ಬ್ರೇಕಿಂಗ್ ನ್ಯೂಸ್
21-08-23 01:27 pm HK News Desk ದೇಶ - ವಿದೇಶ
ಕಾನ್ಪುರ, ಆಗಸ್ಟ್ 21: ಗುಜರಾತಿನಲ್ಲಿ ಹಾವು ಕಡಿತಕ್ಕೊಳಗಾದ ಯುವಕನೊಬ್ಬ ಚಿಕಿತ್ಸೆಗಾಗಿ ಸುಮಾರು 1,300 ಕಿ.ಮೀ ಕ್ರಮಿಸಿ ಉತ್ತರ ಪ್ರದೇಶದ ಕಾನ್ಪುರ ತಲುಪಿ ಬದುಕುಳಿದಿರುವ ಅಚ್ಚರಿಯ ಘಟನೆ ನಡೆದಿದೆ. ಕಿಶನ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮ ಫತೇಪುರದ ಸುನಿಲ್ ಕುಮಾರ್ (20) ನೇ ಹೀಗೆ ಬದುಕುಳಿದ ಯುವಕನಾಗಿದ್ದಾನೆ
ಈತ ಗುಜರಾತ್ನ ರಾಜ್ಕೋಟ್ನಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಆಗಸ್ಟ್ 15ರಂದು ಆತನಿಗೆ ಹಾವು ಕಚ್ಚಿದೆ. ತಕ್ಷಣವೇ ಅವನನ್ನು ಸ್ಥಳೀಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ. ಆದರೆ, ಸುನಿಲ್ ಆರೋಗ್ಯ ಹಾವು ಕಡಿತದಿಂದ ಹದಗೆಡುತ್ತಾ ಹೊರಟಿತ್ತು. ಅಲ್ಲದೆ ಆತ ಪ್ರಜ್ಞಾಹೀನಾಗಿದ್ದ. ಕುಟುಂಬದವರಿಗೆಲ್ಲ ಒಂದು ಬಾರಿ ಹೃದಯ ಬಡಿತ ನಿಂತಂತಾಗಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ತಡಮಾಡದೇ ಕಾನ್ಪುರದ ಲಾಲಾ ಲಜಪತ್ ರಾಯ್ ಆಸ್ಪತ್ರೆಗೆ ಕರೆದೊಯ್ಯಲು ನಿರ್ಧರಿಸಿದರು.
ಆದರೆ, ಗುಜಾರತ್ನಿಂದ ಉತ್ತರಪ್ರದೇಶದ ಕಾನ್ಪುರ ಆಸ್ಪತ್ರೆಗೆ ಸುಮಾರು 1.300 ಕಿ.ಮೀ ದೂರವಿದೆ. ಈ ತುರ್ತು ಪರಿಸ್ಥಿತಿಯಲ್ಲಿ ಅಷ್ಟು ದೂರ ಕ್ರಮಿಸಿ ಸುನಿಲ್ನನ್ನು ಉಳಿಸಿಕೊಳ್ಳುವುದು ಕುಟುಂಬದವರಿಗೆ ಸವಾಲಾಗಿತ್ತು. ತಕ್ಷಣವೇ ಗುಜರಾತ್ನಲ್ಲಿ 51,000 ರೂಪಾಯಿಗಳಿಗೆ ಅಡ್ವಾನ್ಸ್ಡ್ ಲೈಫ್ ಸಪೋರ್ಟ್ (ALS) ಆಂಬ್ಯುಲೆನ್ಸ್ನ್ನು ಬಾಡಿಗೆಗೆ ಪಡೆದು ಸುನಿಲ್ನ್ನು 1300 ಕಿಮೀ ಪ್ರಯಾಣಿಸಿ ಲಾಲಾ ಲಜಪತ್ ರಾಯ್ ಆಸ್ಪತ್ರೆಗೆ ದಾಖಲಿಸಿದರು.
ಆಸ್ಪತ್ರೆಗೆ ತಲುಪಿದ ಕೂಡಲೇ ಸುನಿಲ್ನನ್ನು ವೆಂಟಿಲೇಟರ್ನಲ್ಲಿರಿಸಿ ಚಿಕಿತ್ಸೆ ಆರಂಭಿಸಲಾಯಿತು. ತುರ್ತು ಚಿಕಿತ್ಸೆ ನೀಡಿ ಪ್ರತಿ ನಿಮಿಷ ಸುನಿಲ್ ಆರೋಗ್ಯದ ಮೇಲೆ ನಿಗಾ ಇಡಲಾಯಿತು. ಅದೃಷ್ಟವಶಾತ್ ಸುನಿಲ್ ನಿಧಾನವಾಗಿ ಚಿಕಿತ್ಸೆಗೆ ಸ್ಪಂದಿಸುತ್ತಾ ಚೇತರಿಸಿಕೊಳ್ಳಲು ಪ್ರಾರಂಭಿಸಿದರು. ಅಂತಿಮವಾಗಿ ಶನಿವಾರ ಆತನಿಗೆ ಅಳವಡಿಸಿದ್ದ ವೆಂಟಿಲೇಟರ್ನ್ನು ತೆಗೆಯಲಾಗಿದೆ.
ವರದಿಗಳ ಪ್ರಕಾರ ಹಾವು ಕಡಿತಕ್ಕೆ ಒಳಗಾದ ವ್ಯಕ್ತಿಗಳು ಶೇಕಡಾ 75 ರಷ್ಟು ಜನ ತಮಗೆ ಹಾವು ಕಚ್ಚಿದೆ ಎಂಭ ಭಯದಿಂದಲೇ ಸಾವನ್ನಪ್ಪುತ್ತಾರೆ. ಹಾವು ಕಚ್ಚಿದ್ದಾಗ ಭಯಗೊಂಡರೇ ನಿಮ್ಮ ಹೃದಯ ಬಡಿತ ಹೆಚ್ಚಾಗುತ್ತದೆ. ಇದರಿಂದ ದೇಹ ಸೇರಿರುವ ಹಾವಿನ ವಿಷ ಬೇಗ ನಿಮ್ಮ ರಕ್ತನಾಳಗಳ ಮೂಲಕ ದೇಹದ ತುಂಬೆಲ್ಲ ಪಸರಿಸುತ್ತದೆ. ಪರಿಣಾಮ ಬೇಗ ಉಸಿರು ಚೆಲ್ಲುವ ಸಾಧ್ಯತೆ ಹೆಚ್ಚು ಅಂತಾ ತಜ್ಞರು.
A youth, bitten by a snake in Gujarat on August 15, travelled around 1,300 km and reached Kanpur in Uttar Pradesh for his treatment. Sunil Kumar, 20, of Fatehpur works as a labourer in Rajkot, Gujarat, where a snake bit him. He was rushed to a health centre there but his condition worsened and later, he became unconscious.
10-04-25 04:40 pm
Bangalore Correspondent
Lokayukta Shivamogga arrest: ಶಿವಮೊಗ್ಗ ಸ್ಮಾರ್ಟ...
09-04-25 09:31 pm
Vijayapura accident, Death: ಯಮನಂತೆ ಬಂದ ಲಾರಿ ;...
09-04-25 09:21 pm
ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಗಂಭೀರ ಆರೋಪ...
09-04-25 06:21 pm
Kukke Subrahmanya, New Train Service, Ministe...
09-04-25 04:05 pm
10-04-25 09:10 pm
HK News Desk
ಪಂಬನ್ ಸೇತುವೆ ಬೆನ್ನಲ್ಲೇ ಲಂಕಾ- ಭಾರತ ರೈಲ್ವೇ ಯಾನ...
10-04-25 01:25 pm
ಪಿಯುಸಿ ಹುಡುಗನ ವರಿಸಿದ ಮೂರು ಮಕ್ಕಳ ತಾಯಿ ; ಇಸ್ಲಾಂ...
10-04-25 11:30 am
Tahawwur Rana, India: ಮುಂಬೈ ದಾಳಿಯ ಮಾಸ್ಟರ್ ಮೈಂ...
09-04-25 04:07 pm
ಡೊನಾಲ್ಡ್ ಟ್ರಂಪ್ ಸುಂಕ ಬರೆಗೆ ಜಗತ್ತು ತಲ್ಲಣ ; ಕೋವ...
07-04-25 10:53 pm
10-04-25 10:41 pm
Mangalore Correspondent
Mangalore, Netravati Bridge Repair, Traffic b...
10-04-25 09:48 pm
Mangalore Accident, Padil: ಪಡೀಲ್ ; ಚಾಲಕನ ನಿಯಂ...
09-04-25 10:57 pm
Mangalore BJP Janakrosha Rally, Protest: ಕರ್ನ...
09-04-25 10:23 pm
Kpt Accident, Mangalore: ಕೆಪಿಟಿ ಬಳಿ ಭೀಕರ ಅಪಘಾ...
08-04-25 08:58 pm
10-04-25 08:41 pm
HK News Desk
Puttur crime, Sword, Mangalore: ಪುತ್ತೂರಿನಲ್ಲಿ...
10-04-25 02:57 pm
ಸಾಮೂಹಿಕ ವಿವಾಹ ಹೆಸರಲ್ಲಿ ಬಡ ಯುವತಿಯರ ಮಾರಾಟ ಜಾಲ ;...
09-04-25 11:17 pm
Kalaburagi ATM Robbery: ಬೀದರ್ ದರೋಡೆ ಬೆನ್ನಲ್...
09-04-25 08:15 pm
Mangalore Gold smuggling, Crime, CCB: ಇಬ್ಬರು...
08-04-25 11:04 pm