ಬ್ರೇಕಿಂಗ್ ನ್ಯೂಸ್
04-11-20 07:16 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 4 : ರಾಜಧಾನಿ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಉಗ್ರರ ಆತಂಕ ಎದುರಾಗಿದೆ. ಖಲೀಸ್ತಾನ್ ಉಗ್ರರು ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ಏರ್ಪೋರ್ಟಿನಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದೆ. ನ.5ರಂದು ಹೊರಡುವ ಎರಡು ಏರ್ ಇಂಡಿಯಾ ವಿಮಾನಗಳು ಲಂಡನ್ ತಲುಪದಂತೆ ನೋಡಿಕೊಳ್ಳುತ್ತೇವೆ ಎಂದು ಬೆದರಿಕೆ ಒಡ್ಡಲಾಗಿದೆ.
ಸಿಖ್ ಫಾರ್ ಜಸ್ಟಿಸ್ ಎನ್ನುವ ಗ್ರೂಪ್ ಸದಸ್ಯರು ಈ ಬೆದರಿಕೆ ಹಾಕಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಈ ಸಂಘಟನೆಯ ಗುರುಪತ್ವಂತ್ ಸಿಂಗ್ ಪನ್ನು ಎಂಬಾತ ಪೊಲೀಸರು ಸೇರಿದಂತೆ ಹಲವರಿಗೆ ಕರೆ ಮಾಡಿ ಬೆದರಿಕೆ ವಿಚಾರವನ್ನು ತಿಳಿಸಿದ್ದಾನೆ. ಗ್ರೂಪ್ ಸದಸ್ಯರು ದೆಹಲಿಯಿಂದ ಹೊರಟ ಏರ್ ಇಂಡಿಯಾ ವಿಮಾನಗಳು ಲಂಡನ್ ತಲುಪದಂತೆ ಮಾಡುವುದಾಗಿ ಹೇಳಿದ್ದಾನೆಂದು ಏರ್ಪೋರ್ಟ್ ಡಿಸಿಪಿ ರಾಜೀವ್ ರಂಜನ್ ತಿಳಿಸಿದ್ದಾರೆ.
ಈ ಮಾಹಿತಿ ಹಿನ್ನೆಲೆಯಲ್ಲಿ ದೆಹಲಿ ಏರ್ಪೋರ್ಟ್ ನಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದ್ದು, ಸಿಐಎಸ್ಎಫ್ ಸೇರಿದಂತೆ ಹೆಚ್ಚುವರಿ ಭದ್ರತೆಗೆ ಪೊಲೀಸರನ್ನು ನಿಯೋಜಿಸಲಾಗಿದೆ. ನವೆಂಬರ್ 5ರಂದು 1984ರ ಸಿಖ್ ವಿರೋಧಿ ದಂಗೆಯ 36ನೇ ವರ್ಷಾಚರಣೆಯನ್ನು ಸಿಕ್ಖರು ಮಾಡುತ್ತಿದ್ದು, ಅದೇ ದಿನ ಈ ಬೆದರಿಕೆ ಒಡ್ಡಲಾಗಿದೆ. ಪಂಜಾಬ್, ಹರಿಯಾಣ ಸೇರಿದಂತೆ ಕೆಲವು ಕಡೆ ಸಿಖ್ ಫಾರ್ ಜಸ್ಟಿಸ್ ಎನ್ನುವ ಗ್ರೂಪ್ ಕಟ್ಟಿಕೊಂಡು ಸಿಖ್ಖರು ಭಾರತದ ಭದ್ರತೆಗೆ ಬೆದರಿಕೆ ಒಡ್ಡಿದ್ದಾರೆ.
Delhi's Indira Gandhi International Airport has received a threat call regarding two Air India flights, scheduled to take off for London tomorrow. According to the police, the call was made by the banned pro-Khalistan outfit, Sikhs For Justice, which threatened that it will not let the flights land in Britain's capital.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am