ಬ್ರೇಕಿಂಗ್ ನ್ಯೂಸ್
04-09-23 01:58 pm HK News Desk ದೇಶ - ವಿದೇಶ
ಚೆನ್ನೈ, ಸೆ.4: ಸನಾತನ ಧರ್ಮ ನಿರ್ಮೂಲನೆ ಮಾಡಬೇಕು ಎಂಬ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ತಮಿಳುನಾಡು ಸಚಿವ ಉದಯನಿದಿ ಸ್ಟಾಲಿನ್, ನಾನು ನನ್ನ ಹೇಳಿಕೆ ಬದ್ಧನಾಗಿದ್ದು, ನನ್ನ ವಿರುದ್ಧ ಯಾವುದೇ ಪ್ರಕರಣ ದಾಖಲಿಸಿದರೂ ಅದನ್ನು ಎದುರಿಸಲು ನಾನು ಸಿದ್ಧ ಎಂದು ಸವಾಲು ಹಾಕಿದ್ದಾರೆ.
ಸನಾತನ ಧರ್ಮವು ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನ ನಿರ್ಮೂಲನೆ ಮಾಡಬೇಕೇ ಹೊರತು, ವಿರೋಧಿಸಬಾರದು ಎಂದು ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಬಿಜೆಪಿ ನಾಯಕರಿಗೆ ಮತ್ತೊಂದು ಸವಾಲ್ ಹಾಕಿದ್ದಾರೆ.

ಉದಯನಿಧಿ ಸ್ಟಾಲಿನ್ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡ್ತಿದ್ದಂತೆ ಬಿಜೆಪಿ ನಾಯಕರು ತಿರುಗಿಬಿದ್ದಿದ್ದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಉದಯನಿಧಿ ಹೇಳಿಕೆಯನ್ನ ತೀವ್ರವಾಗಿ ಖಂಡಿಸಿದ್ದರು. ಈ ಬೆನ್ನಲ್ಲೇ ಉದಯನಿಧಿ ನನ್ನ ವಿರುದ್ಧ ಬಿಜೆಪಿ ಯಾವುದೇ ಕೇಸ್ ಹಾಕಿದ್ರೂ ಫೇಸ್ ಮಾಡೋಕೆ ನಾನ್ ರೆಡಿ ಎಂದು ಸವಾಲೆಸೆದಿದ್ದಾರೆ.
ನಾನು ಸನಾತನ ಧರ್ಮವನ್ನ ಮಾತ್ರ ಟೀಕಿಸಿದ್ದೇನೆ. ಸನಾತನ ಧರ್ಮವನ್ನ ನಿರ್ಮೂಲನೆ ಮಾಡಬೇಕು ಎಂದು ಮತ್ತೆ ಹೇಳುತ್ತಿದ್ದೇನೆ. ಇದನ್ನು ನಿರಂತರವಾಗಿ ಹೇಳುತ್ತೇನೆ. ಆದರೆ ನಾನು ನರಮೇಧಕ್ಕೆ ಆಹ್ವಾನ ನೀಡಿದ್ದೇನೆ ಎಂದು ಕೆಲವರು ಬಾಲಿಶವಾಗಿ ಮಾತನಾಡುತ್ತಿದ್ದಾರೆ. ಇನ್ನೂ ಕೆಲವರು ದ್ರಾವಿಡಂ (ದ್ರಾವಿಡರು) ನಿರ್ಮೂಲನೆಯಾಗಬೇಕು ಎಂದು ಹೇಳುತ್ತಿದ್ದಾರೆ. ಹಾಗಾದರೆ ಡಿಎಂಕೆ ಪಕ್ಷದವರನ್ನ ಕೊಲ್ಲಬೇಕೇ? ಈ ಹಿಂದೆ ಪ್ರಧಾನಿ ಮೋದಿ ಅವರು ಕಾಂಗ್ರೆಸ್ ಮುಕ್ತ ಭಾರತ ಮಾಡಬೇಕು ಅಂತಾ ಕರೆ ಕೊಟ್ಟಿದ್ದರು. ಹಾಗೆಂದ ಮಾತ್ರಕ್ಕೆ ಕಾಂಗ್ರೆಸ್ಸಿಗರನ್ನು ಕೊಲ್ಲಬೇಕು ಎಂದು ಅರ್ಥವೇ ಎಂದು ಪ್ರಶ್ನಿಸಿದ್ದಾರೆ.
ನನ್ನ ಹೇಳಿಕೆ ಬಿಜೆಪಿ ತಿರುಚಿದೆ ;
ಬಿಜೆಪಿ ನನ್ನ ಹೇಳಿಕೆಯನ್ನ ತಿರುಚಿ ಸುಳ್ಳು ಸುದ್ದಿ ಹಬ್ಬಿಸುತ್ತಿದೆ. ಬಿಜೆಪಿಗೆ INDIA ಒಕ್ಕೂಟವನ್ನ ಕಂಡರೆ ಭಯ. ಐಎನ್ಡಿಐಎ ಮೈತ್ರಿಗೆ ಹೆದರಿ ಹೀಗೆಲ್ಲಾ ಹೇಳುತ್ತಿದೆ. ನಾನು ನರಮೇಧಕ್ಕೆ ಕರೆ ಕೊಟ್ಟಿಲ್ಲ. ಬಿಜೆಪಿಯವರು ನನ್ನ ವಿರುದ್ಧ ಯಾವುದೇ ಕೇಸ್ ಹಾಕಿದ್ರೂ ಫೇಸ್ ಮಾಡೋಕೆ ಸಿದ್ಧ ಎಂದು ಹೇಳಿದ್ದಾರೆ.
Facing criticism from the Bharatiya Janata Party (BJP) over his remarks against Sanatan Dharma, Tamil Nadu Chief Minister M K Stalin’s son and minister Udhayanidhi Sunday said he was ready to face “whatever cases they file” against him.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
20-04-26 05:28 pm
HK News Staffer
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
20-04-26 03:44 pm
HK News Staffer
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm