ಬ್ರೇಕಿಂಗ್ ನ್ಯೂಸ್
29-08-23 09:41 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 29: ನಾಲ್ಕು ರಾಜ್ಯಗಳ ಚುನಾವಣೆ ಮೇಲೆ ಕಣ್ಣಿಟ್ಟಿರುವ ಕೇಂದ್ರ ಸರ್ಕಾರ ಗೃಹೋಪಯೋಗಿ ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯನ್ನು 200 ರೂ.ನಷ್ಟು ಇಳಿಸಲು ನಿರ್ಧರಿಸಿದೆ. ಮಂಗಳವಾರ ಕೇಂದ್ರ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಆಗಿದ್ದು ಬುಧವಾರದಿಂದಲೇ ಹೊಸ ದರ ಅನ್ವಯವಾಗಲಿದೆ.
ಸದ್ಯ 14 ಕಿಲೋ ಎಲ್ಪಿಜಿ ಸಿಲಿಂಡರ್ ಬೆಲೆ 1,100 ರೂ. ಅಸುಪಾಸಿನಲ್ಲಿ ಇದೆ. 200 ರೂ. ಸಬ್ಸಿಡಿ ಘೋಷಿಸಿದ್ದು ಹೊಸ ಬೆಲೆಯ ಪ್ರಕಾರ, ಸಿಲಿಂಡರ್ ಬೆಲೆ 900 ರೂ.ಗೆ ಇಳಿಯಲಿದೆ. ಪಿಎಂ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಸಿಲಿಂಡರ್ ದರ ಮತ್ತಷ್ಟು ಇಳಿಯಲಿದೆ. ಉಜ್ವಲ ಯೋಜನೆಯಡಿ ಈಗಾಗಲೇ 200 ರೂ. ಸಬ್ಸಿಡಿ ಇರುವುದರಿಂದ ಅವರಿಗೆ ಈಗ 400 ರೂ. ಒಟ್ಟು ಬೆಲೆಯಲ್ಲಿ ಇಳಿಕೆಯಾಗಲಿದ್ದು 700 ರೂ. ಅಂದಾಜಿಗೆ ಸಿಲಿಂಡರ್ ಸಿಗಲಿದೆ.
ಸಬ್ಸಿಡಿ ರಹಿತ 14 ಕಿಲೋ ಎಲ್ಪಿಜಿ ಸಿಲಿಂಡರ್ ದರ ಬೆಂಗಳೂರಿನಲ್ಲಿ 1,105.50 ರೂ ಇದೆ. ಕೋಲ್ಕತಾದಲ್ಲಿ 1,118.50 ರೂ ಇದೆ. ಚೆನ್ನೈನಲ್ಲಿ 1,102.50 ರೂ ಇದೆ. ದೆಹಲಿಯಲ್ಲಿ 1103 ರೂ. ಇದೆ. ಸಂಪುಟ ಸಭೆಯ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಅನುರಾಗ್ ಠಾಕೂರ್, ಇದು ಕೇಂದ್ರ ಸರ್ಕಾರ ನೀಡುತ್ತಿರುವ ಓಣಂ ಗಿಫ್ಟ್ ಎಂದು ಹೇಳಿ ಸಿಲಿಂಡರ್ ಬೆಲೆ ಇಳಿಕೆಯ ಮಾಹಿತಿ ನೀಡಿದ್ದಾರೆ. ಇದೇ ವೇಳೆ, ಪಿಎಂ ಉಜ್ವಲ ಯೋಜನೆಯಡಿ 75 ಲಕ್ಷ ಕುಟುಂಬಗಳಿಗೆ ಹೊಸತಾಗಿ ಗ್ಯಾಸ್ ಕನೆಕ್ಷನ್ ನೀಡಲಾಗುವುದು ಎಂದಿದ್ದಾರೆ.
ಮೇ ತಿಂಗಳ ನಂತರ ಐಒಸಿ, ಭಾರತ್ ಪೆಟ್ರೋಲಿಯಂ ಮೊದಲಾದ ತೈಲ ಮಾರುಕಟ್ಟೆ ಕಂಪನಿಗಳು ಮೂರು ಬಾರಿ ಎಲ್ಪಿಜಿ ದರಗಳನ್ನು ಏರಿಸಿವೆ. ಜುಲೈ ತಿಂಗಳಲ್ಲಿ 50 ರೂ. ಹೆಚ್ಚಳವಾಗಿತ್ತು. 2021ರ ಫೆಬ್ರವರಿಯಲ್ಲಿ ಸಿಲಿಂಡರ್ ದರ 694 ರೂ. ಇತ್ತು. ಆನಂತರ, ಎರಡು ವರ್ಷಗಳಲ್ಲಿ 13 ಬಾರಿ ದರ ಏರಿಸಿದ್ದು ಈವರೆಗಿನ ಗರಿಷ್ಠ ದರವಾಗಿ 1100 ರೂ. ಗಡಿ ದಾಟಿತ್ತು. ಈ ವರ್ಷಾಂತ್ಯದಲ್ಲಿ ನಾಲ್ಕು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.
The government on Tuesday announced a Rs 200 per cylinder cut in prices of domestic cooking gas as it looked to counter the promise of cheaper LPG made by the Congress party in upcoming assembly elections in states like Madhya Pradesh. At present, a 14.2-kg LPG cylinder in the national capital costs Rs 1,103 - more than double the rate it came for in May 2020.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm