ಬ್ರೇಕಿಂಗ್ ನ್ಯೂಸ್
06-12-23 12:45 pm HK News Desk ದೇಶ - ವಿದೇಶ
ಅಬುಜಾ, ಡಿ 06: ವಾಯುವ್ಯ ನೈಜೀರಿಯಾದಲ್ಲಿ ಸೇನೆಯ ಡ್ರೋನ್ ದಾಳಿ ಗುರಿ ತಪ್ಪಿ, 85 ಮಂದಿ ನಾಗರಿಕರು ದಾರುಣ ಸಾವಿಗೀಡಾಗಿರುವ ಘಟನೆ ನಡೆದಿದೆ.
ಕಡುನಾ ರಾಜ್ಯದ ತುಡುನ್ ಬಿರಿ ಗ್ರಾಮದ ಬಳಿ ಭಯೋತ್ಪಾದಕರನ್ನು ಗುರಿಯಾಗಿಸಿ ದಾಳಿ ನಡೆಸಲಾಗಿತ್ತು. ಆದರೆ ಗುರಿ ತಪ್ಪಿದ್ದು, ನಾಗರಿಕರ ಸಾವಿಗೆ ಕಾರಣವಾಗಿದೆ. ನೈಜೀರಿಯಾದ ಸಂಘರ್ಷದ ವಲಯದಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ತನಿಖೆ ನಡೆಸಲು ದೇಶದ ಅಧ್ಯಕ್ಷರು ಆದೇಶ ಹೊರಡಿಸಿದ್ದಾರೆ.
ದಾಳಿಯಲ್ಲಿ ಕನಿಷ್ಠ 66 ಜನರು ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ತುರ್ತು ನಿರ್ವಹಣಾ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ. ಮಕ್ಕಳು, ಮಹಿಳೆಯರು ಮತ್ತು ವೃದ್ಧರು ಸೇರಿದಂತೆ 85 ಮಂದಿ ಮೃತಪಟ್ಟಿದ್ದಾರೆ. ದಾಳಿಯಲ್ಲಿ ಸಿಲುಕಿರುವ ಸಂತ್ರಸ್ತರಿಗಾಗಿ ಶೋಧಕಾರ್ಯ ನಡೆಯುತ್ತಿದೆ.
ನೈಜೀರಿಯಾದ ಸೇನಾ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ತೌರೀದ್ ಲಗ್ಬಾಜಾ ಅವರು ಮಂಗಳವಾರ ಗ್ರಾಮಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಡ್ರೋನ್ ದಾಳಿಗೆ ಕ್ಷಮೆಯಾಚಿಸಿದ್ದಾರೆ
ತಪ್ಪಾದ ಲೆಕ್ಕಾಚಾರದ ವೈಮಾನಿಕ ದಾಳಿಯ ಘಟನೆಗಳು ದೇಶದಲ್ಲಿ ಆತಂಕಕಾರಿ ಆಯಾಮವನ್ನು ಪಡೆದುಕೊಳ್ಳುತ್ತಿದೆ ಎಂದು ನೈಜೀರಿಯಾದ ಮಾಜಿ ಉಪಾಧ್ಯಕ್ಷ ಮತ್ತು ಈ ವರ್ಷದ ಚುನಾವಣೆಯಲ್ಲಿ ಪ್ರಮುಖ ವಿಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಅತಿಕು ಅಬುಬಕರ್ ಅಭಿಪ್ರಾಯಪಟ್ಟಿದ್ದಾರೆ.
ಒಂದು ದಶಕಕ್ಕೂ ಹೆಚ್ಚು ಕಾಲ ನೈಜೀರಿಯಾದ ಉತ್ತರವನ್ನು ಅಸ್ಥಿರಗೊಳಿಸಿದ ಉಗ್ರಗಾಮಿ ಹಿಂಸಾಚಾರ ಮತ್ತು ಬಂಡುಕೋರರ ದಾಳಿಯ ವಿರುದ್ಧ ಹೋರಾಡುವಾಗ ನೈಜೀರಿಯಾದ ಮಿಲಿಟರಿ ಆಗಾಗ್ಗೆ ವೈಮಾನಿಕ ದಾಳಿಗಳನ್ನು ನಡೆಸುತ್ತದೆ. ಆಗಾಗ್ಗೆ ನಾಗರಿಕ ಸಾವುನೋವುಗಳನ್ನು ಉಂಟುಮಾಡುತ್ತದೆ. ಜನವರಿಯಲ್ಲಿ ನಸಾರಾವಾ ರಾಜ್ಯ ಹಾಗೂ 2022 ರ ಡಿಸೆಂಬರ್ನಲ್ಲಿ ಝಂಫಾರಾ ರಾಜ್ಯದಲ್ಲಿ ಹತ್ತಾರು ಮಂದಿ ಇಂತಹ ದಾಳಿಗಳಿಗೆ ಬಲಿಯಾಗಿದ್ದಾರೆ.
A Nigerian army drone strike accidentally killed at least 85 civilians on Sunday in a village in northwest Kaduna State, officials said, in one of the country's deadliest military bombing mishaps.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 03:55 pm
HK News Staffer
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm