ಬ್ರೇಕಿಂಗ್ ನ್ಯೂಸ್
14-08-23 02:03 pm HK News Desk ದೇಶ - ವಿದೇಶ
ಚೆನ್ನೈ, ಆಗಸ್ಟ್ 14: ನೀಟ್ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿಫಲರಾದ ನಂತರ 19 ವರ್ಷದ ಮಗ ಆತ್ಮಹತ್ಯೆ ಮಾಡಿಕೊಂಡ ಒಂದು ದಿನದ ನಂತರ, ಯುವಕನ ತಂದೆ ಕೂಡ ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ವರದಿಯಾಗಿದೆ.
ತಮಿಳುನಾಡಿನ ಚೆನ್ನೈನಲ್ಲಿರುವ ತನ್ನ ಮನೆಯಲ್ಲಿ ತಂದೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ 2022 ರಲ್ಲಿ 12 ನೇ ತರಗತಿಯಲ್ಲಿ 427 ಅಂಕಗಳೊಂದಿಗೆ ಪಾಸಾಗಿದ್ದ ಜಗದೀಶ್ವರನ್ ಎಂಬ ವಿದ್ಯಾರ್ಥಿ ಸತತ ಎರಡು ಪ್ರಯತ್ನಗಳಲ್ಲಿ ನೀಟ್ ಪ್ರವೇಶ ಪರೀಕ್ಷೆಯನ್ನು ಪಾಸಾಗಲು ಸಾಧ್ಯವಾಗಲಿಲ್ಲ. ಇತ್ತೀಚಿನ ಫಲಿತಾಂಶದಿಂದ ತೀವ್ರ ನೊಂದಿದ್ದ ಜಗದೀಶ್ವರನ್ ಶನಿವಾರ ತಂದೆ ಕರೆ ಮಾಡಿದರೂ ಸ್ಪಂದಿಸಿರಲಿಲ್ಲ. ನಂತರ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಜಗದೀಶ್ವರನ್ ಆತ್ಮಹತ್ಯೆಗೆ ತುತ್ತಾಗಿದ್ದರು. ಆದರೆ ಇದೇ ನೋವಲ್ಲಿದ್ದ ತಂದೆ ಸೆಲ್ವಶೇಖರ್ ಅವರೂ ಕೂಡ ಇಂದು ಶವವಾಗಿ ಪತ್ತೆಯಾಗಿದ್ದಾರೆ.
ಮಗ ಜಗದೀಶ್ವರನ್ ಸಾವನ್ನಪ್ಪಿದ ಮಾರನೇ ದಿನವೇ ತಂದೆ ಸೆಲ್ವಶೇಖರ್ ಶವವಾಗಿ ಪತ್ತೆಯಾಗಿದ್ದರು. ಮಗನ ಸಾವಿನ ದುಃಖ ತಾಳಲಾರದೆ ಸೆಲ್ವಶೇಖರ್ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ .ಸ್ಟಾಲಿನ್ ಅವರು ಸಾವಿಗೆ ಸಂತಾಪ ಸೂಚಿಸಿದ್ದು, "ಆತ್ಮಹತ್ಯೆಯ ಆಲೋಚನೆಗಳನ್ನು ಮಾಡಬೇಡಿ. ಆತ್ಮ ವಿಶ್ವಾಸವನ್ನು ಹೊಂದಲು ಹಾಗೂ ಬದುಕಲು ಕಲಿಯಿರಿ" ಎಂದು ವಿದ್ಯಾರ್ಥಿಗಳಿಗೆ ಮನವಿ ಮಾಡಿದ್ದಾರೆ.
ಇದೇ ವೇಳೆ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್, ನಿಮ್ಮ ಗುರಿಗೆ ತೊಡಕಾಗಿರುವ ನೀಟ್ ಪರೀಕ್ಷೆಯನ್ನು ನಾವು ಖಂಡಿತವಾಗಿಯೂ ತೆಗೆದು ಹಾಕುತ್ತೇವೆ. ಯಾರೂ ಕೂಡ ಯಾವುದೇ ಕಾರಣಕ್ಕೂ ಆತ್ಮಹತ್ಯೆ ಮಾಡಿಕೊಳ್ಳಬಾರದು ಎಂದು ನಾನು ವಿದ್ಯಾರ್ಥಿಗಳೊಂದಿಗೆ ಮನವಿ ಮಾಡುತ್ತೇನೆ. ನಿಮ್ಮ ಗುರಿಗೆ ತೊಡಕಾಗಿರುವ ನೀಟ್ ಪರೀಕ್ಷೆಯನ್ನು ನಾವು ಖಂಡಿತವಾಗಿಯೂ ತೆಗೆದುಹಾಕುತ್ತೇವೆ. ತಮಿಳುನಾಡು ಸರ್ಕಾರ ಈ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳುವ ನಿಟ್ಟಿನಲ್ಲಿ ಕಾರ್ಯಪ್ರವೃತವಾಗಿದೆ ಎಂದು ಹೇಳಿದ್ದಾರೆ.
ನೀಟ್ ಅಭ್ಯರ್ಥಿ ಜಗದೀಶ್ವರನ್, ಆತ್ಮಹತ್ಯೆ ಮಾಡಿಕೊಂಡಿದ್ದು ಕೇಳಿ ನನಗೆ ಆಘಾತವಾಯಿತು. ಅವರ ಪೋಷಕರನ್ನು ಸಮಾಧಾನ ಮಾಡುವುದು ಹೇಗೆ ಎಂದು ಯೋಚಿಸುತ್ತಿರುವಾಗಲೇ, ಅವರ ತಂದೆ ಸೆಲ್ವಶೇಖರ್ ಕೂಡ ಆತ್ಮಹತ್ಯೆ ಮಾಡಿಕೊಂಡರು. ಜಗದೀಶ್ವರನ್ ಅವರ ಕುಟುಂಬ, ಸ್ನೇಹಿತ ವರ್ಗ ಹಾಗೂ ಬಂಧು ಬಳಗಕ್ಕೆ ಹೇಗೆ ಸಾಂತ್ವನ ಹೇಳುವುದು ಎಂದು ನನಗೆ ತಿಳಿಯತ್ತಿಲ್ಲ. ವೈದ್ಯನಾಗುವ ಆಸೆ ಕಂಡಿದ್ದ ಬುದ್ದಿವಂತ ವಿದ್ಯಾರ್ಥಿಯೊಬ್ಬ ನೀಟ್ನಿಂದ ಆತ್ಮಹತ್ಯೆ ಮಾಡಿಕೊಂಡವರ ಸಾಲಿಗೆ ಸೇರಿದ್ದು ದುರಂತ’ ಎಂದು ಅವರು ಹೇಳಿದ್ದಾರೆ.
A 19-year-old medical aspirant died by suicide in Chennai after he failed to clear the NEET exam twice. He was found hanging in his room. He was rushed to a hospital where he was declared brought dead.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm