ಬ್ರೇಕಿಂಗ್ ನ್ಯೂಸ್
03-10-23 06:57 pm HK News Desk ದೇಶ - ವಿದೇಶ
ಕೊಚ್ಚಿ, ಅ.3: ಕೇರಳದ ಸಿರೋ- ಮಲಬಾರ್ ಚರ್ಚ್ ಸಂಸ್ಥೆಯ ಇಡುಕ್ಕಿ ಡಯಾಸಿಸ್ಗೆ ಸೇರಿದ ಕ್ಯಾಥೋಲಿಕ್ ಪಾದ್ರಿಯೊಬ್ಬರು ಬಿಜೆಪಿ ಸೇರಿದ್ದು, ಅದಾಗಿ ಕೆಲವೇ ಗಂಟೆಗಳಲ್ಲಿ ಅವರನ್ನು ಚರ್ಚ್ನ ಪ್ರತಿನಿಧಿ (ವಿಕಾರ್) ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ.
ಕ್ಯಾಥೋಲಿಕ್ ಚರ್ಚ್ನ ಪಾದ್ರಿ ಫಾದರ್ ಕುರಿಯಾಕೋಸ್ ಮಟ್ಟಂ ಅವರು ಸೋಮವಾರ ಇಡುಕ್ಕಿ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎಸ್ ಅಜಿ ಅವರಿಂದ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದಿದ್ದರು. ಇದಾಗಿ ಕೆಲವೇ ಗಂಟೆಗಳಲ್ಲಿ ಇಡುಕ್ಕಿ ವಲಯ ಚರ್ಚ್ ಡಯಾಸಿಸ್ ಅವರ ವಿರುದ್ಧ ಕ್ರಮ ಕೈಗೊಂಡಿದೆ.
ಮಂಕುವಾ ಸೇಂಟ್ ಥಾಮಸ್ ಚರ್ಚ್ನ ಪ್ಯಾರಿಶ್ ಹುದ್ದೆಯಿಂದ ಫಾದರ್ ಮಟ್ಟಂ ಅವರನ್ನು ತಾತ್ಕಾಲಿಕವಾಗಿ ಬಿಡುಗಡೆ ಮಾಡಲಾಗಿದೆ ಎಂದು ಚರ್ಚ್ ತಿಳಿಸಿದೆ. ಚರ್ಚ್ ಪಾದ್ರಿ ಯಾವುದೇ ರಾಜಕೀಯ ಪಕ್ಷ ಸೇರಿಕೊಳ್ಳುವಂತಿಲ್ಲ ಅಥವಾ ಸಕ್ರಿಯವಾಗಿ ಭಾಗವಹಿಸುವಂತೆ ಇಲ್ಲ ಎಂದು ಕೆನಾನ್ ಕಾನೂನು ಹೇಳುತ್ತದೆ. ಅದರಂತೆ, ಶಿಸ್ತು ಕ್ರಮ ಕೈಗೊಳ್ಳಲಾಗಿದೆ ಎಂದು ಚರ್ಚ್ ವಕ್ತಾರರೊಬ್ಬರು ತಿಳಿಸಿದ್ದಾರೆ. 74 ವರ್ಷದ ಪಾದ್ರಿ ಮಟ್ಟಂ ಅವರು ಕೆಲವೇ ತಿಂಗಳಲ್ಲಿ ಪಾದ್ರಿ ಹುದ್ದೆಯಿಂದ ನಿವೃತ್ತರಾಗಲಿದ್ದಾರೆ.
ಮಣಿಪುರ ಹಿಂಸಾಚಾರ ವಿಚಾರವಾಗಿ ಬಿಜೆಪಿ ಸರ್ಕಾರದ ವಿರುದ್ಧ ಕ್ಯಾಥೋಲಿಕ್ ಚರ್ಚ್ ವಾಗ್ದಾಳಿ ನಡೆಸುತ್ತಿರುವ ನಡುವೆಯೇ ಪಾದ್ರಿ ಕೇಸರಿ ಪಾಳೆಯ ಸೇರ್ಪಡೆಯಾಗಿದ್ದು ಪ್ರಮುಖರನ್ನು ಇರಿಸು ಮುರಿಸು ಮಾಡಿತ್ತು. ಪಾದ್ರಿ ಜೊತೆಗಿನ ಚಿತ್ರಗಳನ್ನು ಫೇಸ್ಬುಕ್ನಲ್ಲಿ ಹಂಚಿಕೊಂಡಿರುವ ಬಿಜೆಪಿ ನಾಯಕ ಅಜಿ, ದೇಶದಲ್ಲಿನ ಪ್ರಸಕ್ತ ಪರಿಸ್ಥಿತಿಯನ್ನು ಗಮನಿಸಿದ ನಂತರ ಫಾದರ್ ಮಟ್ಟಂ ಅವರು ಬಿಜೆಪಿ ಸೇರಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
A Catholic priest under the Idukki diocese of the Syro-Malabar church was relieved of his duties as vicar on Monday, hours after he joined the BJP. Fr Kuriakose Mattam received the primary membership of the BJP from the party's Idukki district president K S Aji on Monday. Within hours, the Idukki diocese initiated action against him.
13-09-25 07:50 pm
Bangalore Correspondent
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm