ಬ್ರೇಕಿಂಗ್ ನ್ಯೂಸ್
09-09-23 04:41 pm HK News Desk ದೇಶ - ವಿದೇಶ
ಕೇರಳ, ಸೆ.9: ಮಗಳನ್ನು ಅದ್ದೂರಿಯಾಗಿ ಮದುವೆ ಮಾಡಿಸಿದ ಹೊಟೇಲ್ನಲ್ಲೇ ದಂಪತಿ ಸಾವಿಗೆ ಶರಣಾದ ದುರಂತ ಘಟನೆ ಕೇರಳದ ತಿರುವನಂತರಪುರದಲ್ಲಿ ನಡೆದಿದೆ. ಅದ್ದೂರಿ ಮದುವೆಯಿಂದಾಗಿ ಆರ್ಥಿಕ ಸಂಕಷ್ಟಕ್ಕೊಳಗಾದ ಈ ದಂಪತಿ, ಮಗಳ ವಿವಾಹ ನಡೆದು ಕೇವಲ ಮೂರು ತಿಂಗಳಲ್ಲೇ ಸಾವಿನ ಹಾದಿ ಹಿಡಿದಿದ್ದಾರೆ.
ಐದು ದಿನಗಳ ಹಿಂದೆ ಈ ದಂಪತಿ ( ಈ ಫೈವ್ ಸ್ಟಾರ್ ಹೊಟೇಲ್ಗೆ ಆಗಮಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇದೇ ಹೊಟೇಲ್ನಲ್ಲಿ ಸ್ವಲ್ಪ ಸಮಯದ ಹಿಂದೆ ದಂಪತಿ ತಮ್ಮ ಮಗಳ ಮದುವೆಯನ್ನು ಅದ್ದೂರಿಯಾಗಿ ನೆರವೇರಿಸಿದ್ದರು. ಹೊಟೇಲ್ಗೆ ಆಗಮಿಸಿದ ದಂಪತಿ ಎಲ್ಲೋ ಹೊರಗೆ ಕಾಣಿಸಿಕೊಳ್ಳದ ಹಿನ್ನೆಲೆಯಲ್ಲಿ ಹೊಟೇಲ್ ಸಿಬ್ಬಂದಿ ಅನುಮಾನಗೊಂಡು ಬಾಗಿಲು ಒಡೆದು ನೋಡಿದಾಗ ದಂಪತಿ ನೇಣಿಗೆ ಶರಣಾಗಿದ್ದಾರೆ.
ಹೊಟೇಲ್ ರೂಮ್ನಲ್ಲಿ ಡೆತ್ನೋಟು ಸಿಕ್ಕಿದ್ದು, ಅದರಲ್ಲಿ ಉಲ್ಲೇಖಿಸಿದಂತೆ, ಆಕೆಯನ್ನು ಇದೇ ಹೊಟೇಲ್ನಲ್ಲಿ ಮದುವೆ ಮಾಡಿ ಕೊಡಲಾಗಿದ್ದು, ಪ್ರಸ್ತುತ ಆಕೆ ಗರ್ಭಿಣಿಯಾಗಿದ್ದಾಳೆ. ಪ್ರಸ್ತುತ ಸಂತೋಷದಿಂದ ಇರುವ ಆಕೆಗೆ ನಮ್ಮ ಕಷ್ಟಗಳನ್ನು ಹೇಳಿಕೊಂಡು ತೊಂದರೆ ನೀಡಲು ಇಷ್ಟವಿಲ್ಲ, ನಮ್ಮ ಸಾವಿಗೆ ನಾವೇ ಕಾರಣವಾಗಿದ್ದು, ನಮ್ಮ ಸಾವಿನ ನಂತರ ಈ ವಿಷಯವಾಗಿ ನಮ್ಮ ಮಗಳಿಗೆ ಯಾವುದೇ ತೊಂದರೆ ನೀಡಬೇಡಿ ಅಲ್ಲದೇ ನಮ್ಮ ಶವವನ್ನು ಮೆಡಿಕಲ್ ಕಾಲೇಜು ಆಸ್ಪತ್ರೆಯ ಶವಗಾರದಲ್ಲಿ ಇರಿಸಿ ಎಂದು ಡೆತ್ನೋಟ್ನಲ್ಲಿ ದಂಪತಿ ಬರೆದಿದ್ದಾರೆ.
ಇದೇ ಹೊಟೇಲ್ನಲ್ಲಿ ಆಯೋಜಿಸಿದ್ದ ಓಣಂ ಸಂಭ್ರಮದಲ್ಲಿ ಈ ದಂಪತಿ ಭಾಗವಹಿಸಿದ್ದರು, ಆದರೆ ಇಲ್ಲಿಯವರೆಗೂ ಅವರು ಹೊಟೇಲ್ ಬಿಲ್ ಪಾವತಿ ಮಾಡಿರಲಿಲ್ಲ ಎಂದು ತಿಳಿದು ಬಂದಿದೆ.
ಒಂದೊಮ್ಮೆ ಈ ಕುಟುಂಬ ಆರ್ಥಿಕವಾಗಿ ತುಂಬಾ ಸಧೃಡವಾಗಿತ್ತು. ಆದರೆ ಇತೀಚೆಗೆ ಉದ್ಯಮದಲ್ಲಿ ಹಿನ್ನಡೆಯಾಗಿ ಆರ್ಥಿಕ ಸಂಕಷ್ಟ ಎದುರಾಗಿತ್ತು. ಸಾವಿಗೆ ಶರಣಾದ ಸುಗಥನ್ ಸೌದಿ ರಾಷ್ಟ್ರ ಮಸ್ಕತ್ನಲ್ಲಿ ಯಶಸ್ವಿ ಉದ್ಯಮಿಯಾಗಿದ್ದರು. ಕೆಲ ವರ್ಷಗಳ ಹಿಂದಷ್ಟೇ ಅವರು 20201ರಲ್ಲಿ ತಾಯ್ನಾಡು ಕೇರಳಕ್ಕೆ ಬಂದಿದ್ದರು. ನಂತರ ಕರಿಪುರ ಪ್ರಕೃತಿ ಗಾರ್ಡನ್ನಲ್ಲಿ ಮನೆಯೊಂದಕ್ಕೆ ಹೂಡಿಕೆ ಮಾಡಿದ್ದರು. ಆದರೆ ಮಗಳ ಮದುವೆಗೂ ಮೊದಲು ದಂಪತಿ ಅದನ್ನು ಮಾರಾಟ ಮಾಡಿದ್ದರು. ಹೀಗಿದ್ದರೂ ಅವರ ಪ್ರಾಥಮಿಕ ಹೂಡಿಕೆಯ 65 ಲಕ್ಷದಲ್ಲಿ ಕೇವಲ 35 ಲಕ್ಷವಷ್ಟೇ ಅವರಿಗೆ ಮರಳಿ ಪಡೆಯಲು ಸಾಧ್ಯವಾಗಿತ್ತು. ಇದರಿಂದ ದಂಪತಿ ಆರ್ಥಿಕವಾಗಿ ಮತ್ತಷ್ಟು ಸಂಕಷ್ಟಕ್ಕೀಡಾಗಿದ್ದರು. ಇದು ಅವರನ್ನು ಮಾನಸಿಕವಾಗಿ ಕುಗ್ಗಿಸಿ ಖಿನ್ನತೆಗೆ ಜಾರಿಸಿತ್ತು. ಪೊಲೀಸರು ಈಗ ದಂಪತಿಯ ಆರ್ಥಿಕ ಹಿನ್ನಡೆಗೆ ಕಾರಣವಾದ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
A couple was found hanging inside a hotel room on Wednesday. The deceased were identified as Suguthan (70) and his wife Sunila Suguthan (60), hailing from Cheppad in Haripad.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 07:58 pm
HK News Staffer
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm