ಬ್ರೇಕಿಂಗ್ ನ್ಯೂಸ್
26-11-23 12:06 pm HK NEWS DESK ದೇಶ - ವಿದೇಶ
ಕೊಚ್ಚಿ, ನ 26: ಕೇರಳದ ಕೊಚ್ಚಿ ವಿಶ್ವವಿದ್ಯಾಲಯದಲ್ಲಿ ನಡೆದ ಟೆಕ್ ಫೆಸ್ಟ್ನಲ್ಲಿ ಕಾಲ್ತುಳಿತ ಉಂಟಾಗಿ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಅನೇಕ ಜನ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮೃತ ನಾಲ್ವರು ವಿದ್ಯಾರ್ಥಿಗಳ ಪೈಕಿ ಇಬ್ಬರನ್ನು ಗುರುತಿಸಲಾಗಿದೆ. ಕೂತತುಕುಲಂನಿಂದ ಅತುಲ್ ತಂಬಿ ಮತ್ತು ಉತ್ತರ ಪರವೂರಿದ ಅಂದ್ರಿಫ್ತಾ ಎಂದು ಗುರುತಿಸಲಾಗಿದೆ. ಇನ್ನೂ ನಾಲ್ವರ ಸ್ಥಿತಿ ಗಂಭಿರವಾಗಿದೆ ಎಂದು ತಿಳಿದು ಬಂದಿದೆ
ಇಲ್ಲಿಯ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ಟೆಕ್ ಫೆಸ್ಟ್ ಆಯೋಜಿಸಲಾಗಿತ್ತು. ಸಭಾಂಗಣದಲ್ಲಿ ಖ್ಯಾತ ಗಾಯಕಿ ನಿಕಿತಾ ಗಾಂಧಿ ಅವರ ಸಂಗೀತ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ನೂಕುನುಗ್ಗಲು ಉಂಟಾಗಿ ನಾಲ್ವರು ಸಾವನ್ನಪ್ಪಿದ್ದಾರೆ. 60ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಇಲ್ಲಿಯ ಕಲಮಸ್ಸೆರಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.
ಗಾಯನ ವೇಳೆ ವಿದ್ಯಾರ್ಥಿಗಳು ಸಭಾಂಗಣದಲ್ಲಿ ನೃತ್ಯ ಮಾಡುತ್ತಿದ್ದರು. ಇದೇ ವೇಳೆ, ದಿಢೀರ್ ಮಳೆ ಸುರಿದಿದ್ದರಿಂದ ಹೊರಗಿದ್ದ ವಿದ್ಯಾರ್ಥಿಗಳು ಏಕಾಏಕಿ ಸಭಾಂಗಣ ಒಳಗೆ ಓಡಿ ಹೋಗಲು ಆರಂಭಿಸಿದ್ದಾರೆ. ಪರಿಣಾಮ ಕಾಲ್ತುಳಿತಕ್ಕೆ ಕಾರಣವಾಗಿದೆ ಎಂದು ಹೇಳಲಾಗಿದೆ.
ಘಟನೆ ಬಗ್ಗೆ ಆರೋಗ್ಯ ಸಚಿವೆ ವೀಣಾ ಜಾರ್ಜ್ ಪ್ರತಿಕ್ರಿಯೆ ನೀಡಿದ್ದಾರೆ. ಟೆಕ್ ಫೆಸ್ಟ್ ಕಾರ್ಯಕ್ರಮದ ಕೊನೆಯ ದಿನವಾದ ಇಂದು ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಅನಿರೀಕ್ಷಿತವಾಗಿ ಸುರಿದ ಮಳೆಯಿಂದಾಗಿ ವಿದ್ಯಾರ್ಥಿಗಳ ಕಾಲ್ತುಳಿತ ಉಂಟಾಗಿದೆ. ಈ ವರೆಗೂ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.
ಕೊಚ್ಚಿ ವಿಶ್ವವಿದ್ಯಾಲಯದ ವೈಸ್ ಚಾನ್ಸೆಲರ್ ಡಾ. ಶಂಕರನ್ ಮಾತನಾಡಿ, ಟೆಕ್ ಫೆಸ್ಟ್ ಅಂಗವಾಗಿ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ 2000ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾಥಿರ್ಗಳು ಭಾಗಿಯಾಗಿದ್ದರು. ಮಳೆಯಿಂದ ವಿದ್ಯಾರ್ಥಿಗಳು ಸಭಾಂಗಣದೊಳಗೆ ಬರಲು ಮುಂದಾದ ವೇಳೆ ನೂಕುನುಗ್ಗಲು ಉಂಟಾಗಿ ಕೆಲ ವಿದ್ಯಾರ್ಥಿಗಳು ಕೆಳಗೆ ಬಿದ್ದಿದ್ದಾರೆ. ಘಟನೆಯಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಿದ್ದಾರೆ.
Four students were killed, and over 60 were injured in a stampede during Cochin university annual festival here on November 25 night, police said. Officials said that the stampede occurred before well known singer Nikita Gandhi was to perform for a musical festival in the open air auditorium of Cochin University of Science and Technology (CUSAT) here.
13-09-25 10:19 am
HK News Desk
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm