ಬ್ರೇಕಿಂಗ್ ನ್ಯೂಸ್
06-12-23 05:06 pm HK News Desk ದೇಶ - ವಿದೇಶ
ಲಕ್ನೋ, ಡಿ 06: ರೈಲ್ವೇಸ್ನಲ್ಲಿ ಕೆಲಸ ಮಾಡುತ್ತಿದ್ದ ವೈದ್ಯರೊಬ್ಬರು ತಮ್ಮ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಕೊಲೆ ಮಾಡಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ರಾಯ್ ಬರೇಲಿಯ ರೈಲ್ವೇಸ್ ಕಾಲೋನಿಯಲ್ಲಿ ನಡೆದಿದೆ.
ರೈಲ್ವೇಯಲ್ಲಿ ವೈದ್ಯಕೀಯ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಕಣ್ಣಿನ ತಜ್ಞ ಡಾ.ಅರುಣ್ ಕುಮಾರ್ ಅವರನ್ನು ರಾಯ್ ಬರೇಲಿಯಲ್ಲಿರುವ ಮಾಡರ್ನ್ ರೈಲ್ ಕೋಚ್ ಫ್ಯಾಕ್ಟರಿಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು ಎನ್ನಲಾಗಿದೆ.
ಮಿರ್ಜಾಪುರದ ನಿವಾಸಿಯಾಗಿರುವ ಡಾ.ಕುಮಾರ್ ಅವರು ತಮ್ಮ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ರಾಯ್ ಬರೇಲಿಯ ರೈಲ್ವೇ ಕ್ವಾರ್ಟರ್ಸ್ನಲ್ಲಿ ವಾಸವಾಗಿದ್ದರು.
ಕಳೆದ ಭಾನುವಾರ ನೆರೆಹೊರೆಯವರಿಗೆ ಕೊನೆಯದಾಗಿ ಕಾಣಿಸಿಕೊಂಡಿದ್ದಾರೆ ಆ ಬಳಿಕ ಯಾರ ಕಣ್ಣಿಗೂ ಈ ಕುಟುಂಬ ಸದಸ್ಯರು ಕಾಣಲಿಲ್ಲ ಇದರಿಂದ ಅನುಮಾನಗೊಂಡ ಅಕ್ಕಪಕ್ಕದ ಮನೆಯವರು ಹಾಗೂ ವೈದ್ಯರ ಸಹೋದ್ಯೋಗಿಗಳು ಮನೆಯ ಬಳಿ ಬಂದು ಬೆಲ್ ಮಾಡಿದ್ದಾರೆ ಆದರೆ ಮನೆಯ ಒಳಗಿಂದ ಯಾವುದೇ ಸದ್ದು ಕೇಳಿಸಲಿಲ್ಲ ಆದರೆ ಮನೆಯ ಒಳಗಿನಿಂದ ಬಾಗಿಲು ಹಾಕಿತ್ತು ಇದನ್ನು ಕಂಡು ಸಂಶಗೊಂಡ ಸಹೋದ್ಯೋಗಿಗಳು ಮನೆಯ ಬಾಗಿಲು ಮುರಿದು ಒಳಗೆ ಹೋಗಿ ನೋಡಿದಾಗ ಒಳಗೆ ವೈದ್ಯ, ಅವರ ಪತ್ನಿ ಅರ್ಚನಾ, ಮಗಳು ಆದಿವಾ (12) ಮತ್ತು ಮಗ ಆರವ್ (40) ಅವರ ಮೃತದೇಹ ಪತ್ತೆಯಾಗಿದೆ.
ಆ ಕೂಡಲೇ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಯಿತು ಪೊಲೀಸರು ಬಂದು ಪರಿಶೀಲನೆ ನಡೆಸಿದಾಗ ಮೃತದೇಹದ ಬಳಿ ಸುತ್ತಿಗೆ, ರಕ್ತದ ಕಲೆಗಳು ಮತ್ತು ಡ್ರಗ್ ಇಂಜೆಕ್ಷನ್ಗಳು ಪತ್ತೆಯಾಗಿದ್ದು ಪೊಲೀಸರ ಮಾಹಿತಿಯಂತೆ ವೈದ್ಯರು ಮೊದಲು ಮಕ್ಕಳು ಹಾಗೂ ಪತ್ನಿಗೆ ಅಮಲು ಬರುವ ಇಂಜೆಕ್ಷನ್ ನೀಡಿ ಬಳಿಕ ಸುತ್ತಿಗೆಯಿಂದ ಹಲ್ಲೆ ನಡೆಸಿ ಹತ್ಯೆಗೈದಿರಬೇಕು ಆ ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೇಲ್ನೋಟಕ್ಕೆ ಕಾಣುತ್ತಿದ್ದು ಮರಣೋತ್ತರ ಪರೀಕ್ಷೆಯ ಬಳಿಕ ಹೆಚ್ಚಿನ ವಿವರ ಸಿಗಲಿದೆ ಎಂದು ರಾಯ್ ಬರೇಲಿ ಎಸ್ಪಿ ಅಲೋಕ್ ಪ್ರಿಯದರ್ಶಿ ಹೇಳಿದ್ದಾರೆ.
ನೆರೆಹೊರೆಯವರ ಪ್ರಕಾರ ಕೌಟುಂಬಿಕ ಸಮಸ್ಯೆ ಇದ್ದಿರಬಹುದು ಆದರೆ ರೋಗಿಗಳಿಗೆ ಮತ್ತು ನೆರೆಹೊರೆಯವರೊಂದಿಗೆ ಒಳ್ಳೆಯ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದರು ಕೆಲವೊಮ್ಮೆ ಕೋಪಗೊಳ್ಳುತ್ತಿದ್ದರು ಖಿನ್ನತೆಗೆ ಒಳಗಾಗುತ್ತಿದ್ದರು ಇದೇ ಖಿನ್ನತೆಯಿಂದ ಈ ರೀತಿಯ ಕೃತ್ಯ ಎಸಗಿರಲು ಬಹುದು ಎಂದು ಸ್ಥಳೀಯರು ಹೇಳಿದ್ದಾರೆ.
A doctor in Uttar Pradesh's Rae Bareli killed his wife and two children, and later died by suicide. The incident was reported late on Tuesday, when the doctor, an eye specialist at the Modern Rail Coach Factory Hospital, and his family did not respond to phone calls by one of his colleagues.
13-09-25 10:19 am
HK News Desk
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm