ಬ್ರೇಕಿಂಗ್ ನ್ಯೂಸ್
03-10-23 06:57 pm HK News Desk ದೇಶ - ವಿದೇಶ
ಕೊಚ್ಚಿ, ಅ.3: ಕೇರಳದ ಸಿರೋ- ಮಲಬಾರ್ ಚರ್ಚ್ ಸಂಸ್ಥೆಯ ಇಡುಕ್ಕಿ ಡಯಾಸಿಸ್ಗೆ ಸೇರಿದ ಕ್ಯಾಥೋಲಿಕ್ ಪಾದ್ರಿಯೊಬ್ಬರು ಬಿಜೆಪಿ ಸೇರಿದ್ದು, ಅದಾಗಿ ಕೆಲವೇ ಗಂಟೆಗಳಲ್ಲಿ ಅವರನ್ನು ಚರ್ಚ್ನ ಪ್ರತಿನಿಧಿ (ವಿಕಾರ್) ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ.
ಕ್ಯಾಥೋಲಿಕ್ ಚರ್ಚ್ನ ಪಾದ್ರಿ ಫಾದರ್ ಕುರಿಯಾಕೋಸ್ ಮಟ್ಟಂ ಅವರು ಸೋಮವಾರ ಇಡುಕ್ಕಿ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎಸ್ ಅಜಿ ಅವರಿಂದ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದಿದ್ದರು. ಇದಾಗಿ ಕೆಲವೇ ಗಂಟೆಗಳಲ್ಲಿ ಇಡುಕ್ಕಿ ವಲಯ ಚರ್ಚ್ ಡಯಾಸಿಸ್ ಅವರ ವಿರುದ್ಧ ಕ್ರಮ ಕೈಗೊಂಡಿದೆ.
ಮಂಕುವಾ ಸೇಂಟ್ ಥಾಮಸ್ ಚರ್ಚ್ನ ಪ್ಯಾರಿಶ್ ಹುದ್ದೆಯಿಂದ ಫಾದರ್ ಮಟ್ಟಂ ಅವರನ್ನು ತಾತ್ಕಾಲಿಕವಾಗಿ ಬಿಡುಗಡೆ ಮಾಡಲಾಗಿದೆ ಎಂದು ಚರ್ಚ್ ತಿಳಿಸಿದೆ. ಚರ್ಚ್ ಪಾದ್ರಿ ಯಾವುದೇ ರಾಜಕೀಯ ಪಕ್ಷ ಸೇರಿಕೊಳ್ಳುವಂತಿಲ್ಲ ಅಥವಾ ಸಕ್ರಿಯವಾಗಿ ಭಾಗವಹಿಸುವಂತೆ ಇಲ್ಲ ಎಂದು ಕೆನಾನ್ ಕಾನೂನು ಹೇಳುತ್ತದೆ. ಅದರಂತೆ, ಶಿಸ್ತು ಕ್ರಮ ಕೈಗೊಳ್ಳಲಾಗಿದೆ ಎಂದು ಚರ್ಚ್ ವಕ್ತಾರರೊಬ್ಬರು ತಿಳಿಸಿದ್ದಾರೆ. 74 ವರ್ಷದ ಪಾದ್ರಿ ಮಟ್ಟಂ ಅವರು ಕೆಲವೇ ತಿಂಗಳಲ್ಲಿ ಪಾದ್ರಿ ಹುದ್ದೆಯಿಂದ ನಿವೃತ್ತರಾಗಲಿದ್ದಾರೆ.
ಮಣಿಪುರ ಹಿಂಸಾಚಾರ ವಿಚಾರವಾಗಿ ಬಿಜೆಪಿ ಸರ್ಕಾರದ ವಿರುದ್ಧ ಕ್ಯಾಥೋಲಿಕ್ ಚರ್ಚ್ ವಾಗ್ದಾಳಿ ನಡೆಸುತ್ತಿರುವ ನಡುವೆಯೇ ಪಾದ್ರಿ ಕೇಸರಿ ಪಾಳೆಯ ಸೇರ್ಪಡೆಯಾಗಿದ್ದು ಪ್ರಮುಖರನ್ನು ಇರಿಸು ಮುರಿಸು ಮಾಡಿತ್ತು. ಪಾದ್ರಿ ಜೊತೆಗಿನ ಚಿತ್ರಗಳನ್ನು ಫೇಸ್ಬುಕ್ನಲ್ಲಿ ಹಂಚಿಕೊಂಡಿರುವ ಬಿಜೆಪಿ ನಾಯಕ ಅಜಿ, ದೇಶದಲ್ಲಿನ ಪ್ರಸಕ್ತ ಪರಿಸ್ಥಿತಿಯನ್ನು ಗಮನಿಸಿದ ನಂತರ ಫಾದರ್ ಮಟ್ಟಂ ಅವರು ಬಿಜೆಪಿ ಸೇರಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
A Catholic priest under the Idukki diocese of the Syro-Malabar church was relieved of his duties as vicar on Monday, hours after he joined the BJP. Fr Kuriakose Mattam received the primary membership of the BJP from the party's Idukki district president K S Aji on Monday. Within hours, the Idukki diocese initiated action against him.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 07:58 pm
HK News Staffer
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
17-07-26 08:11 pm
HK News Staffer
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm