ಬ್ರೇಕಿಂಗ್ ನ್ಯೂಸ್
23-10-23 06:49 pm HK News Desk ದೇಶ - ವಿದೇಶ
ಅಹಮದಾಬಾದ್, ಅ 23: ವಾಘ್ ಬಕ್ರಿ ಟೀ ಗ್ರೂಪ್ ಕಂಪನಿಯ ಎಕ್ಸಿಕ್ಯೂಟಿವ್ ಡೈರೆಕ್ಟರ್ ಪರಾಗ್ ದೇಸಾಯಿ ಅಕ್ಟೋಬರ್ 22ರಂದು ಅಹ್ಮದಾಬಾದ್ನಲ್ಲಿ ಮೃತಪಟ್ಟಿದ್ದಾರೆ.
ವಾಘ್ ಬಕ್ರೀ ಟೀ ಗ್ರೂಪ್ನ ಎಕ್ಸಿಕ್ಯೂಟಿವ್ ಡೈರೆಕ್ಟರ್ ಪರಾಗ್ ದೇಸಾಯಿ ಅವರು ಸಾವನ್ನಪ್ಪಿದ್ದಾರೆ. ತಮ್ಮ ಮನೆ ಬಳಿ ನಿಂತಿದ್ದಾಗ ಪರಾಗ್ ದೇಸಾಯಿ ಅವರು ಬೀದಿ ನಾಯಿಗಳ ದಾಳಿಗೆ ತುತ್ತಾಗಿದ್ದರು. ಬೀದಿ ನಾಯಿಗಳು ದಾಳಿ ಮಾಡಿದಾಗ ಪರಾಗ್ ದೇಸಾಯಿ ಅವರು ಕೆಳಗೆ ಬಿದ್ದು, ತಲೆಗೆ ಗಂಭೀರ ಗಾಯವಾಗಿತ್ತು. ಬಳಿಕ ಬ್ರೈನ್ ಹೆಮರೇಜ್ನಿಂದ 49 ವರ್ಷದ ಪರಾಗ್ ದೇಸಾಯಿ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಪರಾಗ್ ದೇಸಾಯಿ ಅವರು ಕಳೆದ ಅಕ್ಟೋಬರ್ 15ರಂದು ಮನೆ ಬಳಿ ನಿಂತಿದ್ದಾಗ ಬೀದಿ ನಾಯಿಗಳು ದಾಳಿ ಮಾಡಿದ್ದವು. ಬೀದಿ ನಾಯಿಗಳಿಂದ ತಪ್ಪಿಸಿಕೊಳ್ಳುವಾಗ ಆಯತಪ್ಪಿ ಕೆಳಗೆ ಬಿದ್ದಿದ್ದರು. ಈ ದಾಳಿಯನ್ನು ಗಮನಿಸಿ ಸೆಕ್ಯೂರಿಟಿ ಗಾರ್ಡ್ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದರು. ಕೂಡಲೇ ಪರಾಗ್ ದೇಸಾಯಿ ಅವರನ್ನು ಸ್ಥಳೀಯ ಶೆಲ್ಬಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು.
ಬೀದಿ ನಾಯಿಯ ದಾಳಿಯಲ್ಲೂ ಹಲವು ಗಂಭೀರ ಗಾಯಗಳಾಗಿದ್ದು, ಬ್ರೇನ್ ಹೆಮರೇಜ್ಗೆ ತುತ್ತಾಗಿದ್ದರು. ಶೆಲ್ಬಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಬಳಿಕ ದೇಸಾಯಿ ಅವರನ್ನು ಝೈಡಸ್ ಆಸ್ಪತ್ರೆಗೆ ಶಿಫ್ಟ್ ಮಾಡಿ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಬ್ರೇನ್ ಹೆಮರೇಜ್ನಿಂದ ಉದ್ಯಮಿ ಪರಾಗ್ ದೇಸಾಯಿ ಅವರು ಗುಣಮುಖರಾಗದೆ ಸಾವನ್ನಪ್ಪಿದ್ದಾರೆ.
ಪರಾಗ್ ದೇಸಾಯಿ ಅವರು 2 ಸಾವಿರ ಕೋಟಿ ರೂಪಾಯಿ ವಹಿವಾಟಿನ ವಾಘ್ ಬಕ್ರೀ ಟೀ ಗ್ರೂಪ್ ಕಂಪನಿಯ ಎಕ್ಸಿಕ್ಯೂಟಿವ್ ಡೈರೆಕ್ಟರ್ ಆಗಿದ್ದರು. ಗುಜರಾತ್ನಲ್ಲಿ ವಾಘ್ ಬಕ್ರೀ ಟೀ ಗ್ರೂಪ್ ಅನ್ನೋ ಬ್ರಾಂಡ್ ಹಾಗೂ ಕಂಪನಿಯನ್ನು ಕಟ್ಟಿ ಬೆಳೆಸಿದವರಲ್ಲಿ ಪರಾಗ್ ಅವರು ಪ್ರಮುಖರು. ಪರಾಗ್ ದೇಸಾಯಿ ಅವರ ಸಾವು ಎಲ್ಲರಿಗೂ ದಿಗ್ಭ್ರಮೆ ಮೂಡಿಸಿದೆ.
Ahmedabad-based Parag Desai (49) Executive Director of Wagh Bakri Tea Group, succumbed to head injuries he had sustained after he fell down while trying to escape an attack by street dogs during his morning walk near his residence in Ambali Road area in the heart of the city.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
20-04-26 01:02 pm
HK News Staffer
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
20-04-26 11:13 am
HK News Staffer
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am