ಬ್ರೇಕಿಂಗ್ ನ್ಯೂಸ್
14-10-23 09:40 pm HK News Desk ದೇಶ - ವಿದೇಶ
ಅ.7ರಂದು ಇಸ್ರೇಲ್ ಮೇಲೆ ಹಮಾಸ್ ಉಗ್ರರ ದಾಳಿಯ ನಂತರ ಗಾಜಾ ಪಟ್ಟಿಯ ಮೇಲೆ ಇಸ್ರೇಲಿ ವಾಯುದಾಳಿ ನಡೆಸುತ್ತಿದ್ದು ಇಲ್ಲಿಯವರೆಗೂ 724 ಮಕ್ಕಳು ಸೇರಿದಂತೆ ಕನಿಷ್ಠ 2,215 ಮಂದಿ ಸಾವನ್ನಪ್ಪಿದ್ದಾರೆ ಎಂದು ಪ್ಯಾಲೇಸ್ಟಿನಿಯನ್ ಪ್ರದೇಶದ ಹಮಾಸ್ ನಿಯಂತ್ರಿತ ಆರೋಗ್ಯ ಸಚಿವಾಲಯ ತಿಳಿಸಿದೆ.
ಸಾವನ್ನಪ್ಪಿದವರಲ್ಲಿ ಸುಮಾರು 458 ಮಹಿಳೆಯರು ಸಾವನ್ನಪ್ಪಿದ್ದಾರೆ ಎಂದು ಸಚಿವಾಲಯ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ ಕನಿಷ್ಠ 324 ಜನರು ಸಾವನ್ನಪ್ಪಿದ್ದಾರೆ ಎಂದು ಹಿಂದಿನ ಹೇಳಿಕೆಯ ನಂತರ 8,714 ಜನರು ಗಾಯಗೊಂಡಿದ್ದಾರೆ ಎಂದು ಸಚಿವಾಲಯ ಹೇಳಿದೆ.
ಗಾಜಾದ ಆರೋಗ್ಯ ಸಚಿವಾಲಯದ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 320ಕ್ಕೂ ಹೆಚ್ಚು ಪ್ಯಾಲೆಸ್ಟೀನಿಯಾದವರು ಸಾವನ್ನಪ್ಪಿದ್ದು ಕನಿಷ್ಠ 1000 ಮಂದಿ ಗಾಯಗೊಂಡಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.
ಗಾಜಾದಲ್ಲಿನ ಗಾಯಾಳುಗಳಿಗಾಗಿ ವೈದ್ಯಕೀಯ ಸಾಮಗ್ರಿಗಳೊಂದಿಗೆ WHO ವಿಮಾನವು ಈಜಿಪ್ಟ್ಗೆ ಬಂದಿಳಿದಿದೆ. ರಾತ್ರಿಯಿಡೀ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಹಮಾಸ್ ಸಂಘಟನೆಯ ವಾಯುಪಡೆಯ ಮುಖ್ಯಸ್ಥ ಅಬು ಮುರಾದ್ ಹತ್ಯೆಯಾಗಿರುವುದಾಗಿ ತಿಳಿದುಬಂದಿದೆ.
ಇಸ್ರೇಲಿ ಮಕ್ಕಳನ್ನು ಒತ್ತೆಯಾಳಾಗಿ ಇಟ್ಟುಕೊಂಡ ಹಮಾಸ್ ಬಂಡುಕೋರರು:
ಹಮಾಸ್ ಬಂಡುಕೋರರು ದಕ್ಷಿಣ ಇಸ್ರೇಲ್ನ ಮೇಲೆ ಮಾರಣಾಂತಿಕ ದಾಳಿಯ ಸಮಯದಲ್ಲಿ ಒತ್ತೆಯಾಳಾಗಿ ಇಟ್ಟುಕೊಂಡ ಇಸ್ರೇಲಿ ಮಕ್ಕಳ ವಿಡಿಯೋವನ್ನು ಬಿಡುಗಡೆ ಮಾಡಿದೆ.
ಹಮಾಸ್ ಗುಂಪು ತಮ್ಮ ಟೆಲಿಗ್ರಾಮ್ ಚಾನೆಲ್ನಲ್ಲಿ ಈ ವೀಡಿಯೊ ಹಂಚಿಕೊಂಡಿದ್ದು, ಕಿಬ್ಬತ್ಜ್ 'ಹೋಲಿಟ್' ಕದನದ ಮಧ್ಯೆ ಹಮಾಸ್ ಹೋರಾಟಗಾರರು ಮಕ್ಕಳ ಬಗ್ಗೆ ಸಹಾನುಭೂತಿ ತೋರಿಸುತ್ತಿದ್ದಾರೆ ಎಂದು ಕ್ಯಾಷ್ಪನ್ ನೀಡಲಾಗಿದೆ. ದಕ್ಷಿಣ ಇಸ್ರೇಲ್ನಲ್ಲಿರುವ ಕಿಬ್ಬುಟ್ಜ್ ಹೋಲಿಟ್, ಗಾಜಾ ಗಡಿಗೆ ಬಹಳ ಹತ್ತಿರದಲ್ಲಿದೆ. ಹಮಾಸ್ ಉಗ್ರರು ಅಕ್ಟೋಬರ್ 4 ರಂದು ಇಸ್ರೇಲ್ ಮೇಲೆ ನಡೆಸಿದ ದಾಳಿ ವೇಳೆಯಲ್ಲಿ ಭೀಕರ ದೌರ್ಜನ್ಯಗಳಿಗೆ ಸಾಕ್ಷಿಯಾಗಿತ್ತು.
ಕಿಬ್ಬುಟ್ಜ್ ಹೋಲಿಟ್ ಮೇಲಿನ ದಾಳಿ ವೇಳೆ 13 ಇಸ್ರೇಲಿಗಳು ಹತ್ಯೆಗೈಯಲಾಗಿತ್ತು. ವೀಡಿಯೋದಲ್ಲಿ ಕಾಣಸಿಗುವ ಮಕ್ಕಳನ್ನು ಇನ್ನೂ ಗುರುತಿಸಲಾಗಿಲ್ಲ ಮತ್ತು ಮಕ್ಕಳನ್ನು ಕರೆದುಕೊಂಡು ಹೋಗುವಾಗ ಅವರ ಹೆತ್ತವರನ್ನು ಕೊಂದಿದ್ದಾರೆಯೇ ಎಂಬುದು ಸ್ಪಷ್ಟವಾಗಿಲ್ಲ ಎಂದು ದಿ ಜೆರುಸಲೆಮ್ ಪೋಸ್ಟ್ ವರದಿ ಮಾಡಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಇಸ್ರೇಲ್ ರಕ್ಷಣಾ ಪಡೆಗಳು, ಮಕ್ಕಳನ್ನು ಹಮಾಸ್ ಉಗ್ರರು ತಮ್ಮ ಸ್ವಂತ ಮನೆಗಳಲ್ಲಿ ಒತ್ತೆಯಾಳಾಗಿ ಇರಿಸಿದ್ದಾರೆ, ಅವರ ಪೋಷಕರು ಮುಂದಿನ ಕೋಣೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಿವೆ.
ಕಿಬ್ಬುಟ್ಜ್ ಹೋಲಿಟ್ ಮೇಲಿನ ದಾಳಿಯ ಸಮಯದಲ್ಲಿ, ಗುಂಡುಗಳಿಂದ ಕೂಡಿದ ಕಟ್ಟಡಗಳು, ಸುಟ್ಟುಹೋದ ವಾಹನಗಳು ಮತ್ತು ಒಡೆದ ಕಿಟಕಿಯ ಗಾಜುಗಳು ಸಮುದಾಯದಲ್ಲಿ ಹರಡಿಕೊಂಡಿರುವುದು ಕಂಡುಬಂದಿತು, ಇದು ಆಕ್ರಮಣದಿಂದ ಉಂಟಾದ ಸಂಕಟಕ್ಕೆ ಸಾಕ್ಷಿಯಾಗಿದೆ. ಭಯೋತ್ಪಾದಕರು ತ್ಯಜಿಸಿದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು ಸಹ ಸುಳ್ಳಾಗಿವೆ ಎಂದು ಇಸ್ರೇಲ್ ಪಡೆಗಳು ತಿಳಿಸಿವೆ.
ಹಮಾಸ್ ವಿರುದ್ಧ ಕೋಪಕ್ಕೆ, ಇಡೀ ಗಾಜಾಪಟ್ಟಿ ನಗರವನ್ನೇ ಸರ್ವನಾಶ ಮಾಡುತ್ತಿದೆ ಇಸ್ರೇಲ್ ಸೇನೆ. ಇದೇ ಸಮಯದಲ್ಲಿ ಗಾಜಾಪಟ್ಟಿ ಜನರಿಗೆ ಊರು ಬಿಟ್ಟು ಹೋಗಿ ಅಂತಾ ಇಸ್ರೇಲ್ ಸೇನೆ ಖಡಕ್ ಎಚ್ಚರಿಕೆ ನೀಡಿದೆ. ಈಗಾಗಲೇ ಸಾವಿರಾರು ಅಮಾಯಕರು ಬಲಿಯಾದ ಹಿನ್ನೆಲೆ ಜನರು ತಮ್ಮ ಮತ್ತು ತಮ್ಮ ಕುಟುಂಬದ ಜೀವ ಉಳಿಸಿಕೊಳ್ಳಲು ಗಾಜಾಪಟ್ಟಿ ಬಿಟ್ಟು ಹೋಗುತ್ತಿದ್ದಾರೆ.
According to the latest reports by local health authorities and media, at least 2,215 Palestinians were reportedly killed, including over 700 children, and more than 8,714 people wounded, including more than 2,450 children.
13-09-25 04:31 pm
HK News Desk
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm