ಬ್ರೇಕಿಂಗ್ ನ್ಯೂಸ್
16-08-23 02:07 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 16: ಹರ್ಯಾಣದ ನೂಹ್ ಜಿಲ್ಲೆಯಲ್ಲಿ ನಡೆದ ಹಿಂಸಾಚಾರ, ಗಲಭೆ ಪ್ರಕರಣದ ಹಿಂದಿನ ಮಾಸ್ಟರ್ ಮೈಂಡ್ ಎನ್ನಲಾದ ಬಿಟ್ಟು ಬಜರಂಗಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಸ್ವಯಂಘೋಷಿತ ಗೋರಕ್ಷಕ ಬಿಟ್ಟು ಬಜರಂಗಿ, ಎರಡು ವಾರಗಳ ಹಿಂದೆ ನುಹ್ನಲ್ಲಿ ನಡೆದ ಧಾರ್ಮಿಕ ಮೆರವಣಿಗೆಯಲ್ಲಿ ಭಾಗವಹಿಸಿದ್ದ. ಈ ವೇಳೆ ಕತ್ತಿ, ತ್ರಿಶೂಲಗಳನ್ನು ಮೆರವಣಿಗೆಯಲ್ಲಿ ಹೊತ್ತೊಯ್ಯುತ್ತಿದ್ದರು. ಸ್ಥಳದಲ್ಲಿದ್ದ ಪೊಲೀಸರು ಶಸ್ತ್ರಾಸ್ತ್ರಗಳನ್ನು ಬಳಸದಂತೆ ವಿರೋಧಿಸಿದ್ದರು. ಅಲ್ಲದೆ, ಕೈಯಲ್ಲಿ ಹಿಡಿದುಕೊಂಡಿದ್ದ ಕತ್ತಿ ಹಾಗೂ ಇತರ ಆಯುಧಗಳನ್ನು ವಶಕ್ಕೆ ಪಡೆದಿದ್ದರು ಈ ವೇಳೆ ಬಿಟ್ಟು ಭಜರಂಗಿ ಹಾಗೂ ಇತರರು ಜೋರಾಗಿ ಘೋಷಣೆಗಳನ್ನು ಕೂಗುತ್ತಾ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದು ಶಸ್ತ್ರಾಸ್ತ್ರಗಳನ್ನು ಕಿತ್ತು ಪರಾರಿಯಾಗಿದ್ದರು.


ಆನಂತರ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ ಪೊಲೀಸರು ಹಲವರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಜನರು ಹಿಂಸಾಚಾರಕ್ಕಿಳಿಯಲು ಕಾರಣವಾಗಿದ್ದ ಬಿಟ್ಟು ಬಜರಂಗಿಯನ್ನು ಬಂಧಿಸಲು ಪೊಲೀಸರು ತೆರಳಿದ್ದರು. ಪೊಲೀಸರನ್ನು ಕಂಡು ತಪ್ಪಿಸಿಕೊಳ್ಳಲು ಯತ್ನಿಸಿದ್ದು ಬೆನ್ನಟ್ಟಿ ಹಿಡಿದು ಬಂಧಿಸಿದ್ದಾರೆ.
ಪೊಲೀಸರ ಕಾರ್ಯಾಚರಣೆಯ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಸಿವಿಲ್ ವಸ್ತ್ರದಲ್ಲಿದ್ದ ಹತ್ತಕ್ಕೂ ಹೆಚ್ಚು ಪೊಲೀಸರು ಭಜರಂಗಿಯನ್ನು ಬೆನ್ನಟ್ಟಿ ವಶಕ್ಕೆ ಪಡೆಯುವ ವಿಡಿಯೋ ವೈರಲ್ ಆಗಿದೆ.
ಬಿಟ್ಟು ಬಜರಂಗಿ ಮತ್ತು ಅವರ ಬೆಂಬಲಿಗರ ವಿರುದ್ಧ ಸೆಕ್ಷನ್ 148 (ಗಲಭೆ, ಮಾರಣಾಂತಿಕ ಆಯುಧಗಳಿಂದ ಶಸ್ತ್ರಸಜ್ಜಿತರಾಗಿರುವುದು), 149 (ಕಾನೂನುಬಾಹಿರ ಸಭೆ), 186 (ಕರ್ತವ್ಯ ನಿರ್ವಹಣೆಗೆ ಅಡ್ಡಿ), 332 (ಇತರರಿಗೆ ನೋವುಂಟು ಮಾಡುವುದು) ಅಡಿಯಲ್ಲಿ ದೂರು ದಾಖಲಿಸಲಾಗಿದೆ. 395 (ದರೋಡೆ), 397 (ಹಲ್ಲೆಗೆ ಯತ್ನ), 506 (ಬೆದರಿಕೆ) ದಂಡ ಸಂಹಿತೆ (IPC) ಮತ್ತು ಶಸ್ತ್ರಾಸ್ತ್ರ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ.
ittu Bajrangi was arrested on August 15 in connection with communal clashes that erupted in Haryana's Nuh district on July 31, police said. Bajrangi alias Rajkumar was questioned in connection with a fresh FIR registered him at Nuh's Sadar police station based on a complaint by Assistant Superintendent of Police Usha Kundu, they said.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm