Chennai, schools, colleges, holiday; ತಮಿಳುನಾಡು ಕರಾವಳಿಯಲ್ಲಿ ಮೈಚಾಂಗ್ ಅಬ್ಬರ ; ಚೆನ್ನೈನಲ್ಲಿ ಐದನೇ ದಿನವೂ ಶಾಲೆ, ಕಾಲೇಜಿಗೆ ರಜೆ ಘೋಷಣೆ 

08-12-23 02:22 pm       HK News Desk   ದೇಶ - ವಿದೇಶ

ಮೈಚಾಂಗ್ ಚಂಡಮಾರುತದ ಹೊಡೆತಕ್ಕೆ ತಮಿಳುನಾಡು ಕರಾವಳಿ ತತ್ತರಿಸಿದ್ದು ಚೆನ್ನೈ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಾನಿಗೀಡಾದ ಪ್ರದೇಶಗಳಲ್ಲಿ ಪರಿಹಾರ ಕಾರ್ಯ ಕೈಗೊಳ್ಳಲಾಗಿದ್ದು ತಮಿಳುನಾಡು ಸರ್ಕಾರ ಸತತ ಐದನೇ ದಿನವೂ ಚೆನ್ನೈನಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿದೆ. 

ಚೆನ್ನೈ, ಡಿ.8; ಮೈಚಾಂಗ್ ಚಂಡಮಾರುತದ ಹೊಡೆತಕ್ಕೆ ತಮಿಳುನಾಡು ಕರಾವಳಿ ತತ್ತರಿಸಿದ್ದು ಚೆನ್ನೈ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಾನಿಗೀಡಾದ ಪ್ರದೇಶಗಳಲ್ಲಿ ಪರಿಹಾರ ಕಾರ್ಯ ಕೈಗೊಳ್ಳಲಾಗಿದ್ದು ತಮಿಳುನಾಡು ಸರ್ಕಾರ ಸತತ ಐದನೇ ದಿನವೂ ಚೆನ್ನೈನಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿದೆ. 

ಚೆನ್ನೈ ಆಸುಪಾಸಿನಲ್ಲಿ ಹಲವಾರು ಭಾಗಗಳು ಜಲಾವೃತಗೊಂಡಿದೆ. ಮೂಲಭೂತ ಸಾಮಗ್ರಿ ಕೊರತೆಯಿಂದ ಜನರು ಪರದಾಡುವ ಸ್ಥಿತಿ ಎದುರಾಗಿದೆ. ನಗರದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ 20ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ  ರಕ್ಷಣಾ ಕಾರ್ಯಾಚರಣೆ ನಡೆಸಿ ಶುಕ್ರವಾರ ಬೆಳಗ್ಗೆ ಮತ್ತೊಂದು ಮೃತದೇಹವನ್ನು ಹೊರತೆಗೆದಿದೆ.

ಈ ಮಧ್ಯೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರ ಮತ್ತು ಶನಿವಾರ ತಮಿಳುನಾಡು ಮತ್ತು ಕೇರಳದಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಪುದುಚೇರಿಯಲ್ಲಿ ವ್ಯಾಪಕ ಮಳೆ ಸುರಿಯಲಿದೆ ಎಂದು ಹೇಳಿದೆ. ಮುಂದಿನ 5 ದಿನಗಳಲ್ಲಿ ಕೇರಳ, ಮಾಹೆ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಮತ್ತು ಲಕ್ಷದ್ವೀಪಗಳಲ್ಲಿ ಪ್ರತ್ಯೇಕವಾಗಿ ಮಳೆಯಾಗುವ ಸಾಧ್ಯತೆಯಿದೆ' ಎಂದು ಹವಾಮಾನ ಇಲಾಖೆ ಹೇಳಿದೆ.

In response to severe flooding in the aftermath of Cyclone Michaung, the Tamil Nadu government has declared a holiday for all schools and colleges in Chennai, Tiruvallur, Kancheepuram, and Chengalpattu on Thursday.