ಬ್ರೇಕಿಂಗ್ ನ್ಯೂಸ್
01-11-23 06:31 pm HK News Desk ದೇಶ - ವಿದೇಶ
ತಿರುವನಂತಪುರಂ, ನ.1: ನಟಿ ರೆಂಜೂಷಾ ಮೆನನ್ ಅವರ ಆಘಾತಕಾರಿ ಸಾವಿನ ಸುದ್ದಿ ಬೆನ್ನಲ್ಲೇ, ಮಲಯಾಳಂ ಚಿತ್ರರಂಗದ ಮತ್ತೊಬ್ಬ ಕಿರುತೆರೆ ನಟಿ ಹೃದಯಾಘಾತದಿಂದ ನಿಧನರಾಗಿದ್ದಾರೆ. 8 ತಿಂಗಳ ಗರ್ಭಿಣಿಯಾಗಿದ್ದ ಡಾ.ಪ್ರಿಯಾ ಅ.31ರಂದು ಮೃತಪಟ್ಟಿದ್ದಾರೆ.
34 ವರ್ಷದ ಡಾ.ಪ್ರಿಯಾ, 8 ತಿಂಗಳ ತುಂಬು ಗರ್ಭಿಣಿಯಾಗಿದ್ದು ಎಂದಿನಂತೆ ಹೆಲ್ತ್ ಚೆಕಪ್ಗೆ ಖಾಸಗಿ ಆಸ್ಪತ್ರೆಗೆ ಹೋಗಿದ್ದಾಗ ಹೃದಯಾಘಾತವಾಗಿದೆ. ನವಜಾತ ಶಿಶುವನ್ನು ಉಳಿಸಲಾಗಿದ್ದು ಸದ್ಯಕ್ಕೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಿಯಾ ಅವರ ಒಡನಾಡಿ ನಟ ಕಿಶೋರ್ ಸತ್ಯ ಅವರು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ನಟಿಯ ಸಾವಿನ ಸುದ್ದಿಯನ್ನು ತಿಳಿಸಿದ್ದಾರೆ. ಮಲಯಾಳಂ ಕಿರುತೆರೆ ವಲಯದಲ್ಲಿ ಮತ್ತೊಂದು ಅನಿರೀಕ್ಷಿತ ಸಾವು. ಡಾ.ಪ್ರಿಯಾ ನಿನ್ನೆ ಹೃದಯಾಘಾತದಿಂದ ನಿಧನರಾದರು. ಆಕೆ 8 ತಿಂಗಳ ಗರ್ಭಿಣಿಯಾಗಿದ್ದಳು. ಮಗು ಐಸಿಯುನಲ್ಲಿದೆ. ಬೇರೆ ಯಾವುದೇ ಆರೋಗ್ಯ ಸಮಸ್ಯೆಗಳಿರಲಿಲ್ಲ ಎಂದು ಬರೆದಿದ್ದಾರೆ.
ಡಾ. ಪ್ರಿಯಾ ಮಲಯಾಳಂ ಕಿರುತೆರೆಯಲ್ಲಿ ಚಿರಪರಿಚಿತ ನಟಿಯಾಗಿದ್ದರು. ‘ಕರುತಮುತ್ತು’ ಎನ್ನುವ ಸೀರಿಯಲ್ ನಲ್ಲಿ ಜನಪ್ರಿಯರಾಗಿದ್ದರು. ಮದುವೆಯ ನಂತರ ನಟನೆಯಿಂದ ವಿರಾಮ ಪಡೆದಿದ್ದರು. ವೃತ್ತಿಯಲ್ಲಿ ಪ್ರಸೂತಿ ವೈದ್ಯೆಯೂ ಆಗಿದ್ದರು. ಸದ್ಯ ಎಂಡಿ ವ್ಯಾಸಂಗ ಮಾಡುತ್ತಿದ್ದು ತಿರುವನಂತಪುರಂನ ಪಿಆರ್ಎಸ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ಒಬ್ಬಳೇ ಮಗಳಾಗಿರುವ ಪ್ರಿಯಾ ಸಾವಿನಿಂದ ಆಕೆಯ ತಾಯಿ ಆಘಾತಕ್ಕೆ ಒಳಗಾಗಿದ್ದಾರೆ.
ಅ.30ರಂದು ಜನಪ್ರಿಯ ನಟಿಯಾಗಿದ್ದ ರೆಂಜುಷಾ ಮೆನನ್ ನಿಗೂಢ ರೀತಿಯಲ್ಲಿ ಸಾವು ಕಂಡಿದ್ದರು. ತಿರುವನಂತಪುರದ ಫ್ಲಾಟ್ ಒಂದರಲ್ಲಿ ನಟಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಸೀರಿಯಲ್, ಸಿನಿಮಾ ನಟಿಯಾಗಿದ್ದ ರೆಂಜುಷಾ ನಿರ್ಮಾಪಕಿಯಾಗಿಯೂ ಹೆಸರು ಮಾಡಿದ್ದರು. ಇತ್ತೀಚಿನ ದಿನಗಳಲ್ಲಿ ಒಂದಷ್ಟು ಆರ್ಥಿಕ ನಷ್ಟ ಅನುಭವಿಸಿದ್ದರು ಎಂದು ಸಹವರ್ತಿಗಳು ತಿಳಿಸಿದ್ದರು. ಆದರೆ ಇವರ ಪತಿ ಮನೋಜ್ ಕೂಡ ಸಿನಿಮಾ ನಟ. ಕೊಚ್ಚಿ ಮೂಲದ ರೆಂಜುಷಾ ಭರತನಾಟ್ಯ ಕಲಾವಿದೆಯಾಗಿ ಸಾಕಷ್ಟು ಹೆಸರು ಮಾಡಿದ್ದರು. ಸಣ್ಣ ಆರ್ಥಿಕ ಹೊಡೆತಕ್ಕೆ ಸಾವಿಗೆ ಶರಣಾಗಿದ್ದು ಅಭಿಮಾನಿಗಳಲ್ಲಿ ದಿಗ್ಭ್ರಮೆ ಮೂಡಿಸಿದೆ.
Malayalam serial actor Dr Priya, who was eight months pregnant, died a day ago at a private hospital here following a cardiac arrest, one of her colleagues said on Wednesday. The baby of Dr Priya was saved by doctors of the hospital and is presently on ventilator support in the ICU as it was premature, a hospital source said.
13-09-25 04:31 pm
HK News Desk
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm