ಬ್ರೇಕಿಂಗ್ ನ್ಯೂಸ್
17-10-23 08:33 pm HK News Desk ದೇಶ - ವಿದೇಶ
ಶಿವಕಾಶಿ, ಅ.17: ಪಟಾಕಿ ತಯಾರಿಕೆಗೆ ಖ್ಯಾತಿಯಾಗಿರುವ ತಮಿಳುನಾಡಿನ ಶಿವಕಾಶಿಯ ಎರಡು ಕಾರ್ಖಾನೆಗಳಲ್ಲಿ ಮಂಗಳವಾರ ಸಂಭವಿಸಿದ ಭೀಕರ ಸ್ಫೋಟದಲ್ಲಿ 10 ಮಂದಿ ಸುಟ್ಟು ಕರಕಲಾಗಿದ್ದಾರೆ. 15ಕ್ಕೂ ಅಧಿಕ ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ವಿಜಯದಶಮಿ ಮತ್ತು ದೀಪಾವಳಿಯ ಸಂಭ್ರಮದ ಹೊತ್ತಲ್ಲೇ ದುರಂತ ಸಂಭವಿಸಿದೆ.
ವಿರುಧುನಗರ ಸಮೀಪದ ಶಿವಕಾಶಿಯಲ್ಲಿ ಎರಡು ಪ್ರತ್ಯೇಕ ಸ್ಫೋಟಗಳು ಸಂಭವಿಸಿವೆ. ಬೂದುಪಟ್ಟಿ ರೆಂಗಪಾಳ್ಯಂ ಪ್ರದೇಶದಲ್ಲಿರುವ ಕಾನಿಷ್ಕರ್ ಪಟಾಕಿ ಕಾರ್ಖಾನೆಯಲ್ಲಿ ಮೊದಲ ಸ್ಫೋಟ ಸಂಭವಿಸಿತು. ಇಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಪೈಕಿ 9 ಮಂದಿ ಬೆಂಕಿಗೆ ಆಹುತಿಯಾದರು. ಘಟನೆಯ ಪ್ರದೇಶ ಸುತ್ತ ದೊಡ್ಡ ಸ್ಫೋಟಕ ಸದ್ದು ಕೇಳಿಬಂದಿತು. ಬೆಂಕಿಗೆ ಕೆನ್ನಾಲಿಗೆಗೆ ಸಿಲುಕಿದ ಕೆಲ ಕಾರ್ಮಿಕರು ಸುಟ್ಟ ಗಾಯಕ್ಕೀಡಾಗಿದ್ದಾರೆ. ಅವರನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.



ಇನ್ನೊಂದು ಸ್ಫೋಟವು ರೆಡ್ಡಿಪಟ್ಟಿ ಪ್ರದೇಶದಲ್ಲಿರುವ ಮುತ್ತು ವಿಜಯನ್ ಒಡೆತನದ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿತು. ಇಲ್ಲಿ ಓರ್ವ ಕಾರ್ಮಿಕ ಬೆಂಕಿಗೆ ಬಲಿಯಾಗಿದ್ದಾನೆ. ಹಲವು ತೀವ್ರವಾಗಿ ಗಾಯಗೊಂಡಿದ್ದಾರೆ. ದುರಂತದಲ್ಲಿ ಸಾವುನೋವುಗಳ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.
ಬೆಂಗಳೂರು ಗ್ರಾಮಾಂತರದ ಆನೇಕಲ್ ತಾಲೂಕಿನ ಅತ್ತಿಬೆಲೆ ಗಡಿಭಾಗದಲ್ಲಿರುವ ಬಾಲಾಜಿ ಟ್ರೇಡರ್ಸ್ನಲ್ಲಿ ಅಕ್ಟೋಬರ್ 7ರಂದು ನಡೆದ ಅಗ್ನಿ ದುರಂತದಲ್ಲಿ 14 ಮಂದಿ ಮೃತಪಟ್ಟಿದ್ದರು. ಅತ್ತಿಬೆಲೆ ಬಾರ್ಡರ್ ಬಳಿ ಇರುವ ಶ್ರೀಬಾಲಾಜಿ ಟ್ರೇಡರ್ಸ್ ಮಾಲೀಕ ನವೀನ್ ರೆಡ್ಡಿ ಅನತಿ ಮೇರೆಗೆ ಸೇಲ್ಸ್ ಮ್ಯಾನ್ ಕೆಲಸಕ್ಕೆ ಬಂದಿದ್ದರು. ವಾಣಿಯಾಂಬಾಡಿಯಿಂದ 12 ಮಂದಿ, ಕಲ್ಲಕುರ್ಚಿಯಿಂದ 15 ಮಂದಿ ಜತೆಗೆ 9 ಮಂದಿ ಬಂದು ಕೆಲಸ ಮಾಡುತ್ತಿದ್ದರು. ಇವರೆಲ್ಲರು ಉಳಿದುಕೊಳ್ಳಲು ಪಟಾಕಿ ಅಂಗಡಿಯ ಮುಂಭಾಗವೇ ರೂಂವೊಂದನ್ನು ಮಾಡಿಕೊಟ್ಟಿದ್ದರು. ಸೇಲ್ಸ್ ಪರ್ಸನ್ಗೆ ಪ್ರತಿ ದಿನ 600 ರಿಂದ 700 ರೂಪಾಯಿ ಸಂಬಳ ನೀಡುತ್ತಿದ್ದರು.
In a major fire accident at least 10 lives including eight women workers, who were working in a private fireworks unit at Rengapalayam in Virudhunagar district were killed on October 17.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm