ಬ್ರೇಕಿಂಗ್ ನ್ಯೂಸ್
15-12-23 07:31 pm HK News Desk ದೇಶ - ವಿದೇಶ
ಪಾಟ್ನಾ, ಡಿ 15: ವಿಚಾರಣಾಧೀನ ಕೈದಿಯೊಬ್ಬನನ್ನ ಕೋರ್ಟ್ ಆವರಣದಲ್ಲೇ ಗುಂಡಿಕ್ಕಿ ಕೊಂದಿರುವ ಘಟನೆ ಪಾಟ್ನಾದಲ್ಲಿ ನಡೆದಿದೆ.
ಪಾಟ್ನಾದ ದಾನಪುರ ಕೋರ್ಟ್ ಕ್ಯಾಂಪಸ್ನಲ್ಲಿ ಬೇರ್ ಜೈಲಿನಿಂದ ವಿಚಾರಣೆಗೆ ಕರೆತಂದಿದ್ದ ಕೈದಿಯನ್ನ ಪೊಲೀಸರ ಎದುರಲ್ಲೇ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಪ್ರಾಥಮಿಕ ಮಾಹಿತಿಯಲ್ಲಿ ಕೊಲೆಯಾದ ವ್ಯಕ್ತಿಯನ್ನ ಅಭಿಷೇಕ್ ಕುಮಾರ್ ಅಲಿಯಾಸ್ ಛೋಟೆ ಸರ್ಕಾರ್ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ.
ಛೋಟೆ ಸರ್ಕಾರ್ ಸಿಕಂದರ್ಪುರದ ನಿವಾಸಿಯಾಗಿದ್ದು ಕೊಲೆ ಪ್ರಕರಣದ ಆರೋಪ ಎದುರಿಸುತ್ತಿದ್ದ. ಆತನನ್ನು ನಗರದ ಬೇರ್ ಜೈಲಿನಲ್ಲಿ ಇರಿಸಲಾಗಿದ್ದು, ಇಂದು ಕೋರ್ಟ್ಗೆ ಹಾಜರುಪರಿಸಲು ಕರೆತರಲಾಗುತ್ತಿತ್ತು. ವಿಚಾರಣಾಧೀನ ಕೈದಿಯಾಗಿದ್ದ ಛೋಟೆ ಸರ್ಕಾರ್ನನ್ನು ದಾನಪುರ ನ್ಯಾಯಾಲಯಕ್ಕೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಇಬ್ಬರು ದುಷ್ಕರ್ಮಿಗಳು ಆತನ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸದ್ಯ ವಿಚಾರಣಾಧೀನ ಕೈದಿಯನ್ನ ಹತ್ಯೆ ಮಾಡಿದ ಇಬ್ಬರು ಆರೋಪಿಗಳನ್ನ ಬಂಧಿಸಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ. ಅವರನ್ನು ಯಾರು ಕಳುಹಿಸಿದ್ದಾರೆ, ಈ ಕೊಲೆಯ ಹಿಂದಿನ ಉದ್ದೇಶವೇನು ಅನ್ನೋ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಪಾಟ್ನಾ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಕುಮಾರ್ ತಿಳಿಸಿದ್ದಾರೆ.
ದಾಳಿಕೋರರು ಮುಜಾಫರ್ಪುರದವರು ಎಂದು ತಿಳಿದುಬಂದಿದೆ. ಘಟನಾ ಸ್ಥಳದಲ್ಲಿ ಆರೋಪಿಗಳ ಬಳಿಯಿದ್ದ 4 ಬುಲೆಟ್ ಶೆಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆದ್ರೆ ಎಷ್ಟು ಬುಲೆಟ್ಗಳನ್ನ ಹಾರಿಸಲಾಗಿದೆ ಎಂಬುದರ ಬಗ್ಗೆ ನಿಖರ ಮಾಹಿತಿ ಸಿಕ್ಕಿಲ್ಲ ಎಂದು ಹೇಳಲಾಗುತ್ತಿದೆ.
An undertrial prisoner, Abhishek alias Chhote Sarkar, was shot and killed inside the premises of the Danapur civil court in Bihar’s Patna district on Friday, police said.
23-03-25 11:01 pm
Bangalore Correspondent
Basavaraj Horatti: ಹನಿಟ್ರ್ಯಾಪ್ ಸದ್ದು ; ವಿಧಾನ...
23-03-25 09:50 pm
Honey trap, Karnataka, Rajanna: ರಾಜ್ಯ ರಾಜಕೀಯದ...
23-03-25 06:02 pm
Karnataka Bandh Live, Bangalore, Mangalore Ud...
22-03-25 12:28 pm
Koppal, Sslc Exams, Mother death: SSLC ಪರೀಕ್ಷ...
21-03-25 10:41 pm
23-03-25 02:40 pm
HK News Desk
15 ವರ್ಷದ ಹುಡುಗನಿಂದ ಗರ್ಭವತಿ ; ಹರೆಯದಲ್ಲಿ ಮಾಡಿದ...
22-03-25 09:50 pm
ದೆಹಲಿ ಹೈಕೋರ್ಟ್ ಜಡ್ಜ್ ಮನೆಯಲ್ಲಿ ಅಗಣಿತ ನಗದು ಪತ್ತ...
21-03-25 04:46 pm
Rana Daggubati, Vijay Deverakonda, Prakash Ra...
20-03-25 10:40 pm
ಹೆದ್ದಾರಿ ಬಳಕೆದಾರರಿಗೆ ಸಿಹಿಸುದ್ದಿ ; ಟೋಲ್ ಶುಲ್ಕ...
20-03-25 07:19 pm
23-03-25 10:44 pm
Mangalore Correspondent
MP Govinda Karajola, Mangalore, Honey Trap: ಸ...
22-03-25 06:48 pm
Mangalore, BJP protest, MLC Bharathi Shetty,...
22-03-25 05:45 pm
Sullia, Mangalore, Rabies death: ನಾಯಿ ಮರಿ ಕಚ್...
22-03-25 03:15 pm
Belthangady, Baby News, Mangalore: ಬೆಳ್ತಂಗಡಿ...
22-03-25 01:07 pm
23-03-25 03:56 pm
HK News Desk
Mangalore Fraud, Online, Telagram: ಟೆಲಿಗ್ರಾಂನ...
22-03-25 10:51 pm
Bangalore Fake Police, Crime: ಪಾರ್ಕ್ನಲ್ಲಿ ಜೋ...
21-03-25 12:44 pm
Mangalore, Bangalore Airport Drugs; ಮಂಗಳೂರು ಪ...
20-03-25 05:29 pm
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm