ಬ್ರೇಕಿಂಗ್ ನ್ಯೂಸ್
06-08-20 06:39 am Headline Karnataka News Network ದೇಶ - ವಿದೇಶ
ಶ್ರೀನಗರ(ಆ. 06): ಜಮ್ಮು-ಕಾಶ್ಮೀರದ ಕುಲಗಾಮ್ ಜಿಲ್ಲೆಯಲ್ಲಿ ಬಿಜೆಪಿ ನಾಯಕರೊಬ್ಬರನ್ನು ಉಗ್ರರು ಗುಂಡಿಟ್ಟು ಕೊಂದಿದ್ದಾರೆ. ಸಾಜದ್ ಅಹ್ಮದ್ ಖಂಡೇ ಅವರು ಉಗ್ರರಿಗೆ ಬಲಿಯಾದ ಬಿಜೆಪಿ ನಾಯಕ. ಜಿಲ್ಲೆಯ ಖಾಜಿಗುಂದ್ ಗ್ರಾಮದ ಸರ್ಪಂಚ್ ಆಗಿದ್ದ ಸಾಜದ್ ಅವರು ಕುಲಗಾಮ್ ಜಿಲ್ಲೆಯ ಬಿಜೆಪಿ ಉಪಾಧ್ಯಕ್ಷರಾಗಿದ್ದರು.
ಗುರುವಾರ ಬೆಳಗ್ಗೆ ಸಾಜದ್ ಮನೆಯ ಬಳಿ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಅವರನ್ನ ಅನಂತನಾಗ್ ಜಿಲ್ಲೆಯ ಆಸ್ಪತ್ರೆಯೊಂದಕ್ಕೆ ಸಾಗಿಸುವಷ್ಟರಲ್ಲಿ ಸಾವನ್ನಪ್ಪಿದ್ದಾರೆ.
ಕುಲಗಾಂ ಜಿಲ್ಲೆಯಲ್ಲಿ ಎರಡು ದಿನಗಳ ಅಂತರದಲ್ಲಿ ಬಿಜೆಪಿ ನಾಯಕರ ಮೇಲೆ ನಡೆದ ಎರಡನೇ ದಾಳಿ ಇದಾಗಿದೆ. ಮೊನ್ನೆಯಷ್ಟೇ (ಆ. 4ರಂದು) ಕುಲಗಾಮ್ ಜಿಲ್ಲೆಯ ಮತ್ತೊಬ್ಬ ಬಿಜೆಪಿ ಸರ್ಪಂಚ್ ಆಗಿದ್ದ ಅರಿಫ್ ಅಹ್ಮದ್ ಅವರ ಮೇಲೆ ಉಗ್ರರು ಗುಂಡಿನ ದಾಳಿ ಎಸಗಿದ್ದರು. ಅದೃಷ್ಟಕ್ಕೆ ಅರಿಫ್ ಅವರು ಸಾವಿನಿಂದ ಪಾರಾದರೂ ಗಂಭೀರವಾಗಿ ಗಾಯಗೊಂಡಿದ್ದರು.
ಇತ್ತೀಚೆಗೆ ಬಹಳಷ್ಟು ಉಗ್ರರನ್ನು ಸಂಹರಿಸಲಾಗಿದೆ. ಇದರಿಂದ ಹತಾಶೆಗೊಂಡು ಸುಲಭ ಗುರಿಗಳ ಮೇಲೆ ದಾಳಿ ಮಾಡಲಾಗುತ್ತಿದೆ. ಅಗತ್ಯ ಇರುವ ಕಡೆ ಭದ್ರತೆ ಒದಗಿಸುತ್ತಿದ್ದೇವೆ. ಅಪಾಯವನ್ನು ಅಂದಾಜು ಮಾಡುವುದು ನಿರಂತರ ಪ್ರಕ್ರಿಯೆಯಾಗಿದೆ” ಎಂದು ಮುರ್ಮು ಹೇಳಿದ್ಧಾರೆ. ಮುರ್ಮು ಅವರು ನೂತನ ಸಿಎಜಿಯಾಗಿ ನೇಮಕವಾಗುತ್ತಿದ್ದು, ಜಮ್ಮು-ಕಾಶ್ಮೀರದ ಉಪರಾಜ್ಯಪಾಲರಾಗಿ ಅವರ ಸ್ಥಾನವನ್ನು ಮನೋಜ್ ಸಿನ್ಹ ತುಂಬಲಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm