೋಶಕ್ಕೆ ಗುರಿಯಾಗಿದೆ. ಮೇ 4ರಂದು ಈ ಘಟನೆ ನಡೆದಿತ್ತು ಎನ್ನಲಾಗಿದೆ. ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ನಗ್ನರಾಗಿ ಮೆರವಣಿಗೆ ನಡೆಸಿ ಹೊಲಕ್ಕೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಎಂದು ವರದಿಯಾಗಿದೆ. ಘಟನೆ ನಡೆದು 77 ದಿನಗಳ ನಂತರ ವಿಡಿಯೋ ವೈರಲ್ ಆಗಿದ್ದು, ಮರುದಿನ ಒಬ್ಬಾತನನ್ನು ಬಂಧಿಸಲಾಗಿದೆ.
Ahead of the Monsoon Session of Parliament, Prime Minister Narendra Modi on Thursday addressed the viral video from Manipur and said that the incident in Manipur has put 140 crore Indians to shame. I want to assure the people of India that the accused will not be spared, he said. He has also urged the states to make arrangements stricter to safeguard women and take strict action against miscreants.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm