ಬ್ರೇಕಿಂಗ್ ನ್ಯೂಸ್
14-11-23 01:37 pm HK News Desk ದೇಶ - ವಿದೇಶ
ಕಣ್ಣೂರು, ನ.14: ಕೇರಳದ ಕಣ್ಣೂರು ಜಿಲ್ಲೆಯ ಅಯ್ಯಂಕುನ್ನು ಅರಣ್ಯ ಪ್ರದೇಶದಲ್ಲಿ ಪೊಲೀಸರು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಸೋಮವಾರ ಬೆಳಗ್ಗೆ ನಡೆದ ಗುಂಡಿನ ಚಕಮಕಿ ವೇಳೆ ಇಬ್ಬರು ನಕ್ಸಲರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಸೋಮವಾರ ಬೆಳಗ್ಗೆ ಅಯ್ಯಂಕುನ್ನು- ಉರುಪ್ಪುಕುಟ್ಟಿ ಅರಣ್ಯ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ಥಂಡರ್ ಬೋಲ್ಟ್ ತಂಡದ ಪೊಲೀಸ್ ತಂಡದ ಮೇಲೆ ನಕ್ಸಲರು ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ಪೊಲೀಸರು ಪ್ರತಿದಾಳಿ ನಡೆಸಿದ್ದಾರೆ. ನಿರಂತರ ಹತ್ತು ನಿಮಿಷ ಕಾಲ ಗುಂಡಿನ ಚಕಮಕಿ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನೆ ಬಳಿಕ ಸ್ಥಳಕ್ಕೆ ಎಎನ್ಎಫ್ ಪಡೆ ಆಗಮಿಸಿದ್ದು, ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಸ್ಥಳದಲ್ಲಿ ರಕ್ತದ ಕಲೆಗಳು ಕಂಡುಬಂದಿರುವುದರಿಂದ ನಕ್ಸಲರು ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ.
ಸ್ಥಳದಲ್ಲಿ ಮೂರು ಬಂದೂಕು ಪತ್ತೆಯಾಗಿದ್ದು, ಅವನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ನಕ್ಸಲರು ಅರಣ್ಯ ಪ್ರದೇಶದಲ್ಲಿ ಶಿಬಿರ ನಡೆಸಿರುವ ಸಾಧ್ಯತೆ ಬಗ್ಗೆ ಪೊಲೀಸರು ಅಂದಾಜಿಸಿದ್ದಾರೆ. ಕಣ್ಣೂರು ಜಿಲ್ಲೆಯ ಕರಿಕೋಟ್ಟಕರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ಕೆಲವು ಮನೆಗಳಿಗೆ 9 ಮಂದಿಯಿದ್ದ ನಕ್ಸಲರ ತಂಡ ಭೇಟಿ ನೀಡಿದ್ದಾಗಿ ಸುದ್ದಿ ಹಬ್ಬಿತ್ತು. ಬಂದೂಕುಧಾರಿಗಳಾಗಿದ್ದ ತಂಡ, ಸ್ಥಳೀಯ ಮನೆಗಳಿಂದ ಆಹಾರ ಸಂಗ್ರಹ ಮಾಡಿತ್ತು. ಹೀಗಾಗಿ ಪೊಲೀಸರು ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದರು. ಸೋಮವಾರ ಬೆಳಗ್ಗೆ ಥಂಡರ್ ಬೋಲ್ಟ್ ತಂಡದ ಸದಸ್ಯರ ಮೇಲೆ ಗುಂಡಿನ ದಾಳಿ ನಡೆಸಿರುವುದರಿಂದ ನಕ್ಸಲರು ಈ ಭಾಗದಲ್ಲಿ ಬೀಡು ಬಿಟ್ಟಿರುವುದು ಖಚಿತವಾಗಿದೆ.
The Kerala Police on Monday engaged in an encounter with Maoist in Kerala's Kannur district after the outlawed group opened fire on them deep inside the forest.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 03:10 pm
HK News Staffer
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm