ಬ್ರೇಕಿಂಗ್ ನ್ಯೂಸ್
06-08-20 07:12 am Headline Karnataka News Network ದೇಶ - ವಿದೇಶ
ನವದೆಹಲಿ(ಆ. 06): ಆರ್ಥಿಕ ಅಧಃಪತನವನ್ನು ತಪ್ಪಿಸಲು ರೆಪೋ ದರ ಇನ್ನಷ್ಟು ಇಳಿಯಬಹುದು ಎಂಬ ಉದ್ಯಮಪಂಡಿತರ ನಿರೀಕ್ಷೆ ಇವತ್ತು ಹುಸಿಯಾಗಿದೆ. ರೆಪೋ ಮತ್ತು ರಿವರ್ಸ್ ರೆಪೋ ದರದಲ್ಲಿ ಯಥಾಸ್ಥಿತಿ ಪಾಲನೆ ಮಾಡಲು ಆರ್ಬಿಐ ನಿರ್ಧರಿಸಿದೆ.
ಹಣಕಾಸು ಚಲನೆಗೆ ಪ್ರಮುಖ ಪಾತ್ರ ವಹಿಸುವ ರೆಪೋ ದರ ಶೇ. 4ರಲ್ಲಿ ಮುಂದುವರಿಯಲಿದೆ. ಭಾರತೀಯ ರಿಸರ್ವ್ ಬ್ಯಾಂಕ್ನ ಹಣಕಾಸು ನೀತಿ ಸಮಿತಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಭೆಯ ಬಳಿಕ ಮಾಧ್ಯಮಗಳಿಗೆ ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ತಿಳಿಸಿದ್ದಾರೆ.
ಜಾಗತಿಕ ಆರ್ಥಿಕ ಚಟುವಟಿಕೆ ಬಹಳ ಸೂಕ್ಷ್ಮ ಸ್ಥಿತಿಯಲ್ಲೇ ಮುಂದುವರಿದಿದೆ. ಆದರೆ, ಜಾಗತಿಕ ಹಣಕಾಸು ಮಾರುಕಟ್ಟೆಗಳು ಆಶಾದಾಯಕವೆನಿಸಿವೆ ಎಂದು ಆರ್ಬಿಐ ಗವರ್ನರ್ ಹೇಳಿದ್ದಾರೆ.
ಈ ಬಾರಿಯ ಎಂಪಿಸಿ ಸಭೆಯಲ್ಲಿ ರೆಪೋ ದರವನ್ನು 25 ಮೂಲಾಂಕಗಳಷ್ಟು ಇಳಿಸಲು ನಿರ್ಧರಿಸಬಹುದು ಎಂದು ರಾಯ್ಟರ್ಸ್ ಸುದ್ದಿ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಶೆ. 75ರಷ್ಟು ಅರ್ಥಶಾಸ್ತ್ರಜ್ಞರು ಅಂದಾಜು ಮಾಡಿದ್ದರು. ಈ ತ್ರೈಮಾಸಿಕವಷ್ಟೇ ಅಲ್ಲ ಮುಂದಿನ ತ್ರೈಮಾಸಿಕದಲ್ಳೂ 25 ಬೇಸಿಸ್ ಪಾಯಿಂಟ್ ಇಳಿಕೆಯಾಗಿ ರೆಪೋ ದರ ಶೇ 3.5ಕ್ಕೆ ಇಳಿಕೆಯಾಗಬಹುದು ಎಂದು ತಜ್ಞರು ನಿರೀಕ್ಷಿಸಿದ್ದರು. ಆದರೆ, ಎಂಪಿಸಿ ಸಭೆಯಲ್ಲಿ ಯಥಾಸ್ಥಿತಿ ಪಾಲನೆಯ ನಿರ್ಧಾರದೊಂದಿಗೆ ದೇಶದ ಅರ್ಥಶಾಸ್ತ್ರಜ್ಞರ ನಿರೀಕ್ಷೆ ಹುಸಿಯಾದಂತಾಗಿದೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am