ಬ್ರೇಕಿಂಗ್ ನ್ಯೂಸ್
29-10-23 08:28 pm HK News Desk ದೇಶ - ವಿದೇಶ
ಚೆನ್ನೈ, ಅ.29: ತಮಿಳುನಾಡಿನ ಕೊಯಂಬತ್ತೂರಿನಲ್ಲಿ ಪ್ಯಾಲೆಸ್ತೀನ್ ಪರ ನಡೆದ ಪ್ರತಿಭಟನಾ ಸಭೆಯಲ್ಲಿ ಇಸ್ರೇಲ್ ಬಿಟ್ಟರೆ ಭಾರತವೇ ಮತ್ತೊಂದು ಭಯೋತ್ಪಾದಕ ರಾಷ್ಟ್ರ ಎಂಬುದಾಗಿ ಮೌಲ್ವಿಯೊಬ್ಬ ಹೇಳಿರುವ ವಿಡಿಯೋ ವೈರಲ್ ಆಗಿದೆ.
ಅ.24ರಂದು ಕೊಯಂಬತ್ತೂರು ನಗರದ ಉಕ್ಕಡಂ ಎಂಬಲ್ಲಿ ಈ ಘಟನೆ ನಡೆದಿದ್ದು, ಅಲ್ ಜಮಾತ್ ಮತ್ತು ಇತರ ಇಸ್ಲಾಮಿಕ್ ಗುಂಪುಗಳು ಪ್ರತಿಭಟನಾ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಸಮಾವೇಶದಲ್ಲಿ ಮುಸ್ಲಿಂ ಇಮಾಂ ಆಗಿರುವ ಇಲ್ಯಾಸಿ ರಿಯಾಜಿ ಎನ್ನುವಾತ ಭಾರತವನ್ನು ಭಯೋತ್ಪಾದಕ ರಾಷ್ಟ್ರ ಎಂದು ಕರೆದಿದ್ದಾನೆ. ಹಾಗಿದ್ದರೂ, ತಮಿಳುನಾಡು ಸರಕಾರ ಮುಸ್ಲಿಮರ ಪರವಾಗಿ ನಿಂತಿದ್ದು, ಯಾವುದೇ ಪ್ರಕರಣ ದಾಖಲಿಸದೆ ಇರುವುದು ಆಕ್ರೋಶಕ್ಕೆ ಕಾರಣವಾಗಿದೆ.
ಜಗತ್ತಿನಲ್ಲಿ ಎರಡು ಭಯೋತ್ಪಾದಕ ರಾಷ್ಟ್ರಗಳಿವೆ. ಅದರಲ್ಲಿ ಇಸ್ರೇಲ್ ಮೊದಲಾಗಿದ್ದರೆ, ಎರಡನೇ ರಾಷ್ಟ್ರ ನಾವು ಬದುಕುತ್ತಿರುವಂಥದ್ದು. ನಾವದನ್ನು ಇಂಡಿಯಾ ಎಂದು ಹೇಳಲು ಬಯಸುವುದಿಲ್ಲ. ಇಂಡಿಯಾ ಎಂದರೆ ಯಾವತ್ತೂ ಶಾಂತಿಯನ್ನು ಹೇಳಿಕೊಂಡು ಬಂದಿರುವ ರಾಷ್ಟ್ರ. ನೆಹರು ಕಾಲದಿಂದ ಮನಮೋಹನ್ ಸಿಂಗ್ ವರೆಗೂ ನಮ್ಮಲ್ಲಿ ಪ್ರಧಾನಿ ಆಗಿದ್ದವರು ಶಾಂತಿಯನ್ನೇ ಪಾಲಿಸಿದ್ದರು. ಆ ಪೈಕಿ ಯಾರು ಕೂಡ ಇಸ್ರೇಲ್ ಪ್ರವಾಸ ಹೋಗಿರಲಿಲ್ಲ. ಮೋದಿ ಮಾತ್ರ ಇಸ್ರೇಲ್ ಪ್ರವಾಸ ಹೋಗಿ ಅಪವಾದ ಆಗಿದ್ದಾರೆ. ಆಗ ಇಸ್ರೇಲ್ ಪ್ರಧಾನಿ ನೆತನ್ಯಾಹು, ನಾವು ಭಾರತದ ಪ್ರಧಾನಿಯ ಆಗಮನಕ್ಕಾಗಿ 70 ವರ್ಷದಿಂದ ಕಾಯುತ್ತಿದ್ದೆವು ಎಂದು ಹೇಳುತ್ತಾರೆ. 70 ವರ್ಷದ ಇಸ್ರೇಲ್ ಕಾಯುವಿಕೆಯನ್ನು ಮೋದಿ ಪೂರ್ತಿಗೊಳಿಸಿದ್ದಾರೆ. ನಾವು ಇದನ್ನು ಖಂಡಿಸುತ್ತೇವೆ ಎಂದು ಇಲ್ಯಾಜಿ ಹೇಳುವ ವಿಡಿಯೋ ವೈರಲ್ ಆಗಿದೆ.
ಸಮಾವೇಶದಲ್ಲಿ ಭಾರತವು ಇಸ್ರೇಲ್ ಪರ ನಿಂತಿದ್ದನ್ನು ಖಂಡಿಸಿ, ಸ್ಥಳದಲ್ಲಿ ಸೇರಿದ್ದ ಸಾವಿರಾರು ಮಂದಿ ಪ್ಯಾಲೆಸ್ತೀನ್ ಪರ ಘೋಷಣೆ ಹಾಕಿದ್ದಾರೆ. ಕಾರ್ಯಕ್ರಮದಲ್ಲಿ ಅಲ್ ಜಮಾತ್ ಫೆಡರೇಶನ್ ಕೋಆರ್ಡಿನೇಟರ್ ಎ.ಸಾದಿಕ್ ಆಲಿ, ಕೋಆರ್ಟಿನೇಟರ್ ಇನಾಯತುಲ್ಲಾ, ಎಸ್ಡಿಪಿಐ ರಾಜ್ಯ ಸೆಕ್ರಟರಿ ರಾಜಾ ಹುಸೇನ್, ತಮಿಳುನಾಡು ಮುಸ್ಲಿಂ ಮುನ್ನೇತ್ರ ಕಝಗಂ ರಾಜ್ಯ ವಕ್ತಾರ ರೆಕ್ಸ್ ರಫಿ ಮತ್ತಿತರ ಮುಸ್ಲಿಂ ಸಂಘಟನೆಗಳ ನಾಯಕರು ಪಾಲ್ಗೊಂಡು ಪ್ಯಾಲೆಸ್ತೀನ್ ಪರವಾಗಿ ಮಾತನಾಡಿದ್ದಾರೆ. ಇಂಕ್ವಿಲಾಬ್ ಇಂಕ್ವಿಲಾಬ್, ಪ್ಯಾಲೆಸ್ತೀನ್ ಇಂಕ್ವಿಲಾಬ್, ಲಾಲ್ ಸಲಾಂ ಅಸ್ಸಲಾಂ ಇಂತಿಫಾದ್ ಇಂಕ್ವಿಲಾಬ್ ರೀತಿಯ ಘೋಷಣೆಗಳನ್ನು ಹಾಕಿದ್ದಾರೆ. ಕಳೆದ ಬಾರಿ ದೆಹಲಿ ಜೆಎನ್ ಯು ಯುನಿವರ್ಸಿಟಿಯಲ್ಲೂ ಇದೇ ರೀತಿಯ ಘೋಷಣೆಗಳನ್ನು ಹಾಕಲಾಗಿತ್ತು. ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಮತ್ತು ಪುತ್ರ ಸಚಿವ ಉದಯನಿಧಿ ಸ್ಟಾಲಿನ್ ಬಹಿರಂಗವಾಗಿಯೇ ಪ್ಯಾಲೆಸ್ತೀನ್ ಮತ್ತು ಹಮಾಸ್ ಉಗ್ರರ ಪರ ನಿಂತಿದ್ದು ಚುನಾವಣೆ ಕಾರಣಕ್ಕೆ ಮುಸ್ಲಿಮರ ಪರ ತಾವಿದ್ದೇವೆಂದು ಹೇಳುತ್ತಿದ್ದಾರೆ.
Islamist leader #IlyazRiyaji spews venom against India calls #India and #Israel #terrorist state in #Tamilnadu pic.twitter.com/MW6ogUIUCX
— Headline Karnataka (@hknewsonline) October 29, 2023
The magnitude of the minority appeasement is clearly visible when the Tamil Nadu government failed to take any action against those who branded India as one of the two terrorist nations in the world”.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 07:22 pm
HK News Staffer
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm