ಬ್ರೇಕಿಂಗ್ ನ್ಯೂಸ್
11-11-23 01:13 pm HK News Desk ದೇಶ - ವಿದೇಶ
ಉತ್ತರಪ್ರದೇಶ, ನ.11: ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. 2024ರ ಜನವರಿಯಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಪ್ರಾಣ ಪ್ರತಿಷ್ಠೆ ನಡೆಯಲಿದೆ. ಈ ಐತಿಹಾಸಿಕ ಕ್ಷಣಕ್ಕಾಗಿ ಇಡೀ ಭಾರತವೇ ಕಾತರದಿಂದ ಕಾಯುತ್ತಿದೆ. ಮುಂದಿನ ವರ್ಷ ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಲಲ್ಲಾನ ಮಂದಿರ ಲೋಕಾರ್ಪಣೆಗೊಳ್ಳಲಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಆರ್.ಎಸ್.ಎಸ್ ಸರಸಂಘಚಾಲಕ್ ಮೋಹನ್ ಭಾಗವತ್ ಸೇರಿದಂತೆ ಗಣ್ಯಾತಿಗಣ್ಯರು ಭಾಗವಹಿಸಲಿದ್ದಾರೆ
ದೀಪೋತ್ಸವಕ್ಕೆ ಶೋಭಾಯಾತ್ರೆಗೆ ಚಾಲನೆ :ಇದಕ್ಕೂ ಮುನ್ನ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಅಯೋಧ್ಯೆ ಸಜ್ಜಾಗಿದೆ. ದೀಪಾವಳಿ ಹಿನ್ನೆಲೆ ಅಯೋಧ್ಯೆಯಲ್ಲಿನ 51 ಘಾಟ್ಗಳಲ್ಲಿ 24 ಲಕ್ಷಕ್ಕೂ ಅಧಿಕ ದೀಪಗಳನ್ನು ಬೆಳಗಲು ಸಿದ್ಧತೆ ನಡೆಸಲಾಗಿದೆ. ದೀಪೋತ್ಸವ ಸಂಬಂಧ ರಾಮ ಜನ್ಮಭೂಮಿ ಪಥವನ್ನು ಹೂವುಗಳಿಂದ ಅಲಂಕಾರಗೊಳಿಸಲಾಗಿದೆ. ಇಲ್ಲಿನ ಬೀದಿಗಳು ರಂಗೋಲಿಗಳಿಂದ ಕಂಗೊಳಿಸುತ್ತಿವೆ. ಸುಮಾರು 24 ಲಕ್ಷಕ್ಕೂ ಅಧಿಕ ಮಣ್ಣಿನ ದೀಪಗಳಿಂದ ದೀಪೋತ್ಸವ ಆಚರಿಸಲಾಗುತ್ತಿದ್ದು, ಈ ಮೂಲಕ ಗಿನ್ನೆಸ್ ದಾಖಲೆ ಬರೆಯಲು ಮುಂದಾಗಿದೆ. ದೀಪೋತ್ಸವದ ಶೋಭಾಯಾತ್ರೆ ಆರಂಭಗೊಂಡಿದ್ದು, ಈ ವೇಳೆ ಮಹಿಳೆಯರು ಸಾಂಪ್ರದಾಯಿಕ ಉಡುಪು ತೊಟ್ಟು ನೃತ್ಯ ಮಾಡಿದರು. ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಭಾಗಿಯಾಗಿವೆ.
ಮದುಮಗಳಂತೆ ಸಿಂಗಾರಗೊಂಡ ಆಯೋಧ್ಯೆ :
ದೀಪೋತ್ಸವ ಹಿನ್ನೆಲೆ ಅಯೋಧ್ಯಾನಗರಿ ಮಧುಮಗಳಂತೆ ಸಿಂಗಾರಗೊಂಡಿದೆ. ಸಾವಿರಾರು ಭಕ್ತರು ದೀಪೋತ್ಸವಕ್ಕೆ ಕಾತರದಿಂದ ಕಾಯುತ್ತಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಮುಂದುವರೆದಿದ್ದು, ಸಾಕಷ್ಟು ಕೆಲಸ ಈಗಾಗಲೇ ಪೂರ್ಣಗೊಂಡಿದೆ. ರಾಮಮಂದಿರ ನಿರ್ಮಾಣ ಕಾರ್ಯದ ವಿಡಿಯೋವೊಂದನ್ನು ರಾಮಜನ್ಮಭೂಮಿ ಟ್ರಸ್ಟ್ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು.
Uttar Pradesh's Ayodhya is all set to hold a grand Deepotsav on Saturday (11 November) on the eve of Diwali. Over 24 lakh diyas at 51 ghats will illuminate the city on Saturday evening.
01-04-25 10:45 pm
HK News Desk
Karnataka diesel price hike: ಹಾಲು, ಟೋಲ್, ಕರೆಂ...
01-04-25 09:35 pm
ರಾಜ್ಯ ಸರ್ಕಾರದಿಂದ ಯುಗಾದಿಗೆ ಬೆಲೆ ಏರಿಕೆ ಕೊಡುಗೆ ;...
01-04-25 03:49 pm
Karnataka toll hike, Milk: ರಾಜ್ಯದ ಜನತೆಗೆ ಎಪ್ರ...
01-04-25 12:26 pm
ಕಳೆದ 11 ವರ್ಷಗಳಿಂದ ನೀವೇ ಅಧಿಕಾರದಲ್ಲಿ ಮೊಳೆ ಹೊಡೆ...
31-03-25 07:41 pm
31-03-25 09:34 pm
HK News Desk
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
ನಡುಗಿದ ಮ್ಯಾನ್ಮಾರ್, ಥೈಲ್ಯಾಂಡ್ ; ಭೀಕರ ಭೂಕಂಪಕ್ಕೆ...
28-03-25 04:15 pm
01-04-25 09:38 pm
Mangalore Correspondent
Mangalore, MLA Vedavyas Kamath: ಜೈಲಿನ ಅಧಿಕಾರಿ...
01-04-25 09:12 pm
ರಾಜ್ಯದಲ್ಲಿ ಬೆಲೆ ಏರಿಕೆ ಗಗನಕ್ಕೆ ; ರೇಷನ್ ಅಂಗಡಿಗಳ...
01-04-25 07:12 pm
Belthangady Accident, Mangalore: ಯಕ್ಷಗಾನ ಮುಗಿ...
31-03-25 12:26 pm
CCB Police, CM Medal, Mangalore: ಮಂಗಳೂರು ಪೊಲೀ...
30-03-25 11:02 pm
01-04-25 11:07 pm
Mangalore Correspondent
Bangalore Honeytrap, Businessman, Sridevi: ಒಂ...
01-04-25 10:42 pm
Davangere Bank Robbery, Police; ಉದ್ಯಮ ವಿಸ್ತರಣ...
01-04-25 05:32 pm
Mangalore Muda Commissioner, FIR, Noor Zahara...
31-03-25 09:29 pm
Mangalore Derlakatte Robbery attempt; ದೇರಳಕಟ್...
30-03-25 08:59 am