ಬ್ರೇಕಿಂಗ್ ನ್ಯೂಸ್
07-12-23 11:01 pm HK News Desk ದೇಶ - ವಿದೇಶ
ಹೈದರಾಬಾದ್, ಡಿ.7; ತೆಲಂಗಾಣ ರಾಜ್ಯದ ಎರಡನೇ ಮುಖ್ಯಮಂತ್ರಿಯಾಗಿ ಎನುಮುಲ ರೇವಂತ್ ರೆಡ್ಡಿ ಅವರು ಸೇರಿದ್ದ ಲಕ್ಷಾಂತರ ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರ ಸಮ್ಮುಖದಲ್ಲಿ ಗುರುವಾರ ಮಧ್ಯಾಹ್ನ 1 ಗಂಟೆ 20 ನಿಮಿಷಕ್ಕೆ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಅಧಿಕಾರದ ಗೌಪ್ಯತೆಯನ್ನು ಬೋಧಿಸಿದರು. ಸಿಎಂ ಹುದ್ದೆಯ ಪ್ರಬಲ ಆಕಾಂಕ್ಷಿಯಾಗಿದ್ದ ಮಲ್ಲು ಭಟ್ಟಿ ವಿಕ್ರಮಾರ್ಕ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸಿದ್ದಾರೆ. ರೇವಂತ್ ರೆಡ್ಡಿ ಅವರು ರೇವಂತ್ ರೆಡ್ಡಿ ಅನೆ ನೇನು ಎನ್ನುತ್ತಿದ್ದಂತೆ ಸ್ಟೇಡಿಂಯನಲ್ಲಿ ಸೇರಿದ್ದ ಕಾಂಗ್ರೆಸ್ ಕಾರ್ಯಕರ್ತರ, ರೆಡ್ಡಿ ಅವರ ಬೆಂಬಲಿಗರ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು.
ಕೊಂಡಗಲ್ ಕ್ಷೇತ್ರದಿಂದ ಸ್ಪರ್ಧಿಸಿ ಜಯಭೇರಿ ಬಾರಿಸಿದ್ದ ರೇವಂತ್ ರೆಡ್ಡಿ ಅವರು ಮುಖ್ಯಮಂತ್ರಿಯಾಗಿ, ಉಪ ಮುಖ್ಯಮಂತ್ರಿಯಾಗಿ ಭಟ್ಟಿ ವಿಕ್ರಮಾರ್ಕ ಮಲ್ಲು, ಸಚಿವರಾಗಿ ನಾಲಮಾಡ ಉತ್ತಮ್ ಕುಮಾರ್ ರೆಡ್ಡಿ, ಪೊನ್ನಂ ಪ್ರಭಾಕರ್, ಸಿ ದಾಮೋದರ ರಾಜನರಸಿಂಹ ಸೇರಿ 6 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಹೈದರಾಬಾದ್ನ ಎಲ್ಬಿ ಸ್ಟೇಡಿಯಂನಲ್ಲಿ ಹಮ್ಮಿಕೊಂಡಿದ್ದ ಅದ್ಧೂರಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ, ಕರ್ನಾಟಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ವೇದಿಕೆಯಲ್ಲಿ ಸಿಎಂ ಆಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ಎಂಬ ಹೆಸರಿನ ಬದಲಾಗಿ ತೆಲಂಗಾಣದಲ್ಲಿ ಪ್ರಜಾಪ್ರಭುತ್ವಂ ಪ್ರಮಾಣ ವಚನ ಸ್ವೀಕಾರ, ಅಭಿವೃದ್ಧಿಗೆ ಶ್ರೀಕಾರ ಎಂಬ ಡಿಜಿಟಲ್ ಬರಹ ಗಮನ ಸೆಳೆಯಿತು.
Enumula Revanth Reddy was sworn in as the second Chief Minister of Telangana state at 1.20 pm on Thursday in the presence of lakhs of fans and Congress workers.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 03:55 pm
HK News Staffer
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm