ಬ್ರೇಕಿಂಗ್ ನ್ಯೂಸ್
23-11-23 08:40 pm HK News Desk ದೇಶ - ವಿದೇಶ
ಮಹಾರಾಷ್ಟ್ರ, ನ.23: ಸಾಕು ಪ್ರಾಣಿಗಳ ಕ್ಲಿನಿಕ್ನಲ್ಲಿ ಸಾಕು ನಾಯಿಯೊಂದು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಪುಣೆಯಲ್ಲಿ ಇಬ್ಬರು ವೈದ್ಯರು ಸೇರಿದಂತೆ ನಾಲ್ವರ ವಿರುದ್ಧ ಪೊಲೀಸ್ ಕೇಸ್ ದಾಖಲಾಗಿದೆ. ಶ್ವಾನದ ಮಾಲಕಿ ನೀಡಿದ ದೂರಿನ ಮೇರೆಗೆ ಪೊಲೀಸರು ಪೆಟ್ ಕ್ಲಿನಿಕ್ನ ವೈದ್ಯರನ್ನು ವಿಚಾರಣೆಗೂ ಒಳಪಡಿಸಿದ್ದಾರೆ.
ಇಲ್ಲಿನ ಪಾಶಾನ್ ಉಪನಗರದಲ್ಲಿರುವ ಪೆಟ್ ಕ್ಲಿನಿಕ್ಗೆ ನವೆಂಬರ್ 17ರಂದು ಸಂಜೆ 35 ವರ್ಷದ ಮಹಿಳೆಯೊಬ್ಬರು ತಮ್ಮ 'ಹನಿ' ಎಂಬ ಲ್ಯಾಬ್ರಡಾರ್ ಶ್ವಾನವನ್ನು ಕರೆತಂದಿದ್ದರು. ವಾರ್ಷಿಕ ವ್ಯಾಕ್ಸಿನೇಷನ್ ಹಾಗೂ ಉಗುರು ಟ್ರಿಮ್ಮಿಂಗ್ಗೆಂದು ಶ್ವಾನವನ್ನು ಪೆಟ್ ಕ್ಲಿನಿಕ್ನ ವೈದ್ಯರಿಗೆ ಮಾಲಕಿ ಒಪ್ಪಿಸಿದ್ದರು. ಡಾ. ಶುಭಂ ರಜಪೂತ್ ಹಾಗೂ ಇತರ ಇಬ್ಬರು ಸೇರಿಕೊಂಡು ಶ್ವಾನವನ್ನು ಮರಕ್ಕೆ ಕಟ್ಟಲು ಪ್ರಯತ್ನಿಸುತ್ತಿದ್ದರು. ಆದರೆ, ಡಾ. ರಜಪೂತ್ ಕಟ್ಟಿದ್ದ ಬೆಲ್ಟ್ ಶ್ವಾನದ ಕುತ್ತಿಗೆಗೆ ಬಿಗಿದುಕೊಂಡಿದೆ. ಪರಿಣಾಮ ಶ್ವಾನ ಕುಸಿದು ಕೆಳಗೆ ಬಿದ್ದಿದೆ.
ನಂತರ ಚಿಕಿತ್ಸೆಗಾಗಿ ವೈದ್ಯರ ಕೊಠಡಿಗೆ ಶ್ವಾನವನ್ನು ಎತ್ತಿಕೊಂಡು ಹೋಗಲಾಗಿದೆ. ಆಗ 15 ನಿಮಿಷಗಳ ಬಳಿಕ ಮತ್ತೊಬ್ಬ ವೈದ್ಯ ಶ್ವಾನ ಮೃತಪಟ್ಟಿದೆ ಎಂದು ಮಾಲಕಿಗೆ ತಿಳಿಸಿದ್ದಾರೆ. ಆದರೆ, ಶ್ವಾನದ ಸಾವಿನ ಕಾರಣದ ಕುರಿತು ಸರಿಯಾದ ಮಾಹಿತಿಯನ್ನು ಈ ವೈದ್ಯರು ನೀಡಿಲ್ಲ. ಹೀಗಾಗಿ ಈ ಘಟನೆಯ ನಂತರ ಮಾಲಕಿ ಚತುರ್ಶೃಂಗಿ ಪೊಲೀಸ್ ಠಾಣೆಗೆ ಬಂದು ಡಾ.ಸಜೀನ್ ರಾಜಾಧ್ಯಕ್ಷ (60), ಡಾ.ಶುಭಂ ರಜಪೂತ್ (35) ಮತ್ತು ಇಬ್ಬರು ಅಪರಿಚಿತ ವ್ಯಕ್ತಿಗಳು ಸೇರಿ ಒಟ್ಟು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ದೂರುದಾರ ಮಾಲಕಿಯು ಲ್ಯಾಬ್ರಡಾರ್ ಶ್ವಾನ 'ಹನಿ'ಯನ್ನು ಕಳೆದ 8 ವರ್ಷಗಳಿಂದ ಸಾಕುತ್ತಿದ್ದರು. ಅದನ್ನು 40 ದಿನಗಳ ಮರಿಯಾಗಿದ್ದಾಗಲೇ ಮನೆಗೆ ತರಲಾಗಿತ್ತು. ಕ್ಲಿನಿಕ್ನಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಶ್ವಾನ ಮೃತಪಟ್ಟಿದೆ ಎಂದು ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
In a startling turn of events at Pune’s Chaturshrungi Police Station, a routine dog vaccination took a tragic turn, leading to a legal dispute and raising questions about the handling of the situation by two local veterinary doctors.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 03:55 pm
HK News Staffer
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm