ಬ್ರೇಕಿಂಗ್ ನ್ಯೂಸ್
30-10-23 08:15 pm HK News Desk ದೇಶ - ವಿದೇಶ
ತಿರುವನಂತಪುರಂ, ಅ 30: ಮಲಯಾಳಂ ಕಿರುತೆರೆ ಲೋಕದ ಜನಪ್ರಿಯ ನಟಿ ರೆಂಜುಷಾ ಮೆನನ್ ಅವರು ಸಾವನ್ನಪ್ಪಿದ್ದಾರೆ. ಅವರಿಗೆ 35 ವರ್ಷ ವಯಸ್ಸಾಗಿತ್ತು. ಅವರ ಮೃತದೇಹವು ತಿರುವನಂತಪುರಂನ ಅಪಾರ್ಟ್ಮೆಂಟ್ನ ಅವರದೇ ಫ್ಲಾಟ್ನಲ್ಲಿ ಪತ್ತೆಯಾಗಿದೆ.
ಹಣಕಾಸಿನ ಸಮಸ್ಯೆಯಿಂದ ನಟಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಸಾವಿನ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಚ್ಚಿ ಮೂಲದ ರಂಜುಷಾ ತಮ್ಮ ಪತಿಯೊಂದಿಗೆ ಬಾಡಿಗೆ ಫ್ಲಾಟ್ನಲ್ಲಿ ವಾಸಿಸುತ್ತಿದ್ದರು. ರಂಜುಷಾ ಮೆನನ್ 20ಕ್ಕೂ ಹೆಚ್ಚು ಧಾರಾವಾಹಿಗಳಲ್ಲಿ ನಟಿಸಿದ್ದರು. ಸ್ತ್ರೀ, ಮಗಳುಡೆ ಅಮ್ಮ, ನಿಜಲಟ್ಟಂ, ಬಾಲಮಣಿ ಇವರ ಅಭಿನಯದ ಪ್ರಸಿದ್ಧ ಸೀರಿಯಲ್ಗಳು. ರಂಜುಷಾ ಕೆಲವು ಚಿತ್ರಗಳಲ್ಲೂ ಅಭಿನಯಿಸಿದ್ದರು. ಮೇರಿಕುಂಡೋರು ಕುಂಜಾದ್, ಸಿಟಿ ಆಫ್ ಗಾಡ್, ಲಿಸಮ್ಮಂದೆ ಹೌಸ್, ಬಾಂಬೆ ಮಾರ್ಚ್ 12, ತಲಪ್ಪಾವು, ವಾಧ್ಯಾರ್ ಮುಂತಾದ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದರು.
ನಟನೆಯ ಜೊತೆಗೆ ರಂಜುಷಾ ನೃತ್ಯದಲ್ಲೂ ಸಕ್ರಿಯರಾಗಿದ್ದರು. ಅವರು ಭರತನಾಟ್ಯವನ್ನು ಕಲಿತಿದ್ದರು. ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದುಕೊಂಡಿದ್ದ ಅವರು ಬಳಿಕ ಭರತ ನಾಟ್ಯದಲ್ಲಿಯೂ ಪದವಿಯನ್ನು ಪೂರ್ಣಗೊಳಿಸಿದ್ದರು. ರೆಂಜುಷಾ ಅವರು ಉತ್ತಮ ವಿದ್ಯಾಭ್ಯಾಸ ಪಡೆದುಕೊಂಡಿದ್ದಾರೆ. ರೆಂಜುಷಾ ತಂದೆ ರವೀಂದ್ರನಾಥ್ ಅವರು ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿದ್ದರು. 'ತಮ್ಮ ತಂದೆ- ತಾಯಿ ನನಗೆ ಬಣ್ಣದ ಲೋಕಕ್ಕೆ ಬರಲು, ನೃತ್ಯಾಭ್ಯಾಸ ಮಾಡಲು ಸಾಕಷ್ಟು ಸಪೋರ್ಟ್ ಮಾಡಿದ್ದರು' ಎಂದು ರೆಂಜುಷಾ ಹಿಂದೊಮ್ಮೆ ಹೇಳಿಕೊಂಡಿದ್ದರು. ಸದ್ಯ ರೆಂಜುಷಾ ಅವರ ಅಗಲಿಕೆಯು ಅವರ ಸ್ನೇಹಿತರು ಮತ್ತು ಆಪ್ತರಿಗೆ ಆಘಾತ ನೀಡಿದ್ದಾರೆ.
Malayalam actress Renjusha Menon was found dead at her flat in Thiruvananthapuram on Monday morning. The 30-year-old actor was found hanging in the flat she shared with her husband Manoj, who is also an actor. Some reports say that she was going through financial troubles at the time of her death.
13-09-25 04:31 pm
HK News Desk
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm