ಬ್ರೇಕಿಂಗ್ ನ್ಯೂಸ್
20-08-23 09:41 pm HK News Desk ದೇಶ - ವಿದೇಶ
ಉತ್ತರಾಖಂಡ, ಆಗಸ್ಟ್ 20:ಇಲ್ಲಿನ ಗಂಗೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಸಂಜೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. 33 ಪ್ರಯಾಣಿಕರಿದ್ದ ಖಾಸಗಿ ಬಸ್ ಆಳವಾದ ಕಂದಕಕ್ಕೆ ಉರುಳಿ ಬಿದ್ದಿದ್ದು, ಸದ್ಯಕ್ಕೆ 7 ಮಂದಿ ದಾರುಣವಾಗಿ ಪ್ರಾಣ ಕಳೆದುಕೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಮಾಹಿತಿಯ ಪ್ರಕಾರ, ಗುಜರಾತ್ನಿಂದ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಗಂಗೋತ್ರಿ ಹೆದ್ದಾರಿಯ ಗಂಗ್ನಾನಿ ಎಂಬಲ್ಲಿ ಆಳವಾದ ಕಮರಿಗೆ ಬಿದ್ದಿದೆ. ಬಸ್ ಗಂಗೋತ್ರಿಧಾಮದಿಂದ ಉತ್ತರಕಾಶಿ ಕಡೆಗೆ ಹೋಗುತ್ತಿತ್ತು. ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿ, 22 ಮಂದಿ ಗಾಯಗೊಂಡಿದ್ದಾರೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಇಲಾಖೆ ಖಚಿತಪಡಿಸಿದೆ. ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕಳುಹಿಸಲಾಗುತ್ತಿದೆ. ಭಾನುವಾರ ಸಂಜೆ 4:15 ರ ಸುಮಾರಿಗೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಘಟನೆಯ ಬಗ್ಗೆ ಮಾಹಿತಿ ತಿಳಿದ ಪೊಲೀಸರು, ಎಸ್ಡಿಆರ್ಎಫ್ ಮತ್ತು ಎನ್ಡಿಆರ್ಎಫ್ ತಂಡಗಳು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಪರಿಹಾರ ಕಾರ್ಯಕ್ಕೆ ಅಗತ್ಯವಿದ್ದಲ್ಲಿ ಹೆಲಿಕಾಪ್ಟರ್ಗಳನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಆದೇಶ ಬಂದಿದೆ.
ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ತಂಡವು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಮೃತರ ಮತ್ತು ಗಾಯಾಳುಗಳ ಗುರುತು ಪತ್ತೆ ಹಚ್ಚಲಾಗುತ್ತಿದೆ. ಅಪಘಾತಕ್ಕೀಡಾದ ಬಸ್ನಲ್ಲಿ ಇದ್ದ ಎಲ್ಲರೂ ಗುಜರಾತಿ ಯಾತ್ರಾರ್ಥಿಗಳು ಎಂದು ತಿಳಿದುಬಂದಿದೆ. ಅಪಘಾತಕ್ಕೆ ಕಾರಣ ಮತ್ತು ನಿಖರವಾದ ಸಮಯ ಗೊತ್ತಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದರು.
In a painful incident that surfaced from Uttarakhand’s Uttarkashi district, a bus carrying around 33 pilgrims from Gujarat crashed into a gorge on Gangotri highway. The incident is said to have taken place on Sunday at around 4.30 PM. As per reports, one pilgrim died in the accident, while several others got severely injured.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm