ಬ್ರೇಕಿಂಗ್ ನ್ಯೂಸ್
11-11-20 05:21 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 11: ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಅವರಿಗೆ ಸುಪ್ರೀಂಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ.
2018ರಲ್ಲಿ ನಡೆದಿದ್ದ ಒಳಾಂಗಣ ವಿನ್ಯಾಸಕಾರ ಅನ್ವಯ್ ನಾಯ್ಕ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಅರ್ನಬ್ ಅವರನ್ನು ಎಂಟು ದಿನಗಳ ಹಿಂದೆ ಬಂಧಿಸಲಾಗಿತ್ತು. ಅವರಿಗೆ ಜಾಮೀನು ನೀಡಲು ನಿರಾಕರಿಸಿದ್ದ ಬಾಂಬೆ ಹೈಕೋರ್ಟ್, ಪ್ರಕರಣದ ತನಿಖೆ ನಡೆಯುತ್ತಿರುವ ಸೆಷನ್ಸ್ ಕೋರ್ಟ್ನಲ್ಲಿಯೇ ಜಾಮೀನಿಗೆ ಅರ್ಜಿ ಸಲ್ಲಿಸುವಂತೆ ಹೇಳಿತ್ತು. ಆದರೆ ಅರ್ನಬ್ ಅವರ ವಕೀಲ ಹರೀಶ್ ಸಾಳ್ವೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
ಬುಧವಾರ ಅರ್ನಬ್ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಅರ್ನಬ್ ಅವರಿಗೆ ಜಾಮೀನು ಮಂಜೂರು ಮಾಡಿದೆ. ಇದೇ ಸಂದರ್ಭದಲ್ಲಿ ಸುಪ್ರೀಂಕೋರ್ಟ್, ಮಹಾರಾಷ್ಟ್ರ ಸರ್ಕಾರ ಮತ್ತು ಪೊಲೀಸರ ನಡೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿತು.


50,000 ರೂ ವೈಯಕ್ತಿಕ ಬಾಂಡ್ ಆಧಾರದಲ್ಲಿ ಅರ್ನಬ್ ಅವರಿಗೆ ಜಾಮೀನು ನೀಡಲಾಗಿದೆ. ಅವರೊಂದಿಗೆ ಇತರೆ ಇಬ್ಬರು ಆರೋಪಿಗಳಿಗೂ ಜಾಮೀನು ಮಂಜೂರು ಮಾಡಲಾಗಿದೆ. ಅರ್ನಬ್ ಮತ್ತು ಇತರರು ಪ್ರಕರಣದ ತನಿಖೆಗೆ ಸಹಕರಿಸಬೇಕು ಎಂದು ಸುಪ್ರೀಂಕೋರ್ಟ್ ಸೂಚಿಸಿದೆ.
ನವೆಂಬರ್ 4ರಂದು ಅರ್ನಬ್ ಹಾಗೂ ಇನ್ನಿಬ್ಬರು ಆರೋಪಿಗಳಾದ ಫೆರೋಜ್ ಶೇಕ್ ಮತ್ತು ನಿತೀಶ್ ಸರ್ದಾ ಅವರನ್ನು ಬಂಧಿಸಲಾಗಿತ್ತು. ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡದೆ ಇರುವುದು ಸರಿಯಲ್ಲ ಎಂದ ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್ ಮತ್ತು ಇಂದಿರಾ ಬ್ಯಾನರ್ಜಿ ಅವರನ್ನು ಒಳಗೊಂಡ ನ್ಯಾಯಪೀಠ ಅಭಿಪ್ರಾಯಪಟ್ಟಿತು. ತನ್ನ ಆದೇಶವನ್ನು ತಕ್ಷಣದಿಂದಲೇ ಜಾರಿಗೆ ತರುವಂತೆ ಪೊಲೀಸ್ ಆಯುಕ್ತರಿಗೆ ನ್ಯಾಯಪೀಠ ಸೂಚನೆ ನೀಡಿತು.
Republic TV's Arnab Goswami has been granted bail by the Supreme Court in a 2018 abetment to suicide case. He and two others were arrested last week in connection with the suicide of architect Anvay Naik and his mother.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm